ಚಿತ್ರದುರ್ಗ

ಕ್ರೀಡಾ ಚಟುವಟಿಕೆಗಳಿಂದ ಶಾಲೆ, ಗ್ರಾಮದ ಗೌರವ ಹೆಚ್ಚಳ

ಚಳ್ಳಕೆರೆ: ಕ್ರೀಡೆಗಳು ಸಹ ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸಲಬಲ್ಲವು. ಶಿಕ್ಷಣ ಕ್ಷೇತ್ರದ ಒಂದು ಅವಿಭಾಜ್ಯ ಅಂಗವಾಗಿ ಕ್ರೀಡಾ ಕ್ಷೇತ್ರ ಬೆಳೆಯುತ್ತಿದೆ. ಗ್ರಾಮೀಣ ಭಾಗಗಳಲ್ಲಿ ಇಂದಿಗೂ ಸಹ ಎಲ್ಲಾ ರೀತಿಯ ಕ್ರೀಡೆಗಳನ್ನು  ಕಾಣಬಹುದಾಗಿದೆ. ಕ್ರೀಡೆಯಲ್ಲಿ ಸಾದನೆ ಮಾಡುವವರು ಶಾಲೆಯ ಮತ್ತು ಗ್ರಾಮದ ಗೌರವ ಹೆಚ್ಚಿಸುತ್ತಾರೆ. ಈ ನಿಟ್ಟಿನಲ್ಲಿ ಕ್ರೀಡೆಗಳಿಗೆ ಹೆಚ್ಚಿನ ಉತ್ತೇಜನ ನೀಡುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಪುರಸಭಾ ಅಧ್ಯಕ್ಷ ಎಂ. ಮಂಜುನಾಥ್ ತಿಳಿಸಿದರು.
ಅವರು ಇಲ್ಲಿನ ಬಿಎಂ ಸರ್ಕಾರಿ ಪ್ರೌಢಶಾಲೆ ಮೈದಾನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ ಕಸಬಾ ಹೋಬಳಿ ಮಟ್ಟದ ಕ್ರೀಡಾ ಕೂಟವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಕ್ರೀಡೆಗಳಿಂದ ಶಾರೀರಿಕ ಬೆಳವಣಿಗೆ ಉತ್ತಮಗೊಂಡು ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ರಾಜಣ್ಣ ಮಾತನಾಡಿ, ಇಂದು ಏರ್ಪಡಿಸಿರುವ ಕಸಬಾ ಮಟ್ಟದ ಕ್ರೀಡಾ ಕೂಟದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ. ಕ್ರೀಡಾಪಟುಗಳು ಗುಣಾತ್ಮಕ ಕ್ರೀಡೆಯತ್ತ ಹೆಚ್ಚು ಒತ್ತು ನೀಡಬೇಕೆಂದರು.
ಕ್ಷೇತ್ರ ಸಮನ್ವಯಾಧಿಕಾರಿ ಆರ್. ಹನುಮಂತರಾಯ, ಬಿಎಂ.ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಸಂಪತ್ ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಆರ್. ಮಾರುತೇಶ್, ತಾಲೂಕು ಶಿಕ್ಷಕ ಸಂಘದ ಅಧ್ಯಕ್ಷೆ ಸಣ್ಣ ಸೂರಮ್ಮ, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಮಾರಣ್ಣ, ಸೂರನಾಯಕ, ಸಿ.ಟಿ. ವೀರೆಶ್, ದೈಹಿಕ ಶಿಕ್ಷಕರಾದ ಎಸ್. ತಿಪ್ಪೇಸ್ವಾಮಿ, ಘಟಪ್ಪ, ಶ್ರೀನಿವಾಸ್ ಮುಂತಾದವರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT