ಚಿತ್ರದುರ್ಗ

ಸಾವಯವ ಕೃಷಿಗೆ ರೈತರು ಮುಂದಾಗಿ

ಶ್ರೀರಾಂಪುರ: ಕೃಷಿಗೆ ಹೆಚ್ಚಿನ ರಾಸಾಯನಿಕ ಗೊಬ್ಬರ ಹಾಗೂ ಕೀಟನಾಶಕ ಬಳಕೆಯಿಂದ ಭೂಮಿ ಫಲವತ್ತತೆ ಕಳೆದುಕೊಳ್ಳುತ್ತಿದ್ದು, ರೈತ ಸ್ನೇಹಿಯಾದ  ಸಾವಯವ ಕೃಷಿಗೆ ರೈತರು ಮುಂದಾಗಬೇಕು ಎಂದು ಕುರುಬರಹಳ್ಳಿ ತಾಪಂ ಸದಸ್ಯೆ ಮಮತಾ ತಿಳಿಸಿದರು.
ಸಮೀಪದ ಮಲ್ಲಿಹಳ್ಳಿ ಗ್ರಾಮದಲ್ಲಿ ಸಾವಯವ ಭಾಗ್ಯ ಯೋಜನೆಯಡಿ ರೈತರಿಗೆ ಕೃಷಿ ಇಲಾಖೆಯಿಂದ ಉಚಿತವಾಗಿ ಹೊಂಗೆ ಸಸಿಗಳನ್ನು ವಿತರಿಸಿ ಮಾತನಾಡಿದರು.
ಆಹಾರ ಕ್ರಾಂತಿ ನೆಪದಲ್ಲಿ ಅತಿಯಾದ ರಾಸಾಯನಿಕ ಹಾಗೂ ಕೀಟನಾಶಕಗಳ ಬಳಕೆಯಿಂದ ನಾವು ಬಳಸುವ ಆಹಾರ ಪದಾರ್ಥಗಳು ವಿಷಕಾರಿಯಾಗಿ ಅನಾರೋಗ್ಯ, ಅಪೌಷ್ಟಿಕತೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಾವಯವ ಕೃಷಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ರೈತರು ಇದರ ಸದುಪಯೋಗ ಪಡೆಯಬೇಕು ಎಂದು ಹೇಳಿದರು. ಕೃಷಿ ಇಲಾಖೆ ಕ್ಷೇತ್ರಾಧಿಕಾರಿ ಗಿರೀಶ್ ಮಾತನಾಡಿ, ರೈತರಲ್ಲಿ ಹಸಿರೆಲೆ ಗೊಬ್ಬರ ತಯಾರಿಕೆಗೆ ಉತ್ತೇಜಿಸುವ ಸಲುವಾಗಿ ಹೊಂಗೆ ಸಸಿಗಳನ್ನು ರೈತರಿಗೆ ಉಚಿತವಾಗಿ ವಿತರಿಸಲಾಗುತ್ತಿದೆ. ಅಲ್ಲದೆ ಕೃಷಿ ಇಲಾಖೆಯಲ್ಲಿ ಸಿಗುವ ಜೈವಿಕ ಗೊಬ್ಬರಗಳನ್ನು ಹೆಚ್ಚಾಗಿ ಬಳಸುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಸಹಾಯಕ ಭದ್ರೇಶ್, ಸಾವಯವ ಸಮಿತಿ ಅಧ್ಯಕ್ಷ ಮೈಲಾರಪ್ಪ, ಸದಸ್ಯರಾದ ಪ್ರಭಯ್ಯ, ನಾಗರಾಜು, ಅನುವುಗಾರ ಜಯಣ್ಣ ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT