ಹಾವೇರಿ

ಒಮ್ಮತದ ನಿರ್ಧಾರ ಕೈಗೊಳ್ಳಿ

ರಾಣಿಬೆನ್ನೂರು: 81ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಕುರಿತು ಕಸಾಪ ಜಿಲ್ಲಾಧ್ಯಕ್ಷರ ಮೂಲಕವೇ ಚುನಾಯಿತ ಪ್ರತಿನಿಧಿಗಳು ತಮ್ಮ ಒಮ್ಮತದ ಅಭಿಪ್ರಾಯವನ್ನು ನಮ್ಮ ಬಳಿ ಪ್ರಸ್ತಾಪಿಸಬೇಕು. ಈ ಕುರಿತು ಶೀಘ್ರ ಒಮ್ಮತದ ನಿರ್ಧಾರವನ್ನು ತಮ್ಮೆದುರು ತಿಳಿಸಲು ಜನಪ್ರತಿನಿಧಿಗಳು ಮುಂದಾಗದಿದ್ದಲ್ಲಿ ಜಿಲ್ಲೆಗೆ ತಾವು ನೀಡಿರುವ ಆಹ್ವಾನ ವಾಪಸ್ ಪಡೆದು ಬೇರೆ ಜಿಲ್ಲೆಗೆ ಸಮ್ಮೇಳನ ಆಹ್ವಾನ ನೀಡಲು ತಾವು ಸಿದ್ಧರಿದ್ದೇವೆ ಎಂದು ಕಸಾಪ ರಾಜ್ಯಾಧ್ಯಕ್ಷ ಪುಂಡಲಿಕ ಹಾಲಂಬಿ ಹೇಳಿದರು.
ಧಾರವಾಡದಿಂದ ಬೆಂಗಳೂರಿಗೆ ತೆರಳುವ ಮುನ್ನ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶತಮಾನೋತ್ಸವ ಸಂಭ್ರಮಾಚರಣೆಯ ಹಂತ ತಲುಪಿರುವ ಕಸಾಪ 81ನೇ ನುಡಿ ಹಬ್ಬ ಆಚರಿಸುವ ಭಾಗ್ಯವಂತರೆಂದು ಕರೆಯಿಸಿಕೊಳ್ಳುವ ಹಾವೇರಿ ಜಿಲ್ಲೆಯ ಸಮಸ್ತ ಕನ್ನಡಾಭಿಮಾನಿಗಳು, ಜನಪ್ರತಿನಿಧಿಗಳು ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರೆಲ್ಲ ಒಂದಾಗಿ ಜಿಲ್ಲೆಯ ಯಾವ ತಾಲೂಕಿನಲ್ಲಿ 81ನೇ ನುಡಿಹಬ್ಬವನ್ನಾಚರಿಸಿದರೆ ಸೂಕ್ತವೆಂಬುದನ್ನು ನಿರ್ಣಯಿಸಿ ತಮಗೆ ತಿಳಿಸಿದಲ್ಲಿ ಆ. 17ರಂದು ಧಾರವಾಡದಲ್ಲಿ ನಡೆಯಲಿರುವ ಕಸಾಪ ಶತಮಾನೋತ್ಸವ ಸಂಭ್ರಮಾಚರಣೆ ಸಂಭ್ರಮದಲ್ಲಿ ಸೇರಲಿರುವ ಕಸಾಪ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತಾವು ಕೈಗೊಂಡಿರುವ ಅಂತಿಮ ನಿರ್ಣಯ ಪ್ರಕಟಿಸುವುದಾಗಿ ತಿಳಿಸಿದರು.
ಕನ್ನಡ ನಾಡು, ನುಡಿಗಾಗಿ ಹಗಲಿರುಳು ಶ್ರಮಿಸಿದ ತಾವು ರಾಜ್ಯದ ಯಾವ ಸ್ಥಳದಲ್ಲಾದರೂ 81ನೇ ಸಮ್ಮೇಳನ ತೊಂದರೆ ಇಲ್ಲದೆ ನಡೆದರೆ ಸಾಕೆಂದು ನಂಬಿದ್ದು, ಸ್ಥಳ ನಿಗದಿಗಾಗಿ ಜಿಲ್ಲೆಯಿಂದ ಜಿಲ್ಲೆಗೆ ಪೈಪೋಟಿ ನಡೆಯುವುದನ್ನು ನೊಡಿದ್ದೇವು. ಆದರೆ, ಹಾವೇರಿ ಜಿಲ್ಲೆಯಲ್ಲಿ ತಾಲೂಕುಗಳ ಮಧ್ಯ ಸ್ಥಳ ನಿಗದಿಗಾಗಿ ಗೊಂದಲ ಉಂಟಾಗಿರುವುದಲ್ಲದೆ, ಸಮ್ಮೇಳನ ಜಿಲ್ಲೆಯಿಂದ ಬೇರೆ ಜಿಲ್ಲೆಗೆ ಎತ್ತಂಗಡಿ ಮಾಡುವ ವಾತಾವರಣ ಸೃಷ್ಟಿಯಾಗಿದ್ದು ಬೇಸರವಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT