ಕೊಪ್ಪಳ

ರಾಮದೇವ ಬಾಬಾ ಗಡಿಪಾರಿಗೆ ಒತ್ತಾಯ

ಗಂಗಾವತಿ: ದಲಿತರ ಸ್ವಾಭಿಮಾನಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡಿರುವ ಬಾಬಾ ರಾಮದೇವನನ್ನು ಭಾರತದಿಂದ ಗಡಿಪಾರು ಮಾಡಬೇಕೆಂದು ಸಿಪಿಐಎಂಎಲ್ ಜಿಲ್ಲಾ ಸಮಿತಿ ಒತ್ತಾಯಿಸುತ್ತದೆ ಎಂದು ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಸನಗೌಡ ಸುಳೆಕಲ್ ತಿಳಿಸಿದ್ದಾರೆ. ರಾಮದೇವ ಬಾಬಾ ದಲಿತರ ಬಗ್ಗೆ ನೀಡಿದ ಹೇಳಿಕೆ ಬಗ್ಗೆ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಚರ್ಚಿಸಲಾಯಿತು. ಈ ಸಭೆಯಲ್ಲಿ ಎಐಸಿಸಿಟಿಯು ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ, ತಾಲೂಕಾಧ್ಯಕ್ಷ ಮೋಹನ್, ಅಖಿಲ ಭಾರತ ಕೃಷಿ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷ ಎಂ. ಯೇಸಪ್ಪ, ಪ್ರಗತಿಪರ ಕಟ್ಟಡ ಕಾರ್ಮಿಕ ಸಂಘದ ತಾಲೂಕಾಧ್ಯಕ್ಷ ಬಾಷಾ, ಆರ್‌ವೈಎ ಜಿಲ್ಲಾಧ್ಯಕ್ಷ ಹುಸೇನ್ ಮತ್ತಿತರ ಪದಾಧಿಕಾರಿಗಳು ಭಾಗವಹಿಸಿದ್ದರು. ಈ ಸಭೆಯಲ್ಲಿ ರಾಮದೇವನನ್ನು ಭಾರತದಿಂದ ಹೊರ ಹಾಕಬೇಕು. ಆತನ ಆಸ್ತಿ ಮುಟ್ಟುಗೋಲು ಮಾಡಿ, ವಿದೇಶದಲ್ಲಿ ಕೂಡಿಟ್ಟ ಹಣವನ್ನು ಭಾರತಕ್ಕೆ ತರಬೇಕು, ಈತನ ಒಡೆತನದ ನಕಲಿ ಪತಂಜಲಿ ಆಯುರ್ವೇದಿಕ್ ಔಷಧಗಳನ್ನು ಸರ್ಕಾರ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕೆಂದು ಒತ್ತಾಸಲಾಯಿತು. ದಲಿತರ ವಿರುದ್ಧ ಹೀನಾಯವಾಗಿ ಮಾತನಾಡುವ ಇಂತಹ ಢೋಂಗಿ ಬಾಬಾಗಳ ಮತ್ತು ರಾಜಕಾರಣಿಗಳ ವಿರುದ್ಧ ಉಗ್ರ ಹೋರಾಟ ಮಾಡಲು ಪಕ್ಷ ತೀರ್ಮಾನಿಸಿದೆ. ರಾಮದೇವನನ್ನು ಭಾರತದಿಂದ ಹೊರಹಾಕಲು ಒತ್ತಾಯಿಸಿ ರಾಷ್ಟ್ರಪತಿಗೆ ಮನವಿ ಕಳುಹಿಸಲಾಗುವುದೆಂದು ಬಸನಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Vice President Election 2025: ನೂತನ ಉಪ ರಾಷ್ಟ್ರಪತಿಯಾಗಿ ಸಿ ಪಿ ರಾಧಾಕೃಷ್ಣನ್ ಆಯ್ಕೆ

ಮದ್ದೂರಿನಲ್ಲಿ ಕಲ್ಲು ತೂರಾಟ: ಶಾಂತಿ ಕದಡುವುದೇ ಬಿಜೆಪಿ ಉದ್ದೇಶ; ಜಾತಿ, ಧರ್ಮ, ಪಕ್ಷ ಲೆಕ್ಕಿಸದೆ ಕ್ರಮ

ಮದ್ದೂರಿನಲ್ಲಿ ಕಲ್ಲು ತೂರಾಟ: ಲೈಟ್ ಆಫ್ ಮಾಡಿರುವುದು ಅನುಮಾನ ಮೂಡಿಸುತ್ತಿದೆ - IGP

Asia Cup 2025: "Kisne Bola?".. ಪತ್ರಕರ್ತನಿಗೆ Suryakumar Yadav ಖಡಕ್ ಉತ್ತರ, ಪಾಕ್ ಕ್ಯಾಪ್ಟನ್‌ಗೆ ಓಪನ್ ಚಾಲೆಂಜ್!

ಬೆಂಗಳೂರಿನಲ್ಲಿ ಮತ್ತೊಂದು ಡಿಜಿಟಲ್ ಅರೆಸ್ಟ್ ಹಗರಣ: 70 ವರ್ಷದ ವ್ಯಕ್ತಿಗೆ 30 ಲಕ್ಷ ರೂ.ಗೂ ಹೆಚ್ಚು ವಂಚನೆ!

SCROLL FOR NEXT