ದಕ್ಷಿಣ ಕನ್ನಡ

ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಖಾಸಗಿ ವಾಹನ ಪ್ರವೇಶ ನಿಷೇಧ ನಿರ್ಧಾರ

ಬೆಳ್ತಂಗಡಿ: ಸರ್ಕಾರಿ ಮತ್ತು ಖಾಸಗಿ ಬಸ್‌ಗಳನ್ನು  ಹೊರತುಪಡಿಸಿ ಬೇರೆ ಯಾವುದೇ ವಾಹನಗಳಿಗೆ ಬೆಳ್ತಂಗಡಿ ಬಸ್ ನಿಲ್ದಾಣಗೊಳಗೆ ಪ್ರವೇಶ ಕಡ್ಡಾಯವಾಗಿ ನಿಷೇಧಿಸಲು ಇಲ್ಲಿನ ನ.ಪಂ.ಆಡಳಿತ ನಿರ್ಧರಿಸಿದೆ.
ಇತ್ತೀಚೆಗೆ ಅಧ್ಯಕ್ಷೆ ಮುಸ್ತಾರ್ ಜಾನ್ ಮೆಹಬೂಬ್ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು.
ಬಸ್ ನಿಲ್ದಾಣದ ಅವ್ಯವಸ್ಥೆ ಬಗ್ಗೆ ಮಾಧ್ಯಮಗಳಲ್ಲಿ ಬಂದ ವರದಿಯ ಬಗ್ಗೆ ಸದಸ್ಯರು ಗಮನ ಸೆಳೆದು ನಿಲ್ದಾಣವನ್ನು ಬಸ್‌ಗಳಿಗೆ ಮಾತ್ರ ಮೀಸಲಿಡುವಂತೆ ಆಗ್ರಹಿಸಿದರು.  ಈ ಬಗ್ಗೆ ಚರ್ಚೆ ನಡೆದು ನಿಲ್ದಾಣದೊಳಗೆ ಖಾಸಗಿ ವಾಹನಗಳ ಪ್ರವೇಶ ಸಂಪೂರ್ಣ ನಿಷೇಧಿಸಲು ನಿರ್ಧರಿಸಲಾಯಿತು. ಅಲ್ಲದೆ 5 ಕಡೆಗಳಲ್ಲಿ ಸೂಚನಾ ಫಲಕ ಹಾಗೂ 3 ಕಡೆಗಳಲ್ಲಿ ಸಿ.ಸಿ.ಕ್ಯಾಮೆರಾ ಅಳವಡಿಸಲು ನಿರ್ಧರಿಸಲಾಯಿತು.
ಇದನ್ನು ಅನುಷ್ಠಾನಗೊಳಿಸಲು ಪೊಲೀಸ್ ಇಲಾಖೆ ಸಹಕಾರ ಪಡೆಯಲು ನಿರ್ಧರಿಸಲಾಯಿತು.
ಅಪಾಯಕಾರಿ ಮರ ತೆರವು: ನಗರದಲ್ಲಿರುವ ಅಪಾಯಕಾರಿ ಮರಗಳನ್ನು ಕಡಿಯುವಂತೆ ಅರಣ್ಯ ಇಲಾಖಾಧಿಕಾರಿಗೆ ಸೂಚಿಸಲಾಯಿತು. ಅದರಲ್ಲೂ ಮುಖ್ಯವಾಗಿ ಗುರುನಾರಾಯಣ ವಾಣಿಜ್ಯ ಸಂಕೀರ್ಣದ ಹಿಂಬದಿ ಇರುವ ಬೃಹತ್ ಮರಗಳ ಬಗ್ಗೆ ಗಮನಹರಿಸುವಂತೆ ಸೂಚಿಸಲಾಯಿತು. ಶವಾಗಾರದ ಸ್ವಚ್ಛತೆ ಬಗ್ಗೆ ಮತ್ತು ಸುದೆಮುಗೇರು-ಸಂಜಯನಗರದಲ್ಲಿನ ಪೈಪ್ ಲೈನ್‌ನಿಂದಾಗಿ ಮಳೆ ನೀರು ರಸ್ತೆಗೆ ಹರಿದುಬರುತ್ತಿರುವ ಬಗ್ಗೆ ಕ್ರಮ ಕೈಗೊಳ್ಳುವಂತೆ ನಿರ್ಧರಿಸಲಾಯಿತು.
 ಮುಖ್ಯಾಧಿಕಾರಿ ಜೆಸಿಂತಾ ಮೋನಿಸ್, ಉಪಾಧ್ಯಕ್ಷ ನಳಿನಿ ವಿಶ್ವನಾಥ್, ಸ್ಥಾಯಿ ಸಮಿತಿ ಅಧ್ಯಕ್ಷ ಜಗದೀಶ್, ಎಂಜಿನಿಯರ್ ಮಹಾವೀರ, ನಾಮನಿರ್ದೇಶಿತ ಸದಸ್ಯರು ಇದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT