ಚಾಮರಾಜನಗರ

ಪರಿಶಿಷ್ಟ ಪಂಗಡ ವಿವಿಧೋದ್ದೇಶ ಸಂಘಕ್ಕೆ ಅನುದಾನಕ್ಕಾಗಿ ಮನವಿ

ಚಾಮರಾಜನಗರ: ಜಿಲ್ಲಾ ಪರಿಶಿಷ್ಟ ಪಂಗಡದ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಹೆಚ್ಚಿನ ಅನುದಾನ ನೀಡಬೇಕೆಂದು ಒತ್ತಾಯಿಸಿ ಸಂಘದ ಅಧ್ಯಕ್ಷ ಮಹದೇವನಾಯಕ ಹಾಗೂ ಮತ್ತಿತರರು ಉಸ್ತುವಾರಿ ಸಚಿವ ಮಹದೇವಪ್ರಸಾದ್ ಹಾಗೂ ಸಂಸದ ಧ್ರುವನಾರಾಯಣ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.ಸಚಿವ ಮಹದೇವಪ್ರಸಾದ್ ನಿವಾಸದಲ್ಲಿ ಭೇಟಿ ಮಾಡಿ, ಮನವಿ ಸಲ್ಲಿಸಿ ಮಾತನಾಡಿದ ಸಂಘದ ಅಧ್ಯಕ್ಷ ಮಹದೇವನಾಯಕ, ಆರ್ಥಿಕವಾಗಿ ಹಿಂದುಳಿದಿದಿರುವ ಎಲ್ಲಾ ಜನಾಂಗದವರ ಆರ್ಥಿಕ ಮಟ್ಟ ಸುಧಾರಿಸುವ ಸಲುವಾಗಿ ಸಂಘಕ್ಕೆ ಈಗಾಗಲೇ ಸುಮಾರು ರು.25ಲಕ್ಷ ಸಾಲ ನೀಡಲಾಗಿದೆ. ಇನ್ನೂ ಹೆಚ್ಚಿನ ಅನುದಾನ ನೀಡುವ ಜೊತೆಗೆ ಸಂಘವು ಉನ್ನತ ಮಟ್ಟಕ್ಕೆ ಬೆಳೆಯಲು ಸಹಕರಿಸಬೇಕೆಂದು ಮನವಿ ಮಾಡಿದರು.ಅನುದಾನ ಬಿಡುಗಡೆ ಮಾಡಿಸಿಕೊಡುವ ಭರವಸೆ ನೀಡಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ನೀಡಿದರು.ಸಂಘದ ಉಪಾಧ್ಯಕ್ಷ ವೆಂಕಟರಮಣ ನಾಯಕ, ನಿರ್ದೇಶಕರಾದ ಆನಂದ್, ಎನ್.ರವಿಕುಮಾರ್, ಸ್ವಾಮಿ ನಾಯಕ್, ಸಿ.ವಿ.ಮಹೇಶ್, ಬಂಗಾರಸ್ವಾಮಿ, ರಾಜು, ವೆಂಕಟಲಕ್ಷ್ಮಿ, ಕಾರ್ಯದರ್ಶಿ ಎನ್.ರಾಘವೇಂದ್ರ ಇದ್ದರು.ಕೊಳವೆ ಬಾವಿ ಮುಚ್ಚಲು ಆಗ್ರಹ
ಹನೂರು: ಹನೂರು ವ್ಯಾಪ್ತಿಯ ಬೂದುಬಾಳು ಗ್ರಾಮದ ಶಾಲೆ ಎದುರು ಇರುವ ಕೊಳವೆ ಬಾವಿಗಳನ್ನು ಮುಚ್ಚುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಬೂದುಬಾಳು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 1 ರಿಂದ 7 ನೇ ತರಗತಿಯವರೆಗೆ 75 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಶಾಲೆಯ ಪಕ್ಕದಲ್ಲಿಯೇ ಹ್ಯಾಂಡ್ ಪಂಪ್ವೊಂದನ್ನು ದುರಸ್ತಿಗಾಗಿ ಬಿಚ್ಚಿಕೊಂಡು ಹೋಗಿದ್ದು, ಮೇಲ್ಭಾಗದ ಮುಚ್ಚಳ ಹಾಕದೆ ಹಾಗೇ ಬಿಟ್ಟಿದ್ದಾರೆ.ಶಾಲೆಯ ಎದುರು ಕೆರೆ ಸಮೀಪದಲ್ಲಿ ಕುಡಿಯುವ ನೀರಿಗಾಗಿ ಬೋರ್ವೆಲ್ ಕೊರೆಸಲಾಗಿತ್ತು. ಅಲ್ಲಿಯೂ ಬೋರ್ವೆಲ್ ಮುಚ್ಚದೇ ಹಾಗೆಯೇ ಬಿಟ್ಟಿದ್ದಾರೆ.ಈ ನಿಟ್ಟಿನಲ್ಲಿ ಅನಾಹುತ ಸಂಭವಿಸುವ ಮುನ್ನ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉತ್ತರ ಭಾರತದಾದ್ಯಂತ ಶೂನ್ಯ ಗೋಚರತೆ; ದೆಹಲಿಗೆ ರೆಡ್ ಅಲರ್ಟ್ ಘೋಷಿಸಿದ IMD

ಗುಂಡೇಟಿಗೆ ವಿದ್ಯಾರ್ಥಿ ನಾಯಕ ಉಸ್ಮಾನ್ ಹಾದಿ ಬಲಿ: ಬಾಂಗ್ಲಾದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ, ಅವಾಮಿ ಲೀಗ್ ಪಕ್ಷದ ಕಚೇರಿಗೆ ಬೆಂಕಿ ಹಚ್ಚಿ ಆಕ್ರೋಶ

MUDA ಹಗರಣ: ಕೇಸ್‌ ಡೈರಿ ಸಲ್ಲಿಸುವಂತೆ ಲೋಕಾಯುಕ್ತ ಅಧಿಕಾರಿಗಳಿಗೆ ಕೋರ್ಟ್ ಸೂಚನೆ..!

ಕರ್ನಾಟಕ ಕಾನೂನು ವಿವಿಯಲ್ಲಿ ಸಿಬ್ಬಂದಿ ಕೊರತೆ ಪರಿಹರಿಸಲು ನಾಲ್ವರು ಸದಸ್ಯರ ಸಮಿತಿ ರಚನೆ

ಜನೌಷಧಿ ಕೇಂದ್ರ ಮುಚ್ಚುವ ಆದೇಶ ರದ್ದು: ಸಾರ್ವಜನಿಕ ಹಿತಾಸಕ್ತಿಗಳಲ್ಲಿ ರಾಜಕೀಯ ಸರಿಯಲ್ಲ: ಸರ್ಕಾರಕ್ಕೆ ಹೈಕೋರ್ಟ್‌ ಕಿವಿಮಾತು

SCROLL FOR NEXT