ಕೋಲಾರ

ಮಕ್ಕಳ ದೈಹಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ'

ಕೋಲಾರ: ಮಕ್ಕಳ ದೈಹಿಕ ಬೆಳವಣಿಗೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಕ್ರೀಡೆಗಳು ಸಹಕಾರಿಯಾಗಿವೆ ಎಂದು ವಕ್ಕಲೇರಿ ಗ್ರಾ.ಪಂ ಅಧ್ಯಕ್ಷ ರಾಜಪ್ಪ ತಿಳಿಸಿದರು.
ತಾಲೂಕಿನ ಗುಟ್ಟಹಳ್ಳಿಯಲ್ಲಿ ನಡೆದ ವಕ್ಕಲೇರಿ ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟವನ್ನು ಉದ್ಘಾಟಿಸಿದ ಅವರು, ಕ್ರೀಡೆಗಳಿಂದಾಗಿ ಮಕ್ಕಳಲ್ಲಿ ಶೈಕ್ಷಣಿಕವಾಗಿಯೂ ಉತ್ಸಾಹ ಇಮ್ಮಡಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ನಮ್ಮ ದೇಶದಲ್ಲಿ ನೂರಿಪ್ಪತ್ತು ಕೋಟಿ ಜನಸಂಖ್ಯೆಯಿದ್ದರೂ ಕ್ರೀಡಾ ಕ್ಷೇತ್ರದಲ್ಲಿ ನಮ್ಮ ಸಾಧನೆ ಸಾಲದು ಎಂದ ಅವರು, ಮಕ್ಕಳಲ್ಲಿ ಕ್ರೀಡಾಭಿರುಚಿ ಬೆಳೆಸಲು ಸರ್ಕಾರ ಅಗತ್ಯ ಸೌಲಭ್ಯ ನೀಡಬೇಕೆಂದರು. ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಮಂಜುನಾಥ್, ಕಾಮನ್ವೆಲ್ತ್ ಕೂಟದಲ್ಲಿ ನಮ್ಮ ದೇಶ ಐದನೇ ರ್ಯಾಂಕ್ ಗಳಿಸಿದೆ, ಆದರೆ ಮುಂದಿನ ದಿನಗಳಲ್ಲಿ ಕ್ರೀಡೆಗೆ ಮತ್ತಷ್ಟು ಪ್ರೋತ್ಸಾಹ ನೀಡಿದಲ್ಲಿ ಅದು ಪ್ರಥಮ ಸ್ಥಾನಕ್ಕೇರಲು ಅಡ್ಡಿಯಿಲ್ಲ ಎಂದು ತಿಳಿಸಿದರು.
ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಮಂಜುನಾಥ್, ಪ್ರಾಥಮಿಕ ಹಂತದಲ್ಲೇ ಮಕ್ಕಳಲ್ಲಿ ಕ್ರೀಡಾಭಿರುಚಿ ಬೆಳೆಸುವ ಮೂಲಕ ಅವರನ್ನು ಕ್ರೀಡಾರಂಗದಲ್ಲಿ ಉನ್ನತ ಸ್ಥಾನಕ್ಕೇರಿಸಬಹುದು ಎಂದರು. ಕ್ರೀಡಾಕೂಟದಲ್ಲಿ 15 ಶಾಲೆಗಳು ಪಾಲ್ಗೊಂಡಿದ್ದು, ಉಸ್ತುವಾರಿಯನ್ನು ಮುಖ್ಯ ಶಿಕ್ಷಕ ವೆಂಕಟೇಶಪ್ಪ ವಹಿಸಿದ್ದು, ಶಿಕ್ಷಕ ವೆಂಕಟರಾಮ್ ಸ್ವಾಗತಿಸಿ, ನಾರಾಯಣಸ್ವಾಮಿ ನಿರೂಪಿಸಿ, ಇಬ್ರಾಹಿಂ ಖಾನ್ ವಂದಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬ್ರಿಟಿಷರ ದಬ್ಬಾಳಿಕೆ ನಡುವೆಯೂ 'ವಂದೇ ಮಾತರಂ' ಬಂಡೆಯಂತೆ ಗಟ್ಟಿಯಾಗಿ ನಿಂತಿತು: ಲೋಕಸಭೆಯಲ್ಲಿ ಪ್ರಧಾನಿ ಮೋದಿ

ಮಲಯಾಳಂ ನಟಿ ಮೇಲೆ ಅತ್ಯಾಚಾರ ಪ್ರಕರಣ: ನಟ ದಿಲೀಪ್ ಖುಲಾಸೆ; ಪಲ್ಸರ್ ಸುನಿ ಸೇರಿ ಆರು ಮಂದಿ ತಪ್ಪಿತಸ್ಥರು

ಮಧ್ಯಪ್ರದೇಶ: ಕೋಟಿ ಕೋಟಿ ಬಹುಮಾನ ಹೊಂದಿದ್ದ 10 ನಕ್ಸಲರು ಶಸ್ತ್ರಾಸ್ತ್ರ ಸಹಿತ ಶರಣಾಗತಿ!

ಡಿಕೆಶಿ ಅವಕಾಶ ಕೇಳಿದ್ರು, ಆದ್ರೆ CM ಬದಲಾವಣೆಗೆ ಹೈಕಮಾಂಡ್ ಸಮ್ಮತಿಸಿಲ್ಲ: ಯತೀಂದ್ರ ಸ್ಫೋಟಕ ಹೇಳಿಕೆ

'₹500 ಕೋಟಿ ಕೊಟ್ಟರೆ ಸಿಎಂ ಹುದ್ದೆ': ನವಜೋತ್ ಕೌರ್ ಸಿಧು 'ಮೆಂಟಲ್ ಆಸ್ಪತ್ರೆಗೆ' ದಾಖಲಾಗಬೇಕು; ಡಿಕೆ ಶಿವಕುಮಾರ್

SCROLL FOR NEXT