ಹಾಸನ

ನೆಮ್ಮದಿಯ ಬದುಕಿಗೆ ಧರ್ಮ ದಿಕ್ಸೂಚಿ: ಆದಿಚುಂಚನಗಿರಿ ಶ್ರೀ

ಕ.ಪ್ರ.ವಾರ್ತೆ     ರಾಮನಾಥಪುರ     ನ. 6
ಇಂದಿನ ವೈಚಾರಿಕ ಹಾಗೂ ವೈಜ್ಞಾನಿಕ ಪ್ರಪಂಚದಲ್ಲಿ ಧಾರ್ಮಿಕ ಸಂದೇಶಗಳನ್ನು ಉಪೇಕ್ಷೆ ಮಾಡುವುದು ಒಳ್ಳೆಯದಲ್ಲ. ಶಾಂತಿ ನೆಮ್ಮದಿಯ ಬದುಕಿಗೆ ಮತ್ತು ಉನ್ನತಿಗೆ ಧರ್ಮ ದಿಕ್ಸೂಚಿಯಾಗಿದೆ. ಸಂಪ್ರದಾಯಗಳನ್ನು ಮರೆಯದೆ ಉಳಿಸಿಕೊಂಡು ಬರುವುದು ಅಗತ್ಯ ಎಂದು ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.  
ಇಲ್ಲಿಯ ಬಸವೇಶ್ವರ ವೃತ್ತದಲ್ಲಿರುವ ಶ್ರೀ ಪಟ್ಟಾಭಿರಾಮ ಪ್ರೌಢಶಾಲಾವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಜ್ಯೋತ್ಸವ ಹಾಗೂ ಎ.ಮಂಜು ಹುಟ್ಟುಹಬ್ಬ ಸಮಾರಂಭದಲ್ಲಿ ಆಶೀರ್ವಚನ ನೀಡಿ, ದೂರದೃಷ್ಟಿ ಹೊಂದಿರುವ ವ್ಯಕ್ತಿ ಸಮಾಜಕ್ಕೆ ನೆರವಾಗುವ ಕೆಲಸವನ್ನು ನಿರ್ವಹಿಸುತ್ತಾನೆ ಎಂದರು.
ಶ್ರದ್ಧೆಯಿಂದ ಸಂಸ್ಕಾರ ವಿಕಾಸಗೊಳ್ಳುವುದರಿಂದ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸುತ್ತದೆ. ರಾಜ್ಯೋತ್ಸವ ಆಚರಣೆ ನ.1ನೇ ತಾರೀಖಿಗೆ ಸೀಮಿತಗೊಳ್ಳದೆ ಇಡಿ ವರ್ಷಾಚರಣೆಯಾಗಬೇಕಿದೆ. ದೇಶದಲ್ಲಿ 8 ಜ್ಞಾನಪೀಠ ಪ್ರಶಸ್ತಿಗಳು ಕನ್ನಡ ಭಾಷೆಗೆ ಬಂದಿರುವುದು ಕನ್ನಡಿಗರ, ಕನ್ನಡ ಭಾಷೆಯ ಹಿರಿಮೆಗೆ ಪ್ರತೀಕವಾಗಿದೆ. ನಮ್ಮ ಮಾತೃಭಾಷೆಯನ್ನು ಕಲಿಯುವ ಜತೆಗೆ ಇತರೆ ಭಾಷೆಗಳನ್ನೂ ಪ್ರೀತಿಸಬೇಕಿದೆ. ಶಕ್ತಿಯ ರಾಶಿ ಮನುಷ್ಯನಲ್ಲಿ ಅಡಕವಾಗಿರುವುದರಿಂದ ತನ್ನ ಜೀವಿತಾವಧಿಯಲ್ಲಿ ಹೆಚ್ಚು ಸಮಾಜಮುಖಿ ಸೇವೆ ಮೈಗೂಡಿಸಿಕೊಂಡು ಸಾರ್ಥಕತೆ ಕಾಣಬೇಕೆಂದರು.
ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದ ಚಿಲುಮೆ ಮಠಾಧೀಶ ಶ್ರೀ ಜಯದೇವ ಸ್ವಾಮೀಜಿ, ಸಾರ್ವಜನಿಕರೊಂದಿಗೆ ಅಭೂತಪೂರ್ವವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುವ ಭಾಗ್ಯ ಎಲ್ಲರಿಗೂ ಬರುವುದಿಲ್ಲ. ಶಾಸಕ ಮಂಜು ಜನ್ಮದಿನವನ್ನು ಅಭಿಮಾನಿಗಳು ಅದ್ಧೂರಿಯಾಗಿ ಆಯೋಜಿಸಿರುವುದು ಅತ್ಯಂತ ಸಂತಸದ ಸಂಗತಿ ಎಂದರು.
ಶಾಸಕ ಮಂಜು ಮಾತನಾಡಿ, ಪರಮ ಪೂಜ್ಯರ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳಲು ಎಲ್ಲರಿಗೂ ಸಾಧ್ಯವಿಲ್ಲ. ಇಂಥದರಲ್ಲಿ ನನ್ನ ಜನ್ಮದಿನವನ್ನು ಹತ್ತಾರು ಶ್ರೀಗಳ ಆಶೀರ್ವಾದದೊಂದಿಗೆ ಅಭಿಮಾನಿಗಳು ಹಮ್ಮಿಕೊಂಡಿರುವುದು ಜವಾಬ್ದಾರಿ ಹೆಚ್ಚಿಸಿದೆ. ನನ್ನ ಕ್ಷೇತ್ರದ ಜನತೆಯ ವಿಶ್ವಾಸ ಉಳಿಸಿಕೊಳ್ಳುವ ಕೆಲಸವನ್ನು ಅಧಿಕಾರಾವಧಿಯಲ್ಲಿ ನಿರ್ವಹಿಸುವೆ ಎಂದರು.
ಹಾಸನ ಆದಿಚುಂಚನಗಿರಿ ಶಾಖಾಮಠಾಧೀಶ ಶ್ರೀಶಂಭುನಾಥ ಸ್ವಾಮೀಜಿ, ಕೆಸವತ್ತೂರು ಮಠಾಧೀಶ ಶ್ರೀಬಸವರಾಜೇಂದ್ರ ಸ್ವಾಮೀಜಿ, ಟಿ.ಮಾಹಿಗೌಡನಹಳ್ಳಿ ಮಠದ ಶ್ರೀ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ, ತೇಜೂರು ಮಠ ಶ್ರೀಕಲ್ಯಾಣ ಸ್ವಾಮೀಜಿ, ಶಿರದನಹಳ್ಳಿ ಬಸವಕಲ್ಯಾಣಮಠ ಶ್ರೀಸಿದ್ಧಲಿಂಗ ಸ್ವಾಮೀಜಿ ಆಶೀರ್ವಜನ ನೀಡಿದರು.
ಕಾಂಗ್ರೆಸ್ ಮುಖಂಡರಾದ ಹೊಳೆನರಸಿಪುರ ಅನುಪಮ, ಮಹೇಶ್, ಜಾವಗಲ್ ಮಂಜುನಾಥ್, ತಾಲೂಕು ಮಾಜಿ ಅಧ್ಯಕ್ಷ ಲೋಕನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಬ್ಬಳಗೆರೆ ಭೈರೇಗೌಡ, ಹೋಬಳಿ ಅಧ್ಯಕ್ಷ ಜಿ.ಸಿ.ಮಂಜೇಗೌಡ, ಹಾರಂಗಿ ಮಹಾ ಮಂಡಳ ಅಧ್ಯಕ್ಷ ಚೌಡೇಗೌಡ, ಪಿಎಸಿಸಿ ಮಾಜಿ ಅಧ್ಯಕ್ಷ ಮಲ್ಲೇಶ್, ಸದಸ್ಯ ಗಂಗೂರು ಕುಮಾರಸ್ವಾಮಿ, ಯುವ ಮುಖಂಡರದ ಕೋಟವಾಳ್ ಮಹಾದೇವ ಲೋಕೇಶ್, ಭರತ್, ಜಾನಿ, ಜಯಪ್ರಕಾಶ್, ಮುತ್ತಿಗೆ ರಮೇಶ್, ತಾಲೂಕು ಬ್ಲಾಕ್ ಯುವ ಅಧ್ಯಕ್ಷ ದೊಡ್ಡಮಗ್ಗೆ ಮಂಜುನಾಥ್, ತಾಪಂ ಅಧ್ಯಕ್ಷೆ ಸರಸ್ವತಿ ನಾಗೇಗೌಡ, ಹಳ್ಳಿಮೈಸೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಾಂಬಶಿವಪ್ಪ, ಕೆಪಿಸಿಸಿ ಸದಸ್ಯ ಮೋಹನ್, ತಾಲೂಕು ಸಂಘದ ಅಧ್ಯಕ್ಷ ಬೊಮ್ಮನಹಳ್ಳಿ ಕೃಷ್ಣ ಇತರರು ಇದ್ದರು. ಗೋವಿಂದರಾಜು ಸ್ವಾಗತಿಸಿ, ಹೊಯ್ಸಳ ನಿರೂಪಿಸಿದರು. ಸಾಹಿತಿ ಆಸಿಂ ವಂದಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT