ಹಾಸನ

ತೆರೆದ ಕೊಳವೆ ಬಾವಿ ಮುಚ್ಚಲು ಕ್ರಮ

ಅರಕಲಗೂಡು: ಇಲ್ಲಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವ ನಿರುಪಯುಕ್ತ ಕೊಳವೆ ಬಾವಿಗಳನ್ನು ಮುಚ್ಚಲು ಇಲ್ಲಿನ ಪಟ್ಟಣ ಪಂಚಾಯಿತಿ ಮುಂದಾಗಿದೆ.
 ಇಲ್ಲಿನ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸುರೇಶ್ ಬಾಬು ಮತ್ತು ಎಂಜಿನಿಯರ್ ಕವಿತ ಅವರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವ ನಿರುಪಯುಕ್ತ ಕೊಳವೆ ಬಾವಿಗಳನ್ನು ಪತ್ತೆ ಮಾಡುವಂತೆ ಸಿಬ್ಬಂದಿವರ್ಗಕ್ಕೆ ಸೂಚಿಸಿದ್ದು, ಬುಧವಾರ ಇಲ್ಲಿನ ಮಲ್ಲಿಪಟ್ಟಣ ರಸ್ತೆಯಲ್ಲಿ ಪತ್ತೆಯಾದ ಕೊಳವೆ ಬಾವಿಯೊಂದನ್ನು ಮುಚ್ಚಿಸಿದರು.
ಮುಚ್ಚಳ ಹಾಕಲು ಸೂಚನೆ: ಇದೇ ವೇಳೆ ಪಟ್ಟಣದ ನಿರ್ಮಾಣ ಹಂತದಲ್ಲಿ ಇರುವ ಉಪ್ಪಾರ ಸಮುದಾಯ ಭವನದ ಸಮೀಪದಲ್ಲಿ ಕೊರೆಸಲಾಗಿರುವ ಕೊಳವೆ ಬಾವಿಗೆ ಮುಚ್ಚಳ ಇಲ್ಲದ ಕಾರಣಕ್ಕೆ ಸಂಬಂಧಪಟ್ಟವರಿಗೆ ಗುರುವಾರ ಮುಚ್ಚಳ ಹಾಕುವಂತೆ ಸೂಚಿಸಲಾಗಿದೆ.  ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ತೆರೆದ ಕೊಳವೆ ಬಾವಿಗಳಿದ್ದು, ಗುರುತಿಸಿ ಹೇಳಿದವರಿಗೆ 500 ರು. ಬಹುಮಾನ ನೀಡಲಾಗುವುದು. ಸರ್ಕಾರಿ ಕೊಳವೆ ಬಾವಿಗಳಷ್ಟೇ ಅಲ್ಲದೇ ನಿರುವಯುಕ್ತ ಹಾಗೂ ತೆರೆದ ಕೊಳವೆ ಬಾವಿಗಳು ಖಾಸಗಿ ಸ್ಥಳಗಳಲ್ಲಿ ಇದ್ದರೂ ಪಟ್ಟಣ ಪಂಚಾಯಿತಿಗೆ ತಿಳಿಸಿದರೆ ಅವುಗಳನ್ನು ಪಟ್ಟಣ ಪಂಚಾಯಿತಿ ವತಿಯಿಂದಲೇ ಮುಚ್ಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.  


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT