ಮಂಡ್ಯ

ಸಂಸತ್ನಲ್ಲಿ ಕನ್ನಡದಲ್ಲಿ ಮಾತನಾಡಿದ ಪುಟ್ಟರಾಜು

ಮಂಡ್ಯ: ಲೋಕಸಭೆ ಅಧಿವೇಶನದಲ್ಲಿ ಕನ್ನಡದ ಡಿಂಡಿಮವನ್ನು ಬಾರಿಸಿದ ಜಿಲ್ಲೆಯ ಸಂಸದ ಸಿ.ಎಸ್.ಪುಟ್ಟರಾಜು ಕಬ್ಬು ಬೆಳೆಗಾರರ ನೋವು, ಸಂಕಷ್ಟಗಳನ್ನು ಯಥಾವತ್ತಾಗಿ ವಿವರಿಸಲು ಮಾತೃಭಾಷೆ ಕನ್ನಡದಲ್ಲಿ ಮಾತನಾಡಿ ಭಾವನೆಗಳನ್ನು ಹಂಚಿಕೊಂಡರು. ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರ ಹಿತಕಾಯಲು ವಿಫಲವಾಗಿದೆ. ರಾಜ್ಯದಲ್ಲಿ ಅದರಲ್ಲೂ ಮಂಡ್ಯ ಪ್ರಾಂತ್ಯದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಕೇಳುವವರಿಲ್ಲ. ಕೇಂದ್ರ ಸರ್ಕಾರ ಕೂಡ ಜಾಣ ಮೌನಕ್ಕೆ ಜಾರುತ್ತಿದೆ. ಇದನ್ನು ಸಹಿಸುವುದು ಕಷ್ಟ ಸಾಧ್ಯ ಎಂದು ಸಂಸದ ಪುಟ್ಟರಾಜು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವುದಾಗಿ ಹೇಳಿದರು. ಕನ್ನಡಪ್ರಭದೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಕಬ್ಬು ಬೆಳೆಗಾರರ ಸಮಸ್ಯೆ ಹೆಚ್ಚಾಗುತ್ತಿದೆ. ರಾಜ್ಯ ಸರ್ಕಾರದ ಪಾತ್ರದಷ್ಟೆ ಕೇಂದ್ರ ಸರ್ಕಾರದ ಪಾತ್ರವೂ ಇದೆ. ಯಾವುದೇ ಮೀನಮೇಷ ಎಣಿಸದೇ ರೈತರ ಹಿತ ಕಾಪಾಡಿ ಎಂದು ಕೇಂದ್ರವನ್ನು ಒತ್ತಾಯಿಸಿರುವುದಾಗಿ ಹೇಳಿದರು. ಮೊದಲ ಬಾರಿಗೆ ಲೋಕಸಭೆಯಲ್ಲಿ ಜೆ.ಎಚ್. ಪಟೇಲರು ಕನ್ನಡದಲ್ಲಿ ಮಾತನಾಡಿ ಭಾಷಾಭಿಮಾನವನ್ನು ಮೆರೆದಿದ್ದರು. ಮಾತೃಭಾಷೆ ಕನ್ನಡದಲ್ಲಿ ಹೇಳಿರುವುದು ಸರ್ಕಾರದ ಕಿವಿಗೆತಾಗುತ್ತದೆ ಎಂಬ ವಿಶ್ವಾಸದಿಂದಲೇ ಮಾತನಾಡಿರುವುದಾಗಿ ಅವರು  ವಿವರಿಸಿದರು.
ಸಂಸದ, ಶಾಸಕರ ಗೈರು
ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಬಾಗಿನ ಅರ್ಪಿಸುವ ಸಮಾರಂಭದಲ್ಲಿ ಮಂಡ್ಯ ಸಂಸದ ಸಿ.ಎಸ್. ಪುಟ್ಟರಾಜು ಮತ್ತು ಶಾಸಕರಾದ ಚಲುವರಾಯಸ್ವಾಮಿ, ನಾರಾಯಣಗೌಡ ಗೈರು ಹಾಜರಾಗಿದ್ದರು. ಈ ಹಿಂದೆ ಶಾಸಕರಾಗಿದ್ದ ಅವಧಿಯಲ್ಲಿ ಸಿ.ಎಸ್. ಪುಟ್ಟರಾಜು ಮತ್ತು ಚಲುವರಾಯಸ್ವಾಮಿ ಮುಖ್ಯಮಂತ್ರಿಗಳು ಬಾಗಿನ ಸಮರ್ಪಿಸುವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದರು. ಆದರೆ, ಈ ಬಾರಿ ಅವರ  ಗೈರು ಹಾಜರಿ ಎದ್ದು ಕಾಣುತ್ತಿತ್ತು.
ಎಸ್ಬಿಎಂಗೆ ದಂಡ
ಮಂಡ್ಯ: ಗ್ರಾಹಕರಿಗೆ ಸೇವಾ ನ್ಯೂನತೆ ಉಂಟು ಮಾಡಿದ್ದರ ಜೊತೆಗೆ ಸಿಬ್ಬಂದಿ ಅನುಚಿತವಾಗಿ ವರ್ತಿಸಿದ್ದ ಕಾರಣ ಸ್ಟೇಟ್ಬ್ಯಾಂಕ್ ಆಫ್ ಮೈಸೂರು ಶಾಖೆಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ದಂಡ ವಿಧಿಸಿ ಆದೇಶ ನೀಡಿದೆ. ಮದ್ದೂರಿನ ಎಚ್.ಟಿ. ಮಮತಾ ಎಂಬುವರಿಗೆ ಎಸ್ಬಿಎಂನ ಮದ್ದೂರು ಶಾಖೆ ಸೇವಾ ನ್ಯೂನತೆ ಉಂಟು ಮಾಡಿದ್ದರಿಂದ ಪಿರ್ಯಾದುದಾರರಿಗೆ 5 ಸಾವಿರ ಪರಿಹಾರ ಹಾಗೂ 2 ಸಾವಿರ ಪ್ರಕರಣದ ಖರ್ಚನ್ನು ಪಾವತಿಸುವಂತೆ ಆದೇಶ ಹೊರಡಿಸಿದೆ. ಅರ್ಜಿದಾರರಾದ ಎಚ್.ಟಿ. ಮಮತಾ ಅವರು ಸರ್ಕಾರಿ ನೌಕರರಾಗಿದ್ದಾರೆ. ಅವರಿಗೆ ಸಂಬಂಧಿಸಿದಂತೆ ವೇತನ ಎಸ್ಬಿಎಂ ಮದ್ದೂರು ಶಾಖೆಯ ಉಳಿತಾಯ ಖಾತೆಗೆ ಜಮಾ ಆಗುತ್ತಿತ್ತು. 2014ರ ಫೆಬ್ರವರಿ 7ರಂದು ಮಮತಾ ಅವರು ಎಟಿಎಂ ಕೇಂದ್ರಕ್ಕೆ ತೆರಳಿ ತಮ್ಮ ಖಾತೆಯಲ್ಲಿದ್ದ 11,429 ರು.ಪೈಕಿ 10 ಸಾವಿರ ಹಣವನ್ನು ಪಡೆಯಲು ಯತ್ನಿಸಿದರು. ಆದರೆ ಯಂತ್ರದಲ್ಲಿನ ತಾಂತ್ರಿಕ ತೊಂದರೆ ಕಾರಣ ಹಣ ಬರಲಿಲ್ಲ. ನಂತರ ಮಾರನೇ ದಿನ ಬ್ಯಾಂಕಿಗೆ ತೆರಳಿ ಧನಾದೇಶ ಪಡೆಯಲು ಯತ್ನಿಸಿದಾಗ ಬ್ಯಾಂಕಿನ ಸಿಬ್ಬಂದಿ ಅರ್ಜಿದಾರರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಅರ್ಜಿದಾರರ ಪರವಾಗಿ ವಕೀಲ ಆರ್. ಜಗನ್ನಾಥ್ ವಾದಿಸಿದ್ದರು.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಮಸೂದೆ ವಿರುದ್ಧ ರಾಷ್ಟ್ರಪತಿಗೆ ನಿಯೋಗ; ರಾಜ್ಯ ಸರ್ಕಾರ

ಮಹಾ ಅಚ್ಚರಿ: ಶರದ್ ಪವಾರ್ ಪುತ್ರಿ ಸುಪ್ರಿಯ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್!

ಮಲಯಾಳಂ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್ಕೆ: ಕೇರಳ ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ, ಪುನರ್ ಪರಿಶೀಲನೆಗೆ ಒತ್ತಾಯ

'ರಾಜಕೀಯ ದ್ವೇಷ, ಪೊಲೀಸರ ವೈಫಲ್ಯ' ಬಳ್ಳಾರಿ ಹಿಂಸಾಚಾರ ಘಟನೆಗೆ ಕಾರಣ: ಕಾಂಗ್ರೆಸ್ ಸಮಿತಿ

SCROLL FOR NEXT