ಮೈಸೂರು

ನೀರು ನಿರ್ವಹಣೆ ಜಲಮಂಡಳಿಗೆ ವಹಿಸಿ

ಕೆ.ಆರ್. ನಗರ: ಪುರಸಭೆಯ ವತಿಯಿಂದ ಪಟ್ಟಣಕ್ಕೆ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡುತ್ತಿಲ್ಲ. ಇದರಿಂದ ವಾರ್ಡ್ಗಳಲ್ಲಿ ಸಾರ್ವಜನಿಕರಿಂದ ಸದಸ್ಯರು ನಿಂದನೆಗೆ ಒಳಗಾಗುತ್ತಿದ್ದು, ಕೂಡಲೇ ನೀರು ಸರಬರಾಜು ನಿರ್ವಹಣೆಯನ್ನು ಜಲಮಂಡಳಿಗೆ ವಹಿಸಬೇಕೆಂದು ಜೆಡಿಎಸ್ ಸದಸ್ಯರು ಒತ್ತಾಯಿಸಿದರು.
ಪಟ್ಟಣದ ಪುರಸಭಾ ಆಡಳಿತ ಸಭಾಂಗಣದಲ್ಲಿ ಅಧ್ಯಕ್ಷೆ ಪಾರ್ವತಿ ನಾಗರಾಜು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಸದಸ್ಯರು ನಾಲ್ಕು ತಿಂಗಳ ಹಿಂದೆ ಜಲಮಂಡಳಿಗೆ ವಹಿಸುವಂತೆ ಒತ್ತಾಯಿಸಿದಾಗ ಶಾಸಕರ ಸಮ್ಮುಖದಲ್ಲಿ ಆಡಳಿತ ಮಂಡಳಿಯವರು 6 ತಿಂಗಳ ಕಾಲಾವಕಾಶ ಪಡೆದು ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡುವುದಾಗಿ ಹೇಳಿದ್ದರು.
ಇವರ ಮನವಿಯನ್ನು ಪುರಸ್ಕರಿಸಿದ ಶಾಸಕ ಸಾ.ರಾ.ಮಹೇಶ್ ಮತ್ತು ಸರ್ವ ಸದಸ್ಯರು ಆರು ತಿಂಗಳೊಳಗೆ ಸಮರ್ಪಕವಾಗಿ ನೀರು ಸರಬರಾಜು ಮಾಡಲು ಆಗದಿದ್ದಲ್ಲಿ ಜಲ ಮಂಡಳಿಗೆ ವಹಿಸುವುದಾಗಿ ಹೇಳಿದ್ದರು. ಆದರೆ ಈಗ ನಿರ್ವಹಣೆಯಲ್ಲಿ ವಿಫಲವಾಗಿರುವುದರಿಂದ ಸದಸ್ಯರಾದ ಕೆ.ಎಲ್.ಕುಮಾರ್, ಉಮೇಶ್ ದೂರಿದರು.
ಕುಡಿವ ನೀರು ಪೂರೈಕೆ ವಿಫಲ: ಉತ್ತಮ ಮಳೆಯಾಗುತ್ತಿದ್ದು ಕಾವೇರಿ ನದಿ ಉಕ್ಕಿ ಹರಿದು ಸಮರ್ಪಕವಾಗಿ ವಿದ್ಯುತ್ ಸರಬರಾಜಾಗುತ್ತಿದ್ದರೂ ಕುಡಿಯುವ ನೀರು ಸರಬರಾಜು ಮಾಡುವಲ್ಲಿ ಆಡಳಿತ ಮಂಡಳಿ ವಿಫಲಗೊಂಡಿದೆ ಎಂದು ದೂರಿದರು.
ಇದಕ್ಕೆ ವಿರೋಧ ವ್ಯಕ್ತಪಡಿಸಿದ ಕೆ.ಎಲ್. ಕುಮಾರ್ ಮತ್ತು ಉಮೇಶ್ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಿದ್ದನ್ನು ಕಾರ್ಯಗತಗೊಳಿಸಬೇಕಾದದ್ದು, ನಿಮ್ಮ ಜವಾಬ್ದಾರಿ ಅದು ಬಿಟ್ಟು ಬೇಜವಾಬ್ದಾರಿ ಉತ್ತರ ನೀಡಬಾರದು ಎಂದರು. ಬೇಸಿಗೆ ಕಾಲದಲ್ಲಿ ನದಿಯಲ್ಲಿ ನೀರು ಕಡಿಮೆಯಾದಾಗ ಕುಡಿಯುವ ನೀರಿನ ಪಂಪ್ಹೌಸ್ ಬಳಿ ನದಿಗೆ ಮರಳು ಮೂಟೆಯ ಬಂಡ್ ಹಾಕಲು ಪ್ರತಿ ವರ್ಷ ಹಣ ವ್ಯಯ ಮಾಡುವ ಬದಲು ಶಾಶ್ವತ ತಡೆಗೋಡೆ ಕಟ್ಟಲು ಸರ್ಕಾರಕ್ಕೆ ಪತ್ರ ಬರೆದು ಅನುದಾನ ತರಬೇಕು. ಸಾರ್ವಜನಿಕರ ಹಣವನ್ನು ವ್ಯಯ ಮಾಡಬಾರದು ಎಂದು ಸದಸ್ಯ ಸುಬ್ರಹ್ಮಣ್ಯ ತಿಳಿಸಿದರು.
ಉಪಾಧ್ಯಕ್ಷೆ ಕವಿತಾ ವಿಜಯಕುಮಾರ್, ಸದಸ್ಯರಾದ ಪ್ರಭುಶಂಕರ್, ಅಜ್ಮತ್ ಉಲ್ಲಾಖಾನ್, ಸುಬ್ರಹ್ಮಣ್ಯ, ಸರೋಜಾ, ಮಹಾಲಕ್ಷ್ಮೀ, ಕವಿತಾ, ಸಲಿಮಾಭಿ, ಫರಿದಾಖಾನಂ, ನಟರಾಜು, ನಂಜುಂಡ, ಸುಬ್ರಹ್ಮಣ್ಯ, ಎಚ್.ಸಿ. ರಾಜು, ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಬಿ. ಸುಬ್ರಹ್ಮಣ್ಯ, ಮುಖ್ಯಾಧಿಕಾರಿ ಚಿಕ್ಕನಂಜಯ್ಯ ಇದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಗೆಲುವು; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

SCROLL FOR NEXT