ಚಾಮರಾಜನಗರ

ಅಭಿವೃದ್ಧಿಗೆ ಶ್ರಮಿಸಲು ಸಲಹೆ

ಚಾಮರಾಜನಗರ: ಸರ್ಕಾರದಿಂದ ನಗರಸಭೆಗೆ ನಾಮ ನಿರ್ದೇಶನಗೊಂಡಿರುವ ಐವರು ನಗರಸಭಾ ಸದಸ್ಯರು ಪಟ್ಟಣದ ಅಭಿವೃದ್ದಿಗೆ ಶ್ರಮಿಸುವ ಜೊತೆಗೆ ಪಕ್ಷ ಸಂಘಟನೆ ಮತ್ತು ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಎ. ಜಯಸಿಂಹ ಸಲಹೆ ನೀಡಿದರು.
ನಗರದ ಸಿಂಹ ಮೂವೀಸ್ ಪ್ಯಾರಾಡೈಸ್ನಲ್ಲಿ ನಡೆದ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಮ್ಮನ್ನು ಗುರುತಿಸಿ ಪಕ್ಷ ಹಾಗೂ ಸರ್ಕಾರ ನಾಮ ನಿರ್ದೇಶನ ಮಾಡಿ ಹೆಚ್ಚಿನ ಜವಾಬ್ದಾರಿ ನೀಡಿದೆ. ಇದಕ್ಕೆ ಚ್ಯುತಿ ಬರದಂತೆ ಕರ್ತವ್ಯ ನಿರ್ವಹಿಸುವ ಜೊತೆಗೆ ಕಾಂಗ್ರೆಸ್ ಕಚೇರಿಗೆ ಆಗಮಿಸಿ ನಾಗರಿಕರ ಸಮಸ್ಯೆ ಆಲಿಸಬೇಕು ಎಂದರು.
ಇದೇ ವೇಳೆ ನಾಮನಿರ್ದೇಶನಗೊಂಡ ಸೈಯನ್ ಡಿ ಸಿಲ್ವ, ಶಾಂತಲಾ, ಸಿ.ಕೆ. ಮಂಜುನಾಥ್, ಕುಮಾರಸ್ವಾಮಿ, ಸೋಯಲ್ ಅಹಮದ್ ಅವರಿಗೆ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಪಿ.ಸದಾಶಿವಮೂರ್ತಿ, ಬ್ಲಾಕ್ ಅಧ್ಯಕ್ಷರಾದ ಬಿ.ಕೆ. ರವಿಕುಮಾರ್, ಸೈಯದ್ರಫಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರತ್ನಮ್ಮ, ಯುವ ಕಾಂಗ್ರೆಸ್ ಅಧ್ಯಕ್ಷ ಅರುಣ್, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್, ಪದ್ಮಾ ಪುರುಷೋತ್ತಮ್, ಆಶಾ, ಪ್ರಸಾದ್ ಇತರರು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿಗೆ ಆಘಾತ! ಉಪಸಭಾಪತಿ ಎಂ.ಕೆ. ಪ್ರಾಣೇಶ್ ಆಯ್ಕೆ ಅಸಿಂಧು; ಮರು ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ವಿಜಯಭೇರಿ

ಕಾವೇರಿ ಜಲ ವಿವಾದ: ತಮಿಳುನಾಡು CM Vijay ಭೇಟಿಗೆ ಬ್ರೇಕ್! ಎಲ್ಲ ಅಂಕಿ-ಅಂಶ ನ್ಯಾಯಾಲಯದಲ್ಲಿದೆ, ಮೇಲ್ಮನವಿ ಸಲ್ಲಿಸಿದ್ದೇವೆ; Video

ಬೆಳ್ಳಂಬೆಳಗ್ಗೆ ಉದ್ಯಮಿಗೆ ಗುಂಡಿಕ್ಕಿ ಹತ್ಯೆ; ಬೆಚ್ಚಿಬಿದ್ದ ಕುಂದಾಪುರ

'ನೀವೇನ್ ಬಿಜೆಪಿಯವ್ರಾ?'; ಪತ್ರಕರ್ತನ ಪ್ರಶ್ನೆಗೆ ರಾಹುಲ್ ಗಾಂಧಿ ಗರಂ, ಇಷ್ಟಕ್ಕೂ ಆಗಿದ್ದೇನು? Video

'ಮೋದಿ ರಾಜೀನಾಮೆ ಕೇಳಲು ನಿನಗೆಷ್ಟು ಧೈರ್ಯ'?: ಬೆಂಗಳೂರಿನಲ್ಲಿ ನೀಟ್ ಪ್ರತಿಭಟನಾಕಾರನ ಮೇಲೆ ಭೀಕರ ಹಲ್ಲೆ; FIR ದಾಖಲು