ಚಾಮರಾಜನಗರ

ಸಿಎಂಗೆ ಬೆಳ್ಳಿ ಕಿರೀಟ, ಖಡ್ಗ ನೀಡಿ ಸನ್ಮಾನ

ಬನ್ನೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬುಧವಾರ ಬನ್ನೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುರಸಭಾ ವತಿಯಿಂದ ಪೌರ ಸನ್ಮಾನ ಮಾಡಿ, ಬೆಳ್ಳಿ ಕಿರೀಟ ತೊಡಿಸಲಾಯಿತು. ಲೋಕೋಪಯೋಗಿ ಇಲಾಖೆ ವತಿಯಿಂದ ಬೆಳ್ಳಿ ಖಡ್ಗ ನೀಡಿ ಅಭಿನಂದಿಸಲಾಯಿತು.
ಬನ್ನೂರು ಪುರಸಭೆಗೆ 2045 ರವರೆಗೆ 22.25 ಕೋಟಿ ವೆಚ್ಚದಲ್ಲಿ 24್ಢ7 ಕುಡಿಯುವ ನೀರಿನ ವ್ಯವಸ್ಥೆಗೆ ಮಂಜೂರಾತಿ, ಹೋಬಳಿ ಮಟ್ಟದಲ್ಲಿ ರಾಜ್ಯದಲ್ಲಿಯೇ ಪ್ರಥಮವಾಗಿ 50 ಲಕ್ಷ ವೆಚ್ಚದಲ್ಲಿ ಆಧುನಿಕ ಕಸಾಯಿಖಾನೆ ನಿರ್ಮಾಣ ಮಾಡಿಕೊಟ್ಟಿದ್ದಕ್ಕಾಗಿ ಪುರಸಭೆ ವತಿಯಿಂದ ಪೌರ ಸನ್ಮಾನ ಮಾಡಲಾಯಿತು.
ಮೈಸೂರು- ಮಳವಳ್ಳಿ ರಸ್ತೆಯ ಅಭಿವೃದ್ಧಿ ಬಹುವರ್ಷಗಳ ಬೇಡಿಕೆಯಾಗಿತ್ತು. ಎಫ್ಕೆಸಿಸಿಐ ಜಿಲ್ಲಾ ಸಮನ್ವಯ ಸಮಿತಿ ಇದಕ್ಕಾಗಿ ಒತ್ತಡ ಹೇರುತ್ತಲೇ ಇತ್ತು. ಇದಕ್ಕೆ ಸ್ವಂದಿಸಿ, ಮಜೂರಾತಿ ದೊರಕಿಸಿಕೊಟ್ಟಿದ್ದಕ್ಕಾಗಿ ಲೋಕೋಪಯೋಗಿ ಇಲಾಖೆ ವತಿಯಿಂದ ಸನ್ಮಾನಿಸಲಾಯಿತು.
- ಕೊರಟಗೆರೆ- ಬಾವಲಿ ರಾಜ್ಯ ಹೆದ್ದಾರಿ- 33ರ ಕಿ.ಮೀ. 154.77 ರಿಂದ 166 ರವರೆಗಿನ ರಸ್ತೆ ಅಭಿವೃದ್ಧಿ, ಬನ್ನೂರು ಪಟ್ಟಣ ವ್ಯಾಪ್ತಿಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕೇಂದ್ರ ರಸ್ತೆ ನಿಧಿ ಹಾಗೂ ರಾಜ್ಯ ಅನುದಾನದಡಿ 59.50 ಕೋಟಿಗಳಲ್ಲಿ ಕೈಗೊಳ್ಳಲಾಗಿದೆ.
- ಲೋಕೋಪಯೋಗಿ ಇಲಾಖೆಯಿಂದ ಕೊರಟಗೆರೆ- ಬಾವಲಿ ರಾಜ್ಯ ಹೆದ್ದಾರಿ- 33ರ  ಸರಪಳಿ 163-67 ರಿಂದ 180-97 ಕಿ.ಮೀ.ವರಗೆ 22.50 ಕೋಟಿ ಕಾಮಗಾರಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮದ್ದೂರಿನಲ್ಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲಾಠಿಚಾರ್ಜ್; 21 ಮಂದಿ ಬಂಧನ; ಪೊಲೀಸರಿಗೆ ಸಿಎಂ ಖಡಕ್ ಸೂಚನೆ

Mehul Choksi ಹಸ್ತಾಂತರಿಸಿದರೆ, ಮುಂಬೈ ಜೈಲಿನಲ್ಲಿ ವೈದ್ಯಕೀಯ ಆರೈಕೆ, ಹಾಸಿಗೆ, ವೈಯಕ್ತಿಕ ಸ್ಥಳಾವಕಾಶ ವ್ಯವಸ್ಥೆ: ಬೆಲ್ಜಿಯಂಗೆ ಭಾರತ ಭರವಸೆ!

Ramayana: ಸೀತಾ ಪಾತ್ರಕ್ಕೆ Miss Universe India 2025 'ಮಣಿಕಾ' ಆಯ್ಕೆ!

ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ, ನಾಲ್ವರು ಹೋಂಗಾರ್ಡ್​ ಸೇರಿ 8 ಮಂದಿ ಗಾಯ,ಸೆಕ್ಷನ್ 144 ಜಾರಿ

ಜಿಎಸ್‌ಟಿ ಕಡಿತ: ಕಾರು ಪ್ರಿಯರಿಗೆ ಬಂಪರ್, Hyundai India ಬೆಲೆಯಲ್ಲಿ ಭಾರಿ ಇಳಿಕೆ! ಎಷ್ಟು ಅಗ್ಗ ಗೊತ್ತಾ?

SCROLL FOR NEXT