ಕೊಡಗು

ಬೇಸಿಗೆಗೆ ಹಾರಂಗಿ ನೀರಿನ ಪ್ರಮಾಣ ಕಾಯ್ದುಕೊಳ್ಳಲು ಕ್ರಮಕ್ಕೆ ಆಗ್ರಹ

ಕುಶಾಲನಗರ: ಜಲಾಶಯದ ಅಚ್ಚುಕಟ್ಟು ವ್ಯಾಪ್ತಿಯ ರೈತರಿಗೆ ಬೇಸಿಗೆ ಬೆಳೆಗೆ ನೀರು ಹರಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಜಲಾಶಯದಲ್ಲಿ 4 ಟಿಎಂಸಿ ನೀರಿಯ ಪ್ರಮಾಣವನ್ನು ಕಾಯ್ದುಕೊಳ್ಳುವಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಹಾರಂಗಿ ಯೋಜನಾ ವೃತ್ತದ ನೀರು ಬಳಕೆದಾರರ ಸಂಘದ ಮಹಾಮಂಡಳ ಅಧ್ಯಕ್ಷ ಎನ್.ಸಿ.ಚೌಡೇಗೌಡ ಆಗ್ರಹಿಸಿದ್ದಾರೆ.  ಅವರು ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಹುಣಸೂರು ಮತ್ತು ಪಿರಿಯಾಪಟ್ಟಣ ತಾಲೂಕು ವ್ಯಾಪ್ತಿಯ ಕೆರೆ ಕಟ್ಟೆಗಳನ್ನು ತುಂಬಿಸುವ ಸಲುವಾಗಿ ಈಗಾಗಲೇ ಜಲಾಶಯದಿಂದ 500 ಕ್ಯುಸೆಕ್ ನೀರನ್ನು ಕಾಲುವೆಗಳ ಮೂಲಕ ಹೊರಬಿಡಲಾಗಿದೆ ಎಂದ ಅವರು ಇನ್ನು 10 ದಿನಗಳಲ್ಲಿ ಈ ವ್ಯಾಪ್ತಿಯ ಕರೆಕಟ್ಟೆಗಳು ತುಂಬಿಕೊಳ್ಳಲಿವೆ ಎಂದಿದ್ದಾರೆ. ರೈತರು ಎಲ್ಲವನ್ನೂ ಸರ್ಕಾರದಿಂದಲೇ ನಿರೀಕ್ಷೆ ಮಾಡದೆ ನೀರಿನ ಸದ್ಬಳಕೆ ಬಗ್ಗೆ ಎಚ್ಚರ ವಹಿಸುವುದು ಅವಶ್ಯಕವಾಗಿದೆ ಎಂದು ತಿಳಿಸಿದ್ದಾರೆ. ಈ ಸಂದರ್ಭ ಮಹಾಮಂಡಳದ ಉಪಾಧ್ಯಕ್ಷ ದೇವರಾಜ್, ಇತರರು ಇದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

''ಲೋ-ವೇಜ್ ಫಾರಿನರ್ಸ್ ಬೇಡ'' ಎಂದ ಜೆಡಿ ವ್ಯಾನ್ಸ್: 'ನಿಮ್ಮ ಹಿಂದೂ ಪತ್ನಿಯೂ ವಿದೇಶಿಯಲ್ಲವೇ?' ಉಷಾ ವ್ಯಾನ್ಸ್ ಹಿನ್ನೆಲೆ ಹಿಡಿದು ನೆಟ್ಟಿಗರ ಹಿಗ್ಗಾಮುಗ್ಗಾ ಟ್ರೋಲ್..!

'ಪನಾಮ ಕಾಲುವೆ ಬಿಟ್ಟುಕೊಟ್ಟಿದ್ದು ದೊಡ್ಡ ಮೂರ್ಖತನದ ನಿರ್ಧಾರ': ಚೀನಾ ಕಬಳಿಸಲು ಯತ್ನಿಸುತ್ತಿದೆ; ಟ್ರಂಪ್

'ಗುರುದಕ್ಷಿಣೆಯೇ ನಮ್ಮ ಆದಾಯ, ಪ್ರತಿಯೊಂದು ರೂಪಾಯಿಗೂ ಲೆಕ್ಕವಿದೆ', ನಮಗೆ ನೋಂದಣಿಯ ಅಗತ್ಯವಿಲ್ಲ: ಪ್ರಿಯಾಂಕ್ ಖರ್ಗೆಗೆ RSS ತಿರುಗೇಟು

Hindi Imposition: BEL ಸರ್ಕಲ್‌ನಲ್ಲಿ ಹಿಂದಿ ನಾಮಫಲಕ ಕಿತ್ತೆಸೆದ ಕರವೇ ಕಾರ್ಯಕರ್ತರು; FIR ದಾಖಲು

ಭಾರತಕ್ಕೆ ಆಗಮಿಸಿದ ಜಪಾನ್ ಪ್ರಧಾನಿ; ಜು.2 ರಂದು ಪ್ರಧಾನಿ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ