ಮೈಸೂರು

ಆಯತಪ್ಪಿ ಬಿದ್ದು ವೃದ್ಧೆ ಸಾವು

ಮೈಸೂರು: ಚಲಿಸುತ್ತಿದ್ದ ಬಸ್ನಿಂದ ಆಯತಪ್ಪಿ ಬಿದ್ದು ವೃದ್ಧೆಯೊಬ್ಬರು ಮೃತಪಟ್ಟಿರುವ ಘಟನೆ ಕುಕ್ಕರಹಳ್ಳಿ ಕೆರೆ ಸಮೀಪ ಬುಧವಾರ ನಡೆದಿದೆ. ಎಚ್.ಡಿ. ಕೋಟೆ ತಾಲೂಕು ಕಣಿಯನಹುಂಡಿ ಗ್ರಾಮದ ನಿಂಗಮ್ಮ(70) ಮೃತ ವೃದ್ಧೆ. ಸಂಬಂಧಿ ಒಬ್ಬರಿಗೆ ಆಸ್ಪತ್ರೆಯಲ್ಲಿ ಹೆರಿಗೆ ಆಗಿದ್ದರಿಂದ ನೋಡಲು ಬಂದಿದ್ದ ನಿಂಗಮ್ಮ ಅವರು ಕುಕ್ಕರಹಳ್ಳಿ ಕೆರೆ ಮತ್ತು ಗಂಗೋತ್ರಿ ಕೂಡುವ ಸಿಗ್ನಲ್ ಬಳಿ ಬಸ್ ನಿಧಾನವಾಗಿ ಚಲಿಸುತ್ತಿದ್ದಾಗ ಇಳಿಯಲು ಯತ್ನಿಸಿದಾಗ ಆಯತಪ್ಪಿ ಬಿದ್ದಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಅವರನ್ನು ಮೊದಲು ಕಾಮಾಕ್ಷಿ ಆಸ್ಪತ್ರೆಗೆ, ಬಳಿಕ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೂ ಚಿಕಿತ್ಸೆಗೆ ಸ್ಪಂದಿಸದೆ ನಿಂಗಮ್ಮ ಮೃತಪಟ್ಟಿದ್ದಾರೆ. ಈ ಸಂಬಂಧ ಕುವೆಂಪುನಗರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಾಯಕತ್ವ ಬದಲಾವಣೆ ಚರ್ಚೆ ನಡುವೆ ಕೌತುಕ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ-ಬಿ.ಕೆ ಹರಿಪ್ರಸಾದ್ ಮಾತುಕತೆ! Video

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ: ಚುನಾವಣಾ ಆಯೋಗ ಆದೇಶ!

ಕದನ ವಿರಾಮ ಇದ್ದರೂ, ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ: ನಾಲ್ವರು ಸಾವು!

ಡಿಸಿಎಂ DKS ಪುತ್ರಿಗೆ ಹೆಣ್ಣು ಮಗು ಜನನ: ತಾತನಾದ ಖುಷಿ; ಆಸ್ಪತ್ರೆಗೆ ದೌಡಾಯಿಸಿದ ಡಿ.ಕೆ ಶಿವಕುಮಾರ್

ತುಮಕೂರಿನಲ್ಲಿ 44 ನವಿಲುಗಳ ಸಾವಿಗೆ ಹಕ್ಕಿಜ್ವರ ಕಾರಣ: ICAR ಪರೀಕ್ಷೆಯಿಂದ ದೃಢ!

SCROLL FOR NEXT