ಧಾರವಾಡ

ಚಿನ್ನಾಭರಣ ಲೂಟಿ

ಹುಬ್ಬಳ್ಳಿ: ಗೋಕುಲ ರಸ್ತೆಯ ನಿಖೇತನ ಕಾಲೋನಿಯ ಮನೆಯ ಕೀಲಿಕೈ ಮುರಿದು ಒಳ ನುಗ್ಗಿದ ಕಳ್ಳರು ರು. 17 ಸಾವಿರ ಮೌಲ್ಯದ ಉಂಗುರ ಹಾಗೂ ರು. 6 ಸಾವಿರ ನಗದು ಕಳ್ಳತನ ಮಾಡಿರುವ ಘಟನೆ ನಡೆದಿದೆ. ನಾರಾಯಣ ಭಟ್ ಎಂಬುವವರಿಗೆ ಸೇರಿದ ಮನೆಯಲ್ಲಿ ಕಳ್ಳತನ ನಡೆದಿದೆ. ಕೀಲಿ ಹಾಕಿ ಮನೆಯಿಂದ ಹೊರ ಹೋದ ವೇಳೆ ಕಳ್ಳರು ಈ ಕೃತ್ಯವೆಸಗಿದ್ದಾರೆ. ಗೋಕುಲ ರಸ್ತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
100 ಹಂದಿಗಳ ಸಾಗಾಟ
ಹುಬ್ಬಳ್ಳಿ: ನಗರದ ವಿವಿಧೆಡೆ ಬುಧವಾರ ಹಂದಿ ಹಿಡಿಯುವ ಕಾರ್ಯಾಚರಣೆ ನಡೆಯಿತು. ಉಣಕಲ್ಲ, ಗಿರಣಿಚಾಳ, ವಿಕಾಸ ನಗರ, ಮೊಮಿನ್ ಪ್ಲಾಟ ಸೇರಿದಂತೆ ಮತ್ತಿತರ ಪ್ರದೇಶಗಳಲ್ಲಿ ಬೆಳಗ್ಗೆಯಿಂದ 100 ಹಂದಿ ಹಿಡಿದು ಸಾಗಿಸಲಾಯಿತು. ಧಾರವಾಡದಲ್ಲಿ ಮಂಗಳವಾರ 200 ಹಂದಿ ಹಿಡಿದಿದ್ದ ತುಮಕೂರಿನ ಹಂದಿ ಹಿಡಿಯುವ ಪರಿಣಿತರು, ಬುಧವಾರ ಹಿಡಿದಿದ್ದ ಹಂದಿಗಳೊಂದಿಗೆ ತುಮಕೂರಿಗೆ ಪ್ರಯಾಣ ಬೆಳೆಸಿದರು. ಹಂದಿ ಹಿಡಿಯುವ ಕಾರ್ಯಾಚರಣೆಗೆ ಪೊಲೀಸ್ ಬಂದೋಬಸ್ತ ಒದಗಿಸಲಾಗಿತ್ತು. ಹಂದಿ ಹಿಡಿಯುವ ಪರಿಣಿತರು ಹಂದಿಗಳೊಂದಿಗೆ ಬುಧವಾರ ತುಮಕೂರಿಗೆ ತೆರಳಿದ್ದು, ಅವರು ಮರಳಿದ ಬಳಿಕ ಕಾರ್ಯಾಚರಣೆ ಆರಂಭಿಸುವುದಾಗಿ ಪಾಲಿಕೆ ಆರೋಗ್ಯಾಧಿಕಾರಿ ಡಾ. ಪ್ರಭು ಬಿರಾದಾರ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT