ದಕ್ಷಿಣ ಕನ್ನಡ

ಹೆದ್ದಾರಿಯಲ್ಲಿ ಟ್ಯಾಂಕರ್ ಚಾಲಕನ ದರೋಡೆ

ಉಪ್ಪಿನಂಗಡಿ: ರಾ.ಹೆ. 75ರ ಹೆದ್ದಾರಿಯ ಉದನೆ ಎಂಬಲ್ಲಿ ಭಾನುವಾರ ಬೆಳಗಿನ ಜಾವ ಹೆದ್ದಾರಿ ಬದಿ ನಿಲ್ಲಿಸಲಾಗಿದ್ದ ಟ್ಯಾಂಕರ್ ಚಾಲಕನ ಮೇಲೆ ಹಲ್ಲೆ ನಡೆಸಿದ ದರೋಡೆಕೋರರ ತಂಡ ಬೆಲೆಬಾಳುವ ಸೊತ್ತುಗಳನ್ನು ದೋಚಿದ ಘಟನೆ ನಡೆದಿದೆ.ನೂಜಿಬಾಳ್ತಿಲ ಗ್ರಾಮದ ಬಳ್ಳಕ್ಕ ಮನೆ ನಿವಾಸಿಯಾಗಿರುವ ದಾಮೋದರ (45) ಎಂಬವರು ಅನಿಲ ಟ್ಯಾಂಕರ್ ಚಾಲಕರಾಗಿದ್ದು, ಮಂಗಳೂರಿನಿಂದ ಮೈಸೂರಿಗೆ ಅನಿಲ ಸಾಗಾಟದ ಕಾರ್ಯ ನಿರತರಾಗಿದ್ದಾಗ ರಾತ್ರಿ ವೇಳೆ ಊಟ ಮುಗಿಸಿ, ಉದನೆಯ ಸಂತ ಅಂತೋನಿ ಚರ್ಚ್ ಸಮೀಪ ಹೆದ್ದಾರಿ ಬದಿ ಟ್ಯಾಂಕರ್ ನಿಲ್ಲಿಸಿ ನಿದ್ರಿಸಿದ್ದರು.
ಬೆಳಗಿನ ಜಾವ 2 ಗಂಟೆ ಸುಮಾರಿಗೆ ಮುಖಕ್ಕೆ ಬಟ್ಟೆ ಸುತ್ತಿಕೊಂಡಿದ್ದ ಮೂವರು ವ್ಯಕ್ತಿಗಳು ದಾಮೋದರ ಮುಖಕ್ಕೆ ಬೆಡ್‌ಶೀಟ್ ಮುಚ್ಚಿ ಅವರ ಮುಖ, ಕೈ, ಕಾಲು ಹಾಗೂ ದೇಹದ ಹಲವೆಡೆ ಚಾಕುವಿನಿಂದ ತಿವಿದು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಅಲ್ಲದೆ ಅವರ ಕಾಲನ್ನು ಹಗ್ಗದಿಂದ ಕಟ್ಟಿ ಹಾಕಿ, ಅವರ ಕೈಯಲ್ಲಿದ್ದ 5 ಗ್ರಾಮ್ ತೂಕದ ಚಿನ್ನದ ಉಂಗುರ, ರು. 500 ನಗದು, 1 ವಾಚ್ ಹಾಗೂ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡಿರುವ ದಾಮೋದರ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಪ್ಪಿನಂಗಡಿ ಪೊಲಿಸರು ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದ್ವೇಷ ಭಾಷಣ ಬಿಟ್ಟು 19 ವಿಧೇಯಕಗಳಿಗೆ ರಾಜ್ಯಪಾಲರ ಅಂಕಿತ; ಎರಡು ಮಸೂದೆ ವಾಪಸ್

ಮಹಾರಾಷ್ಟ್ರದಲ್ಲಿ 'ಹೊಸ ಟ್ವಿಸ್ಟ್', ಬಿಜೆಪಿ ಹೊರಗಿಡಲು ಸೇನಾ- ಎನ್ ಸಿಪಿ ಮೈತ್ರಿ!

ಅಂಕಿತಾ ಭಂಡಾರಿ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಉತ್ತರಾಖಂಡ ಸಿಎಂ ಶಿಫಾರಸು

ಕೋಲ್ಕತ್ತಾ: I-PAC ಮೇಲಿನ ED ದಾಳಿ ವಿರುದ್ಧ ಬೀದಿಗಿಳಿದ ಪಶ್ಚಿಮ ಬಂಗಾಳ ಸಿಎಂ ಮಮತಾ

ಭದ್ರಾ ಮೇಲ್ದಂಡೆ ಯೋಜನೆ: ರಾಜ್ಯದಲ್ಲಿಯೇ ಅತ್ಯಂತ ಎತ್ತರದ ಅಕ್ವಾಡಕ್ಟ್‌ ನಿರ್ಮಾಣ; ಎಲ್ಲಿದೆ ಗೊತ್ತಾ?

SCROLL FOR NEXT