ಕೊಪ್ಪಳ

ಕಾಮಿಸ್ವಾಮಿ ವರ್ತನೆ ಖಂಡಿಸಿ ಕರವೇ ಪ್ರತಿಭಟನೆ

ಗಂಗಾವತಿ: ತಾವರಗೇರಾ ಗ್ರಾಮದ ಬನಶಂಕರಿ ದೇವಸ್ಥಾನದಲ್ಲಿ ಹಲವು ತಿಂಗಳಿನಿಂದ ಗ್ರಾಮದ ಸಾರ್ವಜನಿಕರನ್ನು ಹಾಗೂ ಮುಗ್ಧರನ್ನು ಮೂಢನಂಬಿಕೆಯಡಿ ವಂಚಿಸುತ್ತಿದ್ದ ಕಾಮಿಸ್ವಾಮಿ ಯಂಕಣ್ಣ ಪ್ರಕರಣ ವರದಿ ಮಾಡಲು ತೆರಳಿದ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಿ ಹಾಗೂ ಪ್ರತಿಭಟಿಸಿದ ಕರವೇ ಸ್ವಾಭಿಮಾನಿ ಬಣದ ಕಾರ್ಯಕರ್ತರ  ಮೇಲೆ ದಾಖಲಿಸಿದ ಸುಳ್ಳು ಮೊಕದ್ದಮೆ ವಾಪಾಸ್ ಪಡೆಯುವಂತೆ ಒತ್ತಾಯಿಸಿ ಕರವೇ ನಗರದ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಪ್ರತಿಭಟನೆ ನಡೆಸಿತು. ಜಿಲ್ಲಾಧ್ಯಕ್ಷ ರಾಜೇಶ ಅಂಗಡಿ ಮಾತನಾಡಿ, ಕೌಟಂಬಿಕ ಸಮಸ್ಯೆಗಳನ್ನು ಹೊತ್ತು ಬರುವ ಮಹಿಳೆಯರಿಗೆ ಎಲ್ಲಾ ಸಮಸ್ಯೆಗಳನ್ನು ನಿವಾರಿಸುವುದಾಗಿ ನಂಬಿಸಿ ಪೂಜೆ ಹೆಸರಿನಲ್ಲಿ ಅವರನ್ನು ತನ್ನ ಕಾಮತೃಪ್ತಿಗಾಗಿ ಬಳಸಿಕೊಳ್ಳುತ್ತಿದ್ದಾನೆ. ಇದನ್ನು ಮಹಿಳೆಯರು ಪ್ರಶ್ನಿಸಲು ಮುಂದಾದರೆ ನನ್ನ ಮೈಮೇಲೆ ದೇವಿ ಬರುತ್ತಾಳೆ ಏನಾದರೂ ಮಾಡಿದರೆ ನಿನ್ನ ಪ್ರಾಣಕ್ಕೆ ಸಂಚಕಾರವಿದೆ ಎಂದು ಹೆದರಿಸುತ್ತಿದ್ದ ಕಾಮಿಸ್ವಾಮಿ ಯಂಕಣ್ಣನ ವರ್ತನೆ ಖಂಡನೀಯ ಎಂದರು. ಈ ಪ್ರಕರಣ ಕುರಿತು ವರದಿ ಮಾಡಲು ಬಂದಿದ್ದ ಮಾಧ್ಯಮ ವರದಿಗಾರರ ಮೇಲೆ ಕೆಲವರು ಹಲ್ಲೆ ನಡೆಸಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಬಣ) ತೀವ್ರವಾಗಿ ವಿರೋಧಿಸುತ್ತದೆ. ತಮ್ಮ  ಮೇಲೆ ತಾವರಗೇರಾ ಪೊಲೀಸರು ಸುಳ್ಳು ಮೊಕದ್ದಮೆ ದಾಖಲಿಸಿಕೊಂಡಿದ್ದು, ಕೂಡಲೇ ಆ ಮೊಕದ್ದಮೆ ವಾಪಾಸ್ ಪಡೆಯಬೇಕು. ಹಲ್ಲೆ ಮಾಡಿದವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮಂಜುನಾಥ ಜಂಗರ್, ಹೊನ್ನಪ್ಪ ನಾಯಕ, ನಾಗರಾಜ ಗೂಗಿಬಂಡಿ, ನಾಗರಾಜ ಹಕ್ಕಲ್, ಎಸ್.ಎಸ್. ಹೈದರಲಿ, ಈರಣ್ಣ ಮಡಿವಾಳ, ವೆಂಕಟೇಶಬಾಬು, ಅವಿನ್, ಕುಮಾರ್, ಮುರುಗೇಶ, ಯಮನೂರ, ರವಿ, ಸೈಯ್ಯದ್, ನವೀಂ ಹೈದರ್, ಮಹೇಶ, ಶಿವು, ಶಶಿ, ಶೇಷ, ರಾಜಾ ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Vice President Election 2025: ನೂತನ ಉಪ ರಾಷ್ಟ್ರಪತಿಯಾಗಿ ಸಿ ಪಿ ರಾಧಾಕೃಷ್ಣನ್ ಆಯ್ಕೆ

ಮದ್ದೂರಿನಲ್ಲಿ ಕಲ್ಲು ತೂರಾಟ: ಶಾಂತಿ ಕದಡುವುದೇ ಬಿಜೆಪಿ ಉದ್ದೇಶ; ಜಾತಿ, ಧರ್ಮ, ಪಕ್ಷ ಲೆಕ್ಕಿಸದೆ ಕ್ರಮ

ಮದ್ದೂರಿನಲ್ಲಿ ಕಲ್ಲು ತೂರಾಟ: ಲೈಟ್ ಆಫ್ ಮಾಡಿರುವುದು ಅನುಮಾನ ಮೂಡಿಸುತ್ತಿದೆ - IGP

Asia Cup 2025: "Kisne Bola?".. ಪತ್ರಕರ್ತನಿಗೆ Suryakumar Yadav ಖಡಕ್ ಉತ್ತರ, ಪಾಕ್ ಕ್ಯಾಪ್ಟನ್‌ಗೆ ಓಪನ್ ಚಾಲೆಂಜ್!

ಬೆಂಗಳೂರಿನಲ್ಲಿ ಮತ್ತೊಂದು ಡಿಜಿಟಲ್ ಅರೆಸ್ಟ್ ಹಗರಣ: 70 ವರ್ಷದ ವ್ಯಕ್ತಿಗೆ 30 ಲಕ್ಷ ರೂ.ಗೂ ಹೆಚ್ಚು ವಂಚನೆ!

SCROLL FOR NEXT