ಚಾಮರಾಜನಗರ

ಸೌಜನ್ಯತೆಯಿಂದ ಆಟೋ ಚಾಲಕರು ವರ್ತಿಸಲು ಮನವಿ

ಕ.ಪ್ರ.ವಾರ್ತೆ  ಮೈಸೂರು  ಜೂ. 2
ಆಟೋ ಚಾಲಕರು ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಪ್ರಯಾಣಿಕರು ಕರೆದ ಪ್ರದೇಶಕ್ಕೆ ಆಟೋ ಚಾಲಕರು ಹೋಗಬೇಕು ಎಂದು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಕೆ.ಪಿ. ಭೀಮಯ್ಯ ಸಲಹೆ ನೀಡಿದರು.
ಮೈಸೂರು ಆದರ್ಶ ಆಟೋರಿಕ್ಷಾ ಚಾಲಕರ ವೇದಿಕೆಯು ಬೂದುಗುಂಟೆ ಕಾಮಾಕ್ಷಮ್ಮ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಶನಿವಾರ ಆಯೋಜಿಸಿದ್ದ ನೋಟ್ಪುಸ್ತಕ ವಿತರಣೆ, ಚಾಲಕರಿಗೆ ಪರಿಸರ ಹಾಗೂ ರಸ್ತೆ ಸುರಕ್ಷೆ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಅಗತ್ಯ ದಾಖಲೆಗಳಲ್ಲಿ ಆಟೋದಲ್ಲಿ ಇರಬೇಕು. ಪರಿಸರ ಮಾಲಿನ್ಯ ಆಗದಂತೆ ಎಚ್ಚರ ವಹಿಸಬೇಕು ಎಂದರು. ಇದೇ ವೇಳೆ ಆಟೋ ಚಾಲಕರ ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕ ವಿತರಿಸಲಾಯಿತು. ಪಶ್ಚಿಮ ಆರ್ಟಿಒ ಜಿ. ಅರುಣ್ಕುಮಾರ್ಸಿಂಗ್, ಪೂರ್ವ ಆರ್ಟಿಒ ರಮೇಶ್ ದುಬೆ ಅವರು ಪರಿಸರ ಮಾಲಿನ್ಯ, ವಾಯು ಮಾಲಿನ್ಯ ತಡೆಗಟ್ಟುವ ಬಗ್ಗೆ ಆಟೋ ಚಾಲಕರಿಗೆ ಅರಿವು ಮೂಡಿಸಿದರು.
ವೇದಿಕೆಯ ಅಧ್ಯಕ್ಷ ಸರ್ದಾರ್ ಅಹಮದ್, ಪ್ರಧಾನ ಕಾರ್ಯದರ್ಶಿ ನಾಗರಾಜ ಇದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ತಂದೆಯ ರಾಜಕೀಯ ಜೀವನ ಮುಗಿಯಿತು; ಸತೀಶ್ ಜಾರಕಿಹೊಳಿ 'ಉತ್ತರಾಧಿಕಾರಿ': ಯತೀಂದ್ರ ಸಿದ್ದರಾಮಯ್ಯ ಹೇಳಿಕೆ; ಡಿಕೆಶಿ ಬಣಕ್ಕೆ ಶಾಕ್!

PoK: ಎಲ್‌ಒಸಿ ಉದ್ದಕ್ಕೂ ಭಯೋತ್ಪಾದಕ ಶಿಬಿರಗಳು, ಉಡಾವಣಾ ಪ್ಯಾಡ್‌ಗಳು ಮತ್ತೆ ತಲೆ ಎತ್ತುತ್ತಿವೆ; ಗುಪ್ತಚರ ವರದಿ

ದೀಪ ಹಚ್ಚೋಣ, ಇದು ಬೆಳಕಿನ ಅನ್ವೇಷಣೆಯೆಂಬ ಅನಂತ ಯಾನ (ತೆರೆದ ಕಿಟಕಿ)

'ಇಸ್ಲಾಂ ರಾಜಕೀಯ' ಸನಾತನ ಧರ್ಮಕ್ಕೆ ಅತ್ಯಂತ ಅಪಾಯಕಾರಿ; ಹಲಾಲ್ ಬಗ್ಗೆ ಎಚ್ಚರ: ಸಿಎಂ ಯೋಗಿ ಆದಿತ್ಯನಾಥ್

PNB ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ಗಡಿಪಾರಿಗೆ ಬೆಲ್ಜಿಯಂ ಕೋರ್ಟ್ ಅನುಮೋದನೆ; 8 ವರ್ಷ ಭಾರತ ನಡೆಸಿದ್ದ ಹೋರಾಟ ಸಫಲ!

SCROLL FOR NEXT