ಚಿಕ್ಕಮಗಳೂರು

ಕಲ್ಲು ಗಣಿಗಾರಿಕೆ ಸ್ಥಗಿತಕ್ಕೆ ಆಗ್ರಹ

ಚಿಕ್ಕಮಗಳೂರು: ತಾಲೂಕಿನ ಈಶ್ವರಹಳ್ಳಿಯಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯನ್ನು ಕೂಡಲೇ ನಿಲ್ಲಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.
ಕರವೇ ಜಿಲ್ಲಾ ಅಧ್ಯಕ್ಷ ತೇಗೂರು ಜಗದೀಶ್ ನೇತೃತ್ವದಲ್ಲಿ ಕಾರ್ಯಕರ್ತರು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
ಈಶ್ವರಹಳ್ಳಿಯ ಸರ್ವೆ ನಂಬರ್ 280, 256 ರಲ್ಲಿ 216 ಎಕರೆ ಗೋಮಾಳ ಜಾಗ ಇದ್ದು, ಇದರಲ್ಲಿ 10 ವರ್ಷಗಳ ಹಿಂದೆ 8 ಎಕರೆ ಭೂಮಿಯಲ್ಲಿ ಕಲ್ಲು ಗಣಿಗಾರಿಕೆ ನಡೆಸಲು ಅನುಮತಿ ನೀಡಲಾಗಿತ್ತು. ಕಳಸಾಪುರ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಮಳೆ ಬಾರದೆ ಜನರು ಕಂಗಾಲಾಗಿದ್ದಾರೆ.
ಈ ಪ್ರದೇಶದಲ್ಲಿ 8 ಎಕರೆಯಲ್ಲಿ ಕಲ್ಲು ಗಣಿಗಾರಿಕೆ ನಡೆಸಲು ಅನುಮತಿ ಪಡೆದು, 70 ಎಕರೆ ಭೂಮಿಯಲ್ಲಿ ಕಲ್ಲು ಗಣಿಗಾರಿಕೆ ನಡೆಸಿ ಸರ್ಕಾರಕ್ಕೆ ಕೋಟ್ಯಂತರ ರುಪಾಯಿ ವಂಚಿಸಲಾಗುತ್ತಿದೆ. ಇಲ್ಲಿ ನಡೆಯುತ್ತಿರು ಕಲ್ಲು ಗಣಿಗಾರಿಕೆಯನ್ನು ಕೂಡಲೇ ನಿಲ್ಲಿಸಬೇಕು. ಇಲ್ಲದೆ ಹೋದರೆ ಕರವೇಯಿಂದ ಗಣಿಗಾರಿಕೆ ನಿಲ್ಲಿಸುವ ಕೆಲಸವನ್ನು ಮಾಡಬೇಕಾಗುತ್ತದೆ. ಆ ಸಂದರ್ಭದಲ್ಲಿ ಆಗುವ ಅನಾಹುತಗಳಿಗೆ ಜಿಲ್ಲಾಡಳಿತವೇ ಹೊಣೆ ಹೊರಬೇಕಾಗುತ್ತದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕರವೇ ಮುಖಂಡ ಪಂಚಾಕ್ಷರಿ, ವಸಂತಕುಮಾರ್, ಕೆಂಪನಹಳ್ಳಿ ಅಶೋಕ್ ಹಾಗೂ ಕಾರ್ಯಕರ್ತರು ಇದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT