ಹಾಸನ

ವೀರಶೈವರು ಒಗ್ಗಟ್ಟಾದರೆ ಸವಲತ್ತು: ತಿಪ್ಪಣ್ಣ

ಅರಸೀಕೆರೆ: ವೀರಶೈವರು ತಮ್ಮಲ್ಲಿರುವ ಒಳಪಂಗಡಗಳನ್ನು ಮರೆತು ಒಗ್ಗಟ್ಟಿನಿಂದ ಹೋರಾಟ ನಡೆಸಿದರೆ ಮಾತ್ರ ಸರ್ಕಾರದ ಸವಲತ್ತುಗಳನ್ನು ಪಡೆಯಲು ಸಾಧ್ಯ ಎಂದು ವೀರಶೈವ ಮಹಾಸಭಾ ರಾಜ್ಯಾಧ್ಯಕ್ಷ ಎನ್.ತಿಪ್ಪಣ್ಣ ಹೇಳಿದರು.
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುವ ಮಾರ್ಗಮಧ್ಯೆ ವರ್ತಕ ದಂದೂರು ರವಿ ಅವರ ಮನೆಯಲ್ಲಿ ಕೆಲಕಾಲ ತಂಗಿದ್ದ ಅವರು ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿ, ಒಳಪಂಗಡದ ಸಂಕುಚಿತ ಮನೋಭಾವ ನಮ್ಮನ್ನು ರಾಜಕೀಯ ಅಧಿಕಾರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ನಿರಂತರ ಅನ್ಯಾಯವಾಗಲು ಕಾರಣವಾಗಿದೆ. ಆದ್ದರಿಂದ ಇನ್ನಾದರೂ ಒಳಪಂಗಡವನ್ನು ದೂರವಿಟ್ಟು ನಾವೆಲ್ಲರೂ ವೀರಶೈವರು ಎಂಬ ಒಂದೇ ಮನೋಭಾವದಿಂದ ಹೋರಾಟ ನಡೆಸುವ ಮೂಲಕ ಪ್ರಾತಿನಿಧ್ಯ ಪಡೆಯಲು ಯತ್ನಿಸಬೇಕೆಂದು ಸಲಹೆ ನೀಡಿದರು.
ನಮ್ಮಲ್ಲಿರುವ ದೌರ್ಬಲ್ಯವನ್ನು ಕೆಲವರು ರಾಜಕೀಯ ದಾಳವಾಗಿ ಬಳಸಿಕೊಳ್ಳುವ ಸಾಧ್ಯತೆಯಿದ್ದು ಈ ಬಗ್ಗೆ ಎಚ್ಚರ ವಹಿಸುವ ಅಗತ್ಯವಿದೆ. ಸಮಾಜದ ಏಳಿಗೆಗಾಗಿ ಪ್ರತಿಯೊಬ್ಬರೂ ಪಣ ತೊಡಬೇಕೆಂದು ಕರೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT