ಹಾಸನ

ವೀರಶೈವರು ಒಗ್ಗಟ್ಟಾದರೆ ಸವಲತ್ತು: ತಿಪ್ಪಣ್ಣ

ಅರಸೀಕೆರೆ: ವೀರಶೈವರು ತಮ್ಮಲ್ಲಿರುವ ಒಳಪಂಗಡಗಳನ್ನು ಮರೆತು ಒಗ್ಗಟ್ಟಿನಿಂದ ಹೋರಾಟ ನಡೆಸಿದರೆ ಮಾತ್ರ ಸರ್ಕಾರದ ಸವಲತ್ತುಗಳನ್ನು ಪಡೆಯಲು ಸಾಧ್ಯ ಎಂದು ವೀರಶೈವ ಮಹಾಸಭಾ ರಾಜ್ಯಾಧ್ಯಕ್ಷ ಎನ್.ತಿಪ್ಪಣ್ಣ ಹೇಳಿದರು.
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುವ ಮಾರ್ಗಮಧ್ಯೆ ವರ್ತಕ ದಂದೂರು ರವಿ ಅವರ ಮನೆಯಲ್ಲಿ ಕೆಲಕಾಲ ತಂಗಿದ್ದ ಅವರು ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿ, ಒಳಪಂಗಡದ ಸಂಕುಚಿತ ಮನೋಭಾವ ನಮ್ಮನ್ನು ರಾಜಕೀಯ ಅಧಿಕಾರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ನಿರಂತರ ಅನ್ಯಾಯವಾಗಲು ಕಾರಣವಾಗಿದೆ. ಆದ್ದರಿಂದ ಇನ್ನಾದರೂ ಒಳಪಂಗಡವನ್ನು ದೂರವಿಟ್ಟು ನಾವೆಲ್ಲರೂ ವೀರಶೈವರು ಎಂಬ ಒಂದೇ ಮನೋಭಾವದಿಂದ ಹೋರಾಟ ನಡೆಸುವ ಮೂಲಕ ಪ್ರಾತಿನಿಧ್ಯ ಪಡೆಯಲು ಯತ್ನಿಸಬೇಕೆಂದು ಸಲಹೆ ನೀಡಿದರು.
ನಮ್ಮಲ್ಲಿರುವ ದೌರ್ಬಲ್ಯವನ್ನು ಕೆಲವರು ರಾಜಕೀಯ ದಾಳವಾಗಿ ಬಳಸಿಕೊಳ್ಳುವ ಸಾಧ್ಯತೆಯಿದ್ದು ಈ ಬಗ್ಗೆ ಎಚ್ಚರ ವಹಿಸುವ ಅಗತ್ಯವಿದೆ. ಸಮಾಜದ ಏಳಿಗೆಗಾಗಿ ಪ್ರತಿಯೊಬ್ಬರೂ ಪಣ ತೊಡಬೇಕೆಂದು ಕರೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!