ಕೊಡಗು

ರು. 4 ಲಕ್ಷ ಮೌಲ್ಯದ ಶ್ರೀಗಂಧ ವಶ

ಗೋಣಿಕೊಪ್ಪಲು: ಇಲ್ಲಿಗೆ ಸಮೀಪ ತೂಚಮಕೇರಿಯ ಮಾಚಿಮಾಡ ನರೇಂದ್ರ ಎಂಬವರ ಕಾಫಿ ತೋಟದಲ್ಲಿ ಗೊಬ್ಬರ ಚೀಲದಲ್ಲಿ ಬಚ್ಚಿಡಲಾಗಿದ್ದ ಸುಮಾರು ರು. 4 ಲಕ್ಷ ಮೌಲ್ಯದ ಗಂಧದ ತುಂಡುಗಳನ್ನು ಬುಧವಾರ ಪೊನ್ನಂಪೇಟೆ ಅರಣ್ಯ ಇಲಾಖೆ ವಶಪಡಿಸಿಕೊಂಡಿದೆ.
ಅರಣ್ಯ ಇಲಾಖೆಗೆ ದೊರೆತ ಖಚಿತ ಮಾಹಿತಿ ಮೇರೆ ಪೊನ್ನಂಪೇಟೆ ವಲಯಾರಣ್ಯಾಧಿಕಾರಿ ಕೃಷ್ಣಯ್ಯ ಹಾಗೂ ಸಿಬ್ಬಂದಿತೂಚಮಕೇರಿ ಕಾಫಿ ತೋಟದಿಂದ ವಶಪಡಿಸಿದ್ದಾರೆ.
 ಬೇರೆಡೆ ಗಂಧದ ಮರ ಕಡಿದು ತುಂಡುಗಳನ್ನಾಗಿ ಮಾರ್ಪಡಿಸಿ ತಂದಿರಬಹುದು ಎಂದು ಶಂಕಿಸಲಾಗಿದೆ. ಪ್ರಕರಣ ದಾಖಲಿಸಿರುವ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಹಾಕಿಪಟು ಸುನಿಲ್‌ಗೆ ಸನ್ಮಾನ ಇಂದು
ಸೋಮವಾರಪೇಟೆ: ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಭಾರತ ತಂಡ ಹಾಕಿಯಲ್ಲಿ ಬೆಳ್ಳಿ ಪದಕ ಪಡೆದಿದ್ದಲ್ಲದೆ ತಂಡದಲ್ಲಿ ಪ್ರಮುಖ ಆಟಗಾರನಾಗಿ ಮಿಂಚಿದ್ದ ಸೋಮವಾರಪೇಟೆ ಮೂಲದ ಎಸ್.ವಿ.ಸುನಿಲ್‌ಗೆ ಆ.7ರಂದು ಪಟ್ಟಣದಲ್ಲಿ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ. ಇಲ್ಲಿನ ಡಾಲ್ಫೀನ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ನಗರದ ಪತ್ರಿಕಾಭವನದಲ್ಲಿ ಬೆಳಗ್ಗೆ 11 ಗಂಟೆಗೆ ಆಯೋಜಿಸಲಾಗಿರುವ ಸಮಾರಂಭದಲ್ಲಿ ಎಸ್.ವಿ. ಸುನಿಲ್ ಅವರನ್ನು ಸನ್ಮಾನಿಸಲಾಗುವುದು ಎಂದು ಕ್ಲಬ್ ಅಧ್ಯಕ್ಷ ಅಶೋಕ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT