ಕೊಡಗು

ಕುಶಾಲನಗರ ಪಟ್ಟಣ ಪಂಚಾಯ್ತಿ ಕಚೇರಿಯಲ್ಲಿ ಸಿಸಿ ಕ್ಯಾಮೆರಾಗಳಿಗೆ ಚಾಲನೆ

ಕುಶಾಲನಗರ: ಕುಶಾಲನಗರ ಪಪಂ ಮೂಲಕ ಕಚೇರಿಯಲ್ಲಿ ಪಾರದರ್ಶಕ ಆಡಳಿತ, ಪೌರ ಕಾರ್ಮಿಕರ ಆರೋಗ್ಯ ಸುರಕ್ಷತೆ ಹಾಗು ಪರಿಸರ ಉಳಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳಿಗೆ ಚಾಲನೆ ನೀಡಲಾಯಿತು.  ಪಂಚಾಯಿತಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ, ಕಚೇರಿಯಲ್ಲಿ ಅಳವಡಿಸಲಾದ ಸಿಸಿ ಕ್ಯಾಮೆರಾಗಳಿಗೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಡಿ.ಕೆ. ತಿಮ್ಮಪ್ಪ ಚಾಲನೆ ನೀಡಿದರು. ನಂತರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಗರಿಕರಿಗೆ ಸೂಕ್ತ ಸೇವೆ ಹಾಗು ಪಾರದರ್ಶಕ ಆಡಳಿತ ನಿರ್ವಹಣೆಗಾಗಿ ಆಡಳಿತ ಮಂಡಳಿ ತೀರ್ಮಾನದಂತೆ ರು. 1.80 ಲಕ್ಷ ವೆಚ್ಚದಲ್ಲಿ ಸಿಸಿ ಕ್ಯಾಮೆರಾಗಳನ್ನು ಕಚೇರಿಯಲ್ಲಿ ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಕುಶಾಲನಗರ ಪಟ್ಟಣದಲ್ಲಿ ಸಮರ್ಪಕ ಕಸವಿಲೇವಾರಿಗೆ ಯೋಜನೆ ರೂಪಿಸಲಾಗಿದೆ. ಮನೆಮನೆಗಳಿಂದ ತ್ಯಾಜ್ಯಗಳನ್ನು ವಿಂಗಡಿಸಿ, ಸಂಗ್ರಹಿಸಲು ಅನುಕೂಲವಾಗುವ ನಿಟ್ಟಿನಲ್ಲಿ ರು. 5 ಲಕ್ಷ ವೆಚ್ಚದ ಯೋಜನೆಯಡಿ ಪ್ರತಿ ಮನೆಗಳಿಗೆ ತಲಾ 2 ಬಕೆಟ್‌ಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.  ಇದೇ ಸಂದರ್ಭ 18 ಪೌರ ಕಾರ್ಮಿಕರಿಗೆ  ಆರೋಗ್ಯರಕ್ಷಕ ಸೌಲಭ್ಯಗಳಾದ ರೈನ್ಕೋಟ್, ಮಾಸ್ಕ್, ಗ್ಲೌಸ್, ಗಂಬೂಗಟ್‌ಗಳ ವಿತರಣೆ ನಡೆಯಿತು. ಉಪಾಧ್ಯಕ್ಷೆ ಪಾರ್ವತಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಚ್.ಡಿ. ಚಂದ್ರು, ರಶ್ಮಿ ಅಮೃತ್, ಸದಸ್ಯರಾದ ಎಚ್.ಕೆ. ಕರಿಯಪ್ಪ, ಮಧುಸೂದನ್, ಪ್ರಮೋದ್ ಮುತ್ತಪ್ಪ, ರೇಣುಕಾ, ಕವಿತಾ, ಸುರೆಯಾಭಾನು, ಲಲಿತ, ಮುಖ್ಯಾಧಿಕಾರಿ ಕೆ.ಎಲ್. ರಮೇಶ್, ಎಂಜಿನಿಯರ್ ರಘು, ಆರೋಗ್ಯಾಧಿಕಾರಿ ಸತೀಶ್ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT