ಚಿತ್ರದುರ್ಗ

ಕಾಂಪೌಂಡ್ ತೆರವಿಗೆ ಆದೇಶ

ಹಿರಿಯೂರು: ಸಾರ್ವಜನಿಕ ದೂರಿನ ಮೇರೆಗೆ ಪಟ್ಟಣದ 16 ನೇ ವಾರ್ಡ್ ನಿವಾಸಿ ಹಬೀಬ್ ಖಾನ್ ಎಂಬುವರು ಬೈಪಾಸ್ ರಸ್ತೆಗೆ ಹೊಂದಿಕೊಂಡಂತೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಕಂಪೌಂಡ್ ತೆರವುಗೊಳಿಸುವಂತೆ ಪುರಸಭಾಧ್ಯಕ್ಷ ಜಬೀವುಲ್ಲಾ ಆದೇಶಿಸಿದ್ದಾರೆ.
ಪಟ್ಟಣದ  ಭಾರತ್ ಸಾಮಿಲ್ ಮಾಲಿಕ ಹಬೀಬ್ ಖಾನ್ ಹೆಸರಿನ ನಿವೇಶನವು ಉತ್ತರ ದಕ್ಷಿಣವಾಗಿ 42 ಮೀಟರ್ ಮಾತ್ರ ಇದ್ದರೂ ಅದನ್ನು 54  ಮೀಟರ್‌ವರೆಗೆ ವಿಸ್ತರಿಸಿ ಕೌಂಪೌಂಡ್ ನಿರ್ಮಿಸಿದ್ದರ ಹಿನ್ನೆಲೆಯಲ್ಲಿ ಈ ಕ್ರಮ ಜರುಗಿಸಲಾಗಿದೆ ಎಂದು ಪುರಸಭಾಧ್ಯಕ್ಷರು ತಿಳಿಸಿದ್ದಾರೆ. ಈ ಕೌಂಪೌಂಡ್ ನಿರ್ಮಾಣ ಸಂದರ್ಭದಲ್ಲಿ ಪುರಸಭೆಯನ್ನು ವಂಚಿಸಿರುವುದು ತನಿಖೆಯಿಂದ ಧೃಡ ಪಟ್ಟ ಕಾರಣಕ್ಕೆ ಪುರಸಭೆಯ ಸಿಬ್ಬಂದಿ ಮತ್ತು ಉಪಾಧ್ಯಕ್ಷ ಆರ್.ರವಿಚಂದ್ರ ನಾಯ್ಕ ಸ್ಥಳಕ್ಕೆ ತೆರಳಿ ಕೌಂಪೌಂಡ್ ಗೋಡೆ ವೀಕ್ಷಿಸಿದರು.  ಉಪಾಧ್ಯಕ್ಷ ಆರ್.ರವಿಚಂದ್ರ ನಾಯ್ಕ ಮಾತನಾಡಿ, ಸಾರ್ವಜನಿಕ ಆಸ್ತಿಗಳನ್ನು ದುರುಪಯೋಗ ಮಾಡಿಕೊಳ್ಳುವುದರ ವಿರುದ್ಧ ಪುರಸಭೆಯು ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಂದಾಗಿದೆ. ಸ್ಥಳೀಯ ನಿವಾಸಿಗಳ ದೂರಿನ ಮೇರೆಗೆ ಈ ಸಮಸ್ಯೆಗೆ ಇಂದು ಪರಿಹಾರ ಕಲ್ಪಿಸಲಾಗುತ್ತಿದೆ ಎಂದರು. ಇಂಥ ಪ್ರಕರಣಗಳು ಪಟ್ಟಣದ ವ್ಯಾಪ್ತಿಯಲ್ಲಿ ಎಲ್ಲೇ ಕಂಡು ಬಂದರೂ ಕೂಡಲೇ ಪುರಸಭೆಯನ್ನು ಸಂಪರ್ಕಿಸಿ ಮಾಹಿತಿ ನೀಡಬೇಕೆಂದು ಸಾರ್ವಜನಿಕರನ್ನು ಮನವಿ ಮಾಡುವುದಾಗಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT