ಕೊಡಗು

ಕೊರಗ ಸಮುದಾಯ ಮುಖ್ಯವಾಹಿನಿಗೆ: ಸಂಸದ ಜಯಪ್ರಕಾಶ್ ಹೆಗ್ಡೆ ಆಶಯ

ಬ್ರಹ್ಮಾವರ: ಕೊರಗ ಸಮುದಾಯದಂತಹ ಹಿಂದುಳಿದ ಸಮಾಜದ ಜನತೆಯಲ್ಲಿ ಹುದುಗಿರುವ ಪ್ರತಿಭೆ ಗುರುತಿಸಿ, ಅವರಲ್ಲಿರುವ ದುಶ್ಚಟಗಳನ್ನು ದೂರ ಮಾಡಿ, ಸಮಾಜದಲ್ಲಿ ಅವಕಾಶಗಳನ್ನು ಒದಗಿಸಿ ಮುಖ್ಯವಾಹಿನಿಗೆ ತರಲು ಎನ್.ಎಸ್.ಎಸ್. ಶಿಬಿರಾರ್ಥಿಗಳು ಪ್ರಯತ್ನಿಸಬೇಕು ಎಂದು ಸಂಸದ ಜಯಪ್ರಕಾಶ್ ಹೆಗ್ಡೆ ಕರೆ ನೀಡಿದ್ದಾರೆ.
ಕುಂಭಾಶಿ ಆನೆಗುಡ್ಡೆ ವಿನಾಯಕ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಕೋಟ ಪಡುಕೆರೆ ಲಕ್ಷ್ಮೀ ಸೋಮ ಬಂಗೇರ ಸ.ಪ್ರ.ದ. ಕಾಲೇಜು ಮತ್ತು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಪ್ರಾಂಶುಪಾಲ ಪ್ರೊ. ವಸಂತರಾಜ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ರಾಜೇಂದ್ರ ಕುಮಾರ್ ನಾಯಕ್, ಕೋಟದ ಉದ್ಯಮಿ ಆನಂದ್ ಸಿ. ಕುಂದರ್, ಕುಂಭಾಷಿಯ ಕೊರ್ಗಿ ವಿಠಲ ಶೆಟ್ಟಿ, ಐ.ಟಿ.ಡಿ.ಪಿ.ಯ ಯೋಜನಾ ಸಮನ್ವಯಾಧಿಕಾರಿ ಡಾ. ಉದಯ ಶೆಟ್ಟಿ, ಕುಂಭಾಶಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋವಿಂದ ಪುತ್ರನ್, ಶಾಲೆಯ ಮುಖ್ಯ ಶಿಕ್ಷಕಿ ಭಾರತಿ, ಶಾಲಾಭಿವೃದ್ಧಿ ಸಮಿತಿಯ ಅಣ್ಣಯ್ಯ ಪುತ್ರನ್, ಶಿಬಿರದ ಯೋಜನಾಧಿಕಾರಿ ಮಂಜುನಾಥ ಆಚಾರಿ, ಘಟಕದ ನಾಯಕರಾದ ಶ್ರವಣ ಡಿ. ನಾಯಕ್, ವಿವೇಕ್, ಸುಮಾ, ಸಹನಾ ಇದ್ದರು.
ಶಿಬಿರದ ಯೋಜನಾಧಿಕಾರಿ ರವಿಪ್ರಸಾದ್ ಕೆ.ಜಿ., ಶಿಬಿರಾರ್ಥಿಗಳಾದ ಮಂಜುಳಾ, ಶೈಲಜಾ ಮತ್ತು ಪ್ರಸಾದ್ ಅನುಭವ ಹಂಚಿಕೊಂಡರು.
ವಿದ್ಯಾರ್ಥಿ ವಿವೇಕ್ ಸ್ವಾಗತಿಸಿದರು. ಸಹನಾ ವಂದಿಸಿದರು. ಸುಮಾ ಕಾರ್ಯಕ್ರಮ ನಿರೂಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾದಿಂದ ತೈಲ ಆಮದು: ಭಾರತದ ಮೇಲೆ ಶೇ.100 ರಷ್ಟು ಸುಂಕ ವಿಧಿಸಲು ಅಮೆರಿಕ ಸಂಸದರ ಪ್ರಸ್ತಾಪ!

'ತೀವ್ರ ಧ್ರುವೀಕರಣಗೊಂಡ ಜಗತ್ತು, ಪಶ್ಚಿಮ ಏಷ್ಯಾ ಸಂಘರ್ಷದ ನಡುವೆಯೂ ಬ್ರಿಕ್ಸ್ ಶೃಂಗಸಭೆ ಯಶಸ್ವಿ-ಎಸ್ ಜೈಶಂಕರ್

ಶೇ. 20ರಷ್ಟು ಅಲ್ಪ ಸಂಖ್ಯಾತರು ಸಸ್ಯಾಹಾರಿಗಳು: ಬ್ರಿಕ್ಸ್ ಸಸ್ಯಾಹಾರಿ ಮೆನು ಸಂಬಂದ ಓವೈಸಿ ಪ್ರತಿಕ್ರಿಯೆ

ಸಮುದ್ರ ಅಡ್ಡವಿರದಿದ್ದರೆ ನೆಹರೂ- ಗಾಂಧಿ ಕುಟುಂಬ ಅರಬ್‌ ದೇಶಗಳಲ್ಲೂ ಚುನಾವಣೆಗೆ ನಿಲ್ತಿತ್ತು: ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್!

ಇನ್ಸ್ ಪೆಕ್ಟರ್ ಧನಂಜಯ್ ಧಮ್ಕಿಗೆ ಸೆಡ್ಡು: ಪೊಲೀಸ್ ಠಾಣೆಯ 200 ಮೀಟರ್ ಅಂತರದಲ್ಲೇ ಮಹಾಗಣಪತಿ ಪ್ರತಿಷ್ಠಾಪನೆ! ಶೋಭಾಯಾತ್ರೆಗೆ ಸಜ್ಜು