ಗದಗ

ನೀರಾವರಿ ಯೋಜನೆಗೆ ರು. 11030 ಕೋಟಿ

ಕನ್ನಡಪ್ರಭ ವಾರ್ತೆ, ಗದಗ, ಆ, 4
ಅಧಿಕಾರಕ್ಕೆ ಬರುವ ಮುನ್ನ ನೀಡಿದ ಭರವಸೆಯಂತೆ ಪ್ರತಿ ವರ್ಷ ನೀರಾವರಿ ಯೋಜನೆಗಳಿಗೆ 10 ಸಾವಿರ ಕೋಟಿ ನೀಡಲು ಸರ್ಕಾರ ಬದ್ಧ. ಈ ವರ್ಷ ನೀರಾವರಿಗಾಗಿ ರು. 11030 ಕೋಟಿ ಖರ್ಚು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸೋಮವಾರ ರೋಣ ತಾಲೂಕಿನ ಹಾಲಕೆರೆ ಗ್ರಾಮದಲ್ಲಿ ಹಿರಿಯ ಶ್ರೀಗಳ ಶತಮಾನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು, ರಾಜ್ಯದಲ್ಲಿ ನೀರಾವರಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಿ ರೈತರ ಬದುಕಿನಲ್ಲಿ ಹೊಸ ಆಯಾಮ ಸೃಷ್ಟಿಸಲು ಸರ್ಕಾರ ಸಕಲ ಸಿದ್ಧತೆ  ಮಾಡಿಕೊಂಡಿದೆ. ಸಾವಯವ ಕೃಷಿಗೆ ಹೆಚ್ಚು ಒತ್ತು ನೀಡಲು ವಿಶೇಷ ಯೋಜನೆ ಚಾಲನೆಯಲ್ಲಿದ್ದು, ಪ್ರತಿವರ್ಷ ರು. 40 ಕೋಟಿ ಖರ್ಚು ಮಾಡಲು ಕ್ರಮ ಕೈಗೊಂಡಿದೆ ಎಂದರು.
ಮಳೆಯಾಧರಿಸಿ ಕೃಷಿ ಮಾಡುತ್ತಿರುವ ಪ್ರದೇಶದಲ್ಲಿ ಒಣಬೇಸಾಯ ಅಭಿವೃದ್ಧಿ ನೀತಿ ಜಾರಿ ಮಾಡಿದ್ದು, ಅದಕ್ಕಾಗಿ ಬಜೆಟ್‌ನಲ್ಲಿ ರು. 500 ಕೋಟಿ ಮೀಸಲಿಟ್ಟಿದೆ. ಬೆಲೆ ಕುಸಿತದಿಂದ ತತ್ತರಿಸಿದ ರೈತರ ನೆರವಿಗಾಗಿ ವೈಜ್ಞಾನಿಕ ಪರಿಹಾರ ಕಂಡುಕೊಳ್ಳಲು ಕೃಷಿ ಬೆಲೆ ನೀತಿ ಆಯೋಗ ರಚಿಸಿದ್ದು, ಇದು ರಾಜ್ಯಗಳ ಮ2ಟ್ಟದಲ್ಲಿ ಕರ್ನಾಟಕದಲ್ಲಿ ಮಾತ್ರ ಎಂದರು.
ಹಸಿದವರಿಗೆ ಅನ್ನದ ಬೆಲೆ ಅರಿವು : ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಬಡವರಿಗೆ ರು. 1ಕ್ಕೆ 1 ಕೆಜಿ ಅಕ್ಕಿ ನೀಡುತ್ತಿರುವುದರಿಂದ ದುಡಿಯಲು ಜನರೇ ಬರುತ್ತಿಲ್ಲ ಎಂದು ಕೆಲವರು ನನ್ನನ್ನು ಟೀಕಿಸುತ್ತಾರೆ. ಟೀಕೆ ಮಾಡಲಿ, ರಚನಾತ್ಮಕವಾಗಿರಲಿ. ರಾಜಕೀಯ ಉದ್ದೇಶ ಇರಬಾರದು. ಟೀಕಿಸುವವರಿಗೆ ಹಸಿವಿನ ಬೆಲೆ ಗೊತ್ತಿಲ್ಲ. ಹಸಿದವನಿಗೆ ಅದರ ಅರಿವಾಗುತ್ತದೆ ಎಂದು ತಮ್ಮ ಬಾಲ್ಯದಲ್ಲಿನ ಘಟನೆ ಸ್ಮರಿಸಿಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US Tariff war: ಜೈಶಂಕರ್-ರುಬಿಯೊ ಮಹತ್ವದ ಭೇಟಿ, ಭಾರತ-ಅಮೆರಿಕ ಸಂಬಂಧ ಕುರಿತು ಚರ್ಚೆ!

Indian Army ಗೆ ಮತ್ತಷ್ಟು ಬಲ: ರಷ್ಯಾದ S-400 ವಿತರಣೆ 2026ರ ಹೊತ್ತಿಗೆ ಪೂರ್ಣ: ವರದಿ

TCS Layoffs Row: ಭಾರತದ ಐಟಿ ದೈತ್ಯ ಸಂಸ್ಥೆ ವಿರುದ್ಧ "ಬಲವಂತದ ರಾಜೀನಾಮೆ" ಆರೋಪ! 30,000 ಉದ್ಯೋಗಕ್ಕೆ ಕುತ್ತು?

ರಾಜ್ಯಾದ್ಯಂತ 'ಜಾತಿ ಗಣತಿ' ಆರಂಭ; ಕೆಲವು ಕಡೆ ತಾಂತ್ರಿಕ ದೋಷ, ಹಲವಡೆ ಸರ್ವರ್ ಸಮಸ್ಯೆ

ಅಪ್ರಾಪ್ತ ಬಾಲಕಿ ಜೊತೆ ಓಡಿ ಹೋಗಿ ಸಿಕ್ಕಿಬಿದ್ದ ಯುವಕ: ಪೊಲೀಸ್ ಜೀಪಿನ ಮೇಲೆ ಹತ್ತಿ ಬಾಲಕಿ ಜೊತೆ ಅಶ್ಲೀಲ ನೃತ್ಯ; Video

SCROLL FOR NEXT