ಮೈಸೂರು

ಮೇವಿನ ಕಿರುಪೊಟ್ಟಣ ವಿತರಣೆ

ಮೈಸೂರು: ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಉದ್ಭವಿಸಬಹುದಾದ ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಮೇವಿನ ಬೀಜದ ಕಿರುಪೊಟ್ಟಣಗಳನ್ನು ಜಿಲ್ಲೆಯ 7 ತಾಲೂಕುಗಳಿಗೆ ಹೆಚ್ಚುವರಿಯಾಗಿ ಸರಬರಾಜು ಮಾಡಲಾಗಿದೆ ಎಂದು ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ.ದೇವದಾಸ್ ಹೇಳಿದ್ದಾರೆ. ಪುಸ್ತುತ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿರುವುದರಿಂದ ಮೇವು ಬೆಳೆ ಬೆಳೆಯಲು ಪೂರಕ ವಾತಾವರಣವಿದೆ. ಆಸಕ್ತ ರೈತರು ಸಮೀಪದ ಪಶುವೈದ್ಯ ಸಂಸ್ಥೆ ಸಂಪರ್ಕಿಸಿ ಮೇವಿನ ಬೀಜದ ಕಿರುಪೊಟ್ಟಣಗಳನ್ನು ಪಡೆದು ಮೇವು ಬೆಳೆ ಬೆಳೆಸಲು ಕ್ರಮ ವಹಿಸುವಂತೆ ತಿಳಿಸಿದ್ದಾರೆ.




ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ನಡುವೆ ನೂಕಾಟ
ಪೊಲೀಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ನೂಕಾಟ ನಡೆದ ಘಟನೆ ಮಂಗಳವಾರ ಇಲ್ಲಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಜರುಗಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ದಿನಗಳ ಭೇಟಿಗಾಗಿ ಮಂಗಳವಾರ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದರು. ಅವರನ್ನು ಸ್ವಾಗತಿಸಲು ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು. ಸಿದ್ದರಾಮಯ್ಯ ಅವರು ಪೊಲೀಸರಿಂದ ಗೌರವರಕ್ಷೆ ಸ್ವೀಕರಿಸಿ ಮಾಧ್ಯಮದವರ ಜೊತೆ ಮಾತನಾಡಲು ಬಂದಾಗ ಕಾರ್ಯಕರ್ತರು ಅತ್ತ ನುಗ್ಗಿದರು. ಪೊಲೀಸರು ಅವರನ್ನು ತಡೆದಾಗ, ಸಿಟ್ಟಿಗೆದ್ದ ಕಾರ್ಯಕರ್ತರು ವಾಗ್ವಾದಕ್ಕಿಳಿದರು. ಅಲ್ಲದೇ ಡೌನ್ ಡೌನ್ ಪೊಲೀಸ್ ಎಂದು ಧಿಕ್ಕಾರ ಕೂಗಿದರು. ಪಕ್ಷದ ಮುಖಂಡರು ಸಮಾಧಾನಪಡಿಸಲು ವಿಫಲರಾದಾಗ ಸ್ವತಃ ಸಿದ್ದರಾಮಯ್ಯ ಅವರೇ ಕಾರ್ಯಕರ್ತರ ಬಳಿ ತೆರಳಿ, ಸಮಾಧಾನಪಡಿಸಿ, ಪರಿಸ್ಥಿತಿ ತಿಳಿಗೊಳಿಸಿದರು.
ಡಾ.ನಂಜೇಶ್ ಕೊಪ್ಪಗೆ ಪ್ರಶಸ್ತಿ
ಮೈಸೂರು: ನೇಚರ್ ಕ್ಯೂರ್ ಸಂಸ್ಥೆಯ ಡಾ.ನಂಜೇಶ್ ಕೊಪ್ಪ ಅವರಿಗೆ ಇಂಟರ್ನ್ಯಾಷನಲ್ ಹ್ಯುಮೇನಿಟೇರಿಯನ್ ಅವಾರ್ಡ್ ಸಂದಿದೆ. ಇತ್ತೀಚೆಗೆ ಇಂಡಿಯನ್ ಬೋರ್ಡ್ ಆಫ್ ಆಲ್ಟರ್ನೇಟಿವ್ ಮೆಡಿಸಿನ್ಸ್ಯಿಂದ ಕೋಲ್ಕತಾದಲ್ಲಿ ನಡೆದ 23ನೇ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ನಂಜೇಶ್ ಅವರು ಪರ್ಯಾಯ ಔಷಧಗಳ ಪ್ರಯೋಗದಲ್ಲಿನ ನೀಡಿದ ಅಮೂಲ್ಯ ಕೊಡುಗೆ ಮತ್ತು ಅಪೂರ್ವ ಸಾಧನೆಗಾಗಿ ಈ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಸಮ್ಮೇಳನದಲ್ಲಿ ನಂಜೇಶ್ ಅವರು ಪರ್ಯಾಯ ಔಷಧಗಳ ಬಳಕೆ ಮತ್ತು ಆರೋಗ್ಯ ಎಂಬ ವಿಷಯದ ಬಗ್ಗೆ ವೈಜ್ಞಾನಿಕವಾದ ತಮ್ಮ ಉಪನ್ಯಾಸ ಮಂಡಿಸಿದರು.
ಮಹಿಳೆ ವಿರುದ್ಧ ದೂರು
ಮೈಸೂರು: ಚಿಕಿತ್ಸೆಗೆ ಪಾವತಿಸಿದ್ದ ಹಣವನ್ನು ಹಿಂಪಡೆಯಲು ಮಹಿಳೆಯೊಬ್ಬರು ಬ್ಲಾಕ್ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗರ್ಭಧಾರಣ ತಜ್ಞ ಡಾ.ಶರತ್ಕುಮಾರ್ ಮಂಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಮಿಳುನಾಡಿನ ಈರೋಡ್ ನಿವಾಸಿ ಸಂಪತಕುಮಾರ್ ಅವರ ಪತ್ನಿ ನಾಗಲಕ್ಷ್ಮೀ ಎಂಬವರು ಕಳೆದ ಎರಡು ವರ್ಷದಿಂದ ತಮ್ಮ ಬಳಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲದೇ ತಮ್ಮ ವಯಸ್ಸನ್ನು ಮರೆಮಾಚಿ ಚಿಕಿತ್ಸಾ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ. ಇದೀಗ ಚಿಕಿತ್ಸೆ ಫಲಕಾರಿಯಾಗಿಲ್ಲ ಎಂಬ ಕಾರಣಕ್ಕೆ ಈ ರೀತಿ ವರ್ತಿಸುತ್ತಿದ್ದಾರೆ. ಇದರಿಂದ ತಮ್ಮ ಸಂಸ್ಥೆಗೆ ಕಪ್ಪುಚುಕ್ಕೆ ತರುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮೆಡಿವೇವ್ ಗರ್ಭಧಾರಣಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ನಾಗಲಕ್ಷ್ಮಿ ಅವರ ಕುಟುಂಬದ ಸದಸ್ಯರು ಮೆಡಿವೇವ್ ಆಸ್ಪತ್ರೆ ಎದುರು ಆ.6  ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT