ಗುಲ್ಬರ್ಗಾ

ದೇಶದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಮಹತ್ವದ್ದು: ಗುರುಲಿಂಗ

ಯಾದಗಿರಿ: ತಾಲೂಕಿನ ಸೈದಾಪುರದ ಮಲ್ಹಾರ ಕಾರಡ್ಡಿ ಬಸವಂತರಾಯ ಮತ್ತು ಸಿದ್ದಪ್ಪ ಸ್ಮಾರಕ ವಿದ್ಯಾವರ್ಧಕ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಸಮಾರೋಪ ಸಮಾರಂಭ ಜರುಗಿತು.  
ಅತಿಥಿಗಳಾಗಿ ಮುಖ್ಯಗುರು ಲಿಂಗಾರೆಡ್ಡಿ ನಾಯಕ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಬಹುಮುಖ್ಯವಾಗಿದೆ. ಅವರಲ್ಲಿ ಸೇವಾ ಮನೋಭಾವನೆಯಂತಹ ಗುಣಗಳನ್ನು ಬೆಳಸಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಜಿ.ಎಂ. ಗುರುಪ್ರಸಾದ ಮಾತನಾಡಿ, ಒಂದು ವಾರದವರೆಗಿನ ನಿರಂತರವಾದ ಶಿಬಿರದಲ್ಲಿ ಶ್ರಮದಾನ, ಉಪನ್ಯಾಸದಂತಹ ಕಾರ್ಯಕ್ರಮಗಳು ನಡೆದು ಬಂದವು. ಅವುಗಳಲ್ಲಿ ಭಾಗವಹಿಸಿದ ನಿಮಗೆ ಉತ್ತಮ ಗುಣ ಬೆಳಸಿಕೊಳ್ಳಲು ನೆರವು ನೀಡಿದಂತಾಗಿದೆ ಎಂದರು.
ಜಿಪಂ ಮಾಜಿ ಉಪಾಧ್ಯಕ್ಷ ಶರಣಿಕಕುಮಾರ ದೋಖಾ, ಗ್ರಾಪಂ ಅಧ್ಯಕ್ಷೆ ರಾಧಮ್ಮ ಭಾಗಪ್ಪ, ಗೋವಿಂದಪ್ಪ ಕಣೇಕಲ್, ವಿರುಪಣ್ಣಗೌಡ ಇದ್ದರು. ಶರೀಫ ಭಾಷಾ ಸ್ವಾಗತಿಸಿದರು. ರಾಜೇಶ್ವರಿ ನಿರೂಪಿಸಿದರು. ಮಹೇಶ ವಂದಿಸಿದರು. ಕಾನೂನು ಅರಿವು, ಆರೋಗ್ಯ, ಪರಿಸರ, ಕೃಷಿ, ಸೇವಾ ಮನೋಭಾವನೆಯಂತಹ ವಿಚಾರಗಳ ಬಗ್ಗೆ ಚರ್ಚೆಗಳು ಜರುಗಿದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT