ಗುಲ್ಬರ್ಗಾ

11 ಕೋಟಿ ವೆಚ್ಚದ ರಸ್ತೆ ನಿರ್ಮಾಣ

ಯಾದಗಿರಿ: ಶಹಾಪುರ ತಾಲೂಕಿನ ಭೀಮಾ ಬ್ರಿಡ್ಜ್‌ನಿಂದ ವಡಗೇರಾ ಮುಖ್ಯರಸ್ತೆವರೆಗಿನ ರಸ್ತೆ ಕಾಮಗಾರಿಗೆ ಶಾಸಕ ಡಾ. ಎ.ಬಿ. ಮಾಲಕರಡ್ಡಿ ಸೋಮವಾರ ಚಾಲನೆ ನೀಡಿದರು.
ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಗುತ್ತಿಗೆದಾರರು ರಸ್ತೆ ಗುಣಮಟ್ಟವನ್ನು ಕಾಪಾಡಿಕೊಂಡು ಬರಬೇಕು. ಹತ್ತಿಗುಡೂರಲ್ಲಿ ಕಳೆದ ವರ್ಷವೇ 8 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಿದ ರಸ್ತೆಯು ಈಗಾಗಲೇ ಕಿತ್ತು ಹೋಗುವ ಪರಿಸ್ಥಿತಿಗೆ ಬಂದಿದ್ದು, ಇದು ಲೋಕೋಪಯೋಗಿ ಅಧಿಕಾರಿಗಳ ಬೇಜಬ್ದಾರಿತನವನ್ನು ತೋರಿಸಿ ಕೊಡುತ್ತದೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಸರ್ಕಾರವಿದ್ದಾಗ ಈ ರಸ್ತೆ ನಿರ್ಮಾಣಕ್ಕೆ 23 ಕೋಟಿ ಘೋಷಣೆ ಮಾಡಿತ್ತು. ಆದರೀಗ ರಸ್ತೆ ನಿರ್ಮಾಣಕ್ಕೆ ಸುಮಾರು 43 ಕೋಟಿ ಬೇಕಾಗಿದೆ. ಅದರಲ್ಲಿ 11 ಕೋಟಿ ಬಿಡುಗಡೆ ಮಾಡಿದ್ದು, ಇದರಲ್ಲಿ 10 ಕಿ ಮೀ ರಸ್ತೆ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು. ಶಹಾಪುರ ತಾಲೂಕಿನ ಹತ್ತಿಗುಡೂರಿಂದ ರಸ್ತೆ ನಿರ್ಮಾಣಕ್ಕೆ ಈಗಾಗಲೇ 26 ಕೋಟಿ ಬಿಡುಗಡೆಯಾಗಿದ್ದು, ಶೀಘ್ರವೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದರು.
ಈ ವೇಳೆ ಸಿದ್ದರಾಮ ಕಾಡಂನೋರ, ಶ್ರೀನಿವಾಸರಡ್ಡಿ ಕಂದಕೂರ, ಮರೆಪ್ಪ ಬಿಳಾರ, ಮಲ್ಲಿಕಾರ್ಜುನ, ಶಂಕರೆಡ್ಡಿ ಬಿಳ್ಳಾರ, ಬಸವರಾಜ ಮಾಲಿಪಾಟೀಲ, ಶರಣು ಇಟಗಿ, ತೇಜಸ್‌ಗೌಡ, ಬಸವರಾಜ ಸೊನ್ನದ, ಸ್ಯಾಮಸನ್, ಸುರೇಶ ಜೈನ್, ಡಾ. ಸುಭಾಷ್, ಅಂಬರೀಷ್ ಸಾಹುಕಾರ, ಲೋಕೋಪಯೋಗಿ ಅಧಿಕಾರಿ ನಾಟಿಕಾರ ಮತ್ತಿತರರು ಇದ್ದರು.

ಗಿರಿಜಾಪುರ ಬಳಿ ಬ್ರಿಜ್ ನಿರ್ಮಾಣಕ್ಕೆ ಆಗ್ರಹ
ಯಾದಗಿರಿ: ಕೃಷ್ಣಾ ನದಿಯ ಎಡಭಾಗದಲ್ಲಿರುವ ಯಾದಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳ ಜನತೆಯ ಅನುಕೂಲಕ್ಕಾಗಿ ರಾಯಚೂರು ಜಿಲ್ಲೆಯ ಗಿರಿಯಾಪುರ ಬಳಿ ಬ್ರಿಜ್ ಕಂ ಬ್ಯಾರೇಜ್ ನಿರ್ಮಾಣ ಮಾಡಬೇಕೆಂದು ಶಾಸಕ ಡಾ. ಎ.ಬಿ. ಮಾಲಕರಡ್ಡಿ ಆಗ್ರಹಿಸಿದ್ದಾರೆ. ಈ ಸಂಬಂಧ ಇತ್ತೀಚೆಗೆ ಬೆಂಗಳೂರಿನಲ್ಲಿ ಇಂಧನ ಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿರುವ ಅವರು, ಶಕ್ತಿನಗರದ ರಾಯಚೂರು ಶಾಖೋತ್ಪನ್ನ ಕೇಂದ್ರಕ್ಕೆ ನೀರು ಸರಬರಾಜು ಮಾಡಲು ಗಿರಿಜಾಪುರದ ಬಳಿ ನಿರ್ಮಿಸಲುದ್ದೇಶಿರುವ ಚಿಕ್ಕ ಬ್ಯಾರೇಜ್ ಬದಲು ನನ್ನ ಮತಕ್ಷೇತ್ರದ ಗ್ರಾಮಗಳ ಜನತೆಗೆ ಅನುಕೂಲವಾಗುವಂತೆ ಬ್ರಿಜ್ ಕಂ ಬ್ಯಾರೇಜ್ ನಿರ್ಮಿಸಬೇಕೆಂದು ಒತ್ತಾಯಿಸಿದ್ದಾರೆ. ಶಾಸಕರ ಮನವಿಗೆ ಸ್ಪಂದಿಸಿದ ಸಚಿವ ಡಿ.ಕೆ. ಶಿವಕುಮಾರ್, ತಮ್ಮ ಕ್ಷೇತ್ರದ 30ಕ್ಕೂ ಹೆಚ್ಚು ಗ್ರಾಮಗಳ ರೈತರಿಗೆ ಮತ್ತು ಎರಡು ಜಿಲ್ಲೆಗಳ ಜನರಿಗೆ ಅನುಕೂಲವಾಗುವುದಾದರೆ ಬ್ರಿಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT