ಕೊಪ್ಪಳ

ಕಾಮಿಸ್ವಾಮಿ ವರ್ತನೆ ಖಂಡಿಸಿ ಕರವೇ ಪ್ರತಿಭಟನೆ

ಗಂಗಾವತಿ: ತಾವರಗೇರಾ ಗ್ರಾಮದ ಬನಶಂಕರಿ ದೇವಸ್ಥಾನದಲ್ಲಿ ಹಲವು ತಿಂಗಳಿನಿಂದ ಗ್ರಾಮದ ಸಾರ್ವಜನಿಕರನ್ನು ಹಾಗೂ ಮುಗ್ಧರನ್ನು ಮೂಢನಂಬಿಕೆಯಡಿ ವಂಚಿಸುತ್ತಿದ್ದ ಕಾಮಿಸ್ವಾಮಿ ಯಂಕಣ್ಣ ಪ್ರಕರಣ ವರದಿ ಮಾಡಲು ತೆರಳಿದ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಿ ಹಾಗೂ ಪ್ರತಿಭಟಿಸಿದ ಕರವೇ ಸ್ವಾಭಿಮಾನಿ ಬಣದ ಕಾರ್ಯಕರ್ತರ  ಮೇಲೆ ದಾಖಲಿಸಿದ ಸುಳ್ಳು ಮೊಕದ್ದಮೆ ವಾಪಾಸ್ ಪಡೆಯುವಂತೆ ಒತ್ತಾಯಿಸಿ ಕರವೇ ನಗರದ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಪ್ರತಿಭಟನೆ ನಡೆಸಿತು. ಜಿಲ್ಲಾಧ್ಯಕ್ಷ ರಾಜೇಶ ಅಂಗಡಿ ಮಾತನಾಡಿ, ಕೌಟಂಬಿಕ ಸಮಸ್ಯೆಗಳನ್ನು ಹೊತ್ತು ಬರುವ ಮಹಿಳೆಯರಿಗೆ ಎಲ್ಲಾ ಸಮಸ್ಯೆಗಳನ್ನು ನಿವಾರಿಸುವುದಾಗಿ ನಂಬಿಸಿ ಪೂಜೆ ಹೆಸರಿನಲ್ಲಿ ಅವರನ್ನು ತನ್ನ ಕಾಮತೃಪ್ತಿಗಾಗಿ ಬಳಸಿಕೊಳ್ಳುತ್ತಿದ್ದಾನೆ. ಇದನ್ನು ಮಹಿಳೆಯರು ಪ್ರಶ್ನಿಸಲು ಮುಂದಾದರೆ ನನ್ನ ಮೈಮೇಲೆ ದೇವಿ ಬರುತ್ತಾಳೆ ಏನಾದರೂ ಮಾಡಿದರೆ ನಿನ್ನ ಪ್ರಾಣಕ್ಕೆ ಸಂಚಕಾರವಿದೆ ಎಂದು ಹೆದರಿಸುತ್ತಿದ್ದ ಕಾಮಿಸ್ವಾಮಿ ಯಂಕಣ್ಣನ ವರ್ತನೆ ಖಂಡನೀಯ ಎಂದರು. ಈ ಪ್ರಕರಣ ಕುರಿತು ವರದಿ ಮಾಡಲು ಬಂದಿದ್ದ ಮಾಧ್ಯಮ ವರದಿಗಾರರ ಮೇಲೆ ಕೆಲವರು ಹಲ್ಲೆ ನಡೆಸಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಬಣ) ತೀವ್ರವಾಗಿ ವಿರೋಧಿಸುತ್ತದೆ. ತಮ್ಮ  ಮೇಲೆ ತಾವರಗೇರಾ ಪೊಲೀಸರು ಸುಳ್ಳು ಮೊಕದ್ದಮೆ ದಾಖಲಿಸಿಕೊಂಡಿದ್ದು, ಕೂಡಲೇ ಆ ಮೊಕದ್ದಮೆ ವಾಪಾಸ್ ಪಡೆಯಬೇಕು. ಹಲ್ಲೆ ಮಾಡಿದವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮಂಜುನಾಥ ಜಂಗರ್, ಹೊನ್ನಪ್ಪ ನಾಯಕ, ನಾಗರಾಜ ಗೂಗಿಬಂಡಿ, ನಾಗರಾಜ ಹಕ್ಕಲ್, ಎಸ್.ಎಸ್. ಹೈದರಲಿ, ಈರಣ್ಣ ಮಡಿವಾಳ, ವೆಂಕಟೇಶಬಾಬು, ಅವಿನ್, ಕುಮಾರ್, ಮುರುಗೇಶ, ಯಮನೂರ, ರವಿ, ಸೈಯ್ಯದ್, ನವೀಂ ಹೈದರ್, ಮಹೇಶ, ಶಿವು, ಶಶಿ, ಶೇಷ, ರಾಜಾ ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ, ನೊಬೆಲ್​ ಶಾಂತಿ ಪ್ರಶಸ್ತಿಗೆ ನನ್ನಷ್ಟು ಅರ್ಹರು ಯಾರೂ ಇಲ್ಲ; ಡೊನಾಲ್ಡ್ ಟ್ರಂಪ್

WPL 2026: 4 ಓವರ್, 1 ಮೇಡನ್.. ಸೌಂದರ್ಯ ಅಷ್ಟೇ ಅಲ್ಲ.. ಪ್ರದರ್ಶನದಲ್ಲೂ ಟಾಪ್.. RCBಯ ಲೇಡಿ ಹೇಜಲ್ವುಡ್ Lauren Bell!

ಡಿ-ಕೋಡ್: ದ್ವೇಷ ಭಾಷಣ ಮಸೂದೆ ಎಂಬ ‘ಗರಗಸ’; DDT ಆಗುವತ್ತ ಕರ್ನಾಟಕ ಸರ್ಕಾರ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಮಸೂದೆ ವಿರುದ್ಧ ರಾಷ್ಟ್ರಪತಿಗೆ ನಿಯೋಗ; ರಾಜ್ಯ ಸರ್ಕಾರ

SCROLL FOR NEXT