ಚಿತ್ರದುರ್ಗ

ಬಡವರಿಗೆ ಸಹಾಯ ನಿಜ ಪೂಜೆ

ಭರಮಸಾಗರ: ಬಡವರ ಬಗ್ಗೆ ಕಾಳಜಿ ಇಲ್ಲದವರ ದೇವಪೂಜೆ ಕಾಟಾಚಾರದಿಂದ ಕೂಡಿರುತ್ತದೆ. ಅಂತಃಕರಣದಿಂದ ಕೂಡಿದ ಪೂಜೆಯೇ ನಿಜವಾದ ಪೂಜೆ. ಕಷ್ಟದಲ್ಲಿದ್ದವರಿಗೆ ಸಹಾಯ ಮಾಡುವುದೇ ನಿಜವಾದ ಪೂಜೆ. ಅಂತೆಯೇ ಬಡವರಿಗೆ ಸಹಾಯ ಮಾಡಿರಿ ಎಂದು ಸಾಣೇಹಳ್ಳಿ ಡಾ. ಪಂಡಿತಾರಾಧ್ಯ ಶ್ರೀಗಳು ಕರೆ ನೀಡಿದರು.
ಸಮೀಪದ ಕೊಳಹಾಳು ಗ್ರಾಮದಲ್ಲಿ ಶಿವಾನುಭವ ಸಮಿತಿ ಆಯೋಜಿಸಿದ್ದ ಶ್ರಾವಣ ಸಂಜೆ, ಶರಣ ಶರಣೆಯರ ತಾತ್ವಿಕ ಚಿಂತನಗೋಷ್ಠಿ ಸಾನ್ನಿಧ್ಯ ವಹಿಸಿ ಪ್ರವಚನ ನೀಡಿದರು.
ಇಷ್ಟಲಿಂಗ ಪೂಜೆ ಎಂಬುದು ಅರಿವಿನ ಪೂಜೆ. ನಮ್ಮೊಳಗಿನ ಅರಿವೇ ಗುರು. ಆ ಗುರುವೇ ದೇವರು. ಇಷ್ಟಲಿಂಗವೆಂಬುದು ಆ ಅರಿವಿನ ಕುರುಹು ಮಾತ್ರ. ಇಷ್ಟಲಿಂಗ ಪೂಜಕ ಆ ಕುರುಹನ್ನು ಹಿಡಿದು ತಮ್ಮೊಳಗಿನ ಘನದ ಪೂಜೆಯನ್ನು ಮಾಡಬೇಕಾಗುತ್ತದೆ ಎಂದರು.
ಹಿರಿಯೂರು ಪ್ರ.ದ. ಕಾಲೇಜು ಪ್ರಾಧ್ಯಾಪಕ ಶಿವಲಿಂಗಪ್ಪ ವಿಷಯ ಮಂಡನೆ ಮಾಡಿ, ಸಮಾಜದ ಒಳಿತಿಗಾಗಿ ಟೀಕಾಪ್ರಹಾರದ ವಚನಗಳ ಮೂಲಕ ಶಿವಶರಣ ಅಂಬಿಗರ ಚೌಡಯ್ಯ ಕಾಯಕ ದಾಸೋಹ ಜೀವಿಯಾಗಿದ್ದರೆಂದು ತಿಳಿಯುತ್ತದೆ ಎಂದು ವಿಷಯ ಮಂಡಿಸಿದರು.
ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಮಾತನಾಡಿ, ಬಸವಾದಿ ಶಿವಶರಣರ ವಚನಗಳು ಸರ್ವಕಾಲಕ್ಕೂ ಸಿದ್ಧೌಷಧವಾಗಿವೆ. ಸಾಮಾಜಿಕ ಪಿಡುಗುಗಳ ನಿರ್ಮೂಲನೆಗಾಗಿ ಬಸವಣ್ಣ ಅವರು ಹೇಳಿದ ಸಪ್ತಸ್ತೋತ್ರದ ವಚನಗಳು ಪಾಲಿಸಬೇಕಾಗಿದೆ. ವೈಜ್ಞಾನಿಕ ಪ್ರಜ್ಞೆ ಬಿತ್ತಿದ ವಿಶ್ವ ಕುಟುಂಬ ಬಸವಣ್ಣ ಪ್ರಮುಖರಾಗಿದ್ದರು ಎಂದರು. ಎಸ್‌ಎಸ್‌ಎಲ್‌ಸಿ, ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೆದ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಸಾಣೇಹಳ್ಳಿ ಶಿವ ಸಂಚಾರ ತಂಡದವರಿಂದ ವಚನ ಗೀತೆ ಗಾಯನ ಏರ್ಪಡಿಸಲಾಗಿತ್ತು.  
ಆರ್.ಜಿ.ಬಿ. (ಇಪ್ಕೋ) ಎಚ್.ಎಂ. ಮಂಜುನಾಥಪ್ಪ, ತಾಪಂ ಅಧ್ಯಕ್ಷ ಎನ್.ಟಿ. ರಾಜ್‌ಮಾರ್, ಉಪಾಧ್ಯಕ್ಷ ರಂಗಮ್ಮ, ಮುಖಂಡರಾದ, ವೀರಭದ್ರಪ್ಪ, ಮೌನೇಶ್,  ಶೈಲೇಶ್, ಕರಿಬಸಪ್ಪ, ಗ್ರಾಪಂ ಅಧ್ಯಕ್ಷ ಗೋಣಿ ಬಸಪ್ಪ, ಟಿಎಪಿಸಿಎಂಎಸ್ ಅಧ್ಯಕ್ಷ ಎಚ್.ಎನ್. ಹನುಮಂತಪ್ಪ, ಇತರರು ಇದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

4 ವರ್ಷಗಳಲ್ಲಿ ಮೊದಲ ಬಾರಿಗೆ ಖಜಾನೆ ಎಕ್ಸ್ಪೋಷರ್ ಕಡಿತಗೊಳಿಸಿದ ಆರ್‌ಬಿಐ

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ, ನೊಬೆಲ್​ ಶಾಂತಿ ಪ್ರಶಸ್ತಿಗೆ ನನ್ನಷ್ಟು ಅರ್ಹರು ಯಾರೂ ಇಲ್ಲ; ಡೊನಾಲ್ಡ್ ಟ್ರಂಪ್

WPL 2026: 4 ಓವರ್, 1 ಮೇಡನ್.. ಸೌಂದರ್ಯ ಅಷ್ಟೇ ಅಲ್ಲ.. ಪ್ರದರ್ಶನದಲ್ಲೂ ಟಾಪ್.. RCBಯ ಲೇಡಿ ಹೇಜಲ್ವುಡ್ Lauren Bell!

ಡಿ-ಕೋಡ್: ದ್ವೇಷ ಭಾಷಣ ಮಸೂದೆ ಎಂಬ ‘ಗರಗಸ’; DDT ಆಗುವತ್ತ ಕರ್ನಾಟಕ ಸರ್ಕಾರ

SCROLL FOR NEXT