ಮೈಸೂರು

ಭೂತ ಚೇಷ್ಟೆ ಸುಳ್ಳೇಸುಳ್ಳು: ಸಚಿವ ಎಸ್.ಆರ್.ಪಾಟೀಲ್

ತಾವು ವಾಸಿಸುತ್ತಿರುವ ಸರ್ಕಾರಿ ಬಂಗಲೆ ಅನುಗ್ರಹದಲ್ಲಿ ಭೂತ ಚೇಷ್ಟೆಯ ಕಾಟವಿಲ್ಲ ಎಂದು...

ಮೈಸೂರು: ತಾವು ವಾಸಿಸುತ್ತಿರುವ ಸರ್ಕಾರಿ ಬಂಗಲೆ ಅನುಗ್ರಹದಲ್ಲಿ ಭೂತ ಚೇಷ್ಟೆಯ ಕಾಟವಿಲ್ಲ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎಸ್. ಆರ್ ಪಾಟೀಲ್ ಹೇಳಿದರು.

ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಅವರ ಜನ್ಮದಿನೋತ್ಸವದ ಅಂಗವಾಗಿ ಸ್ವದೇಶಿ ವಿಜ್ಞಾನ ಆಂದೋಲನ ಕರ್ನಾಟಕ ಶಾಖೆ ಆಯೋಜಿಸಿರುವ ಮೂರು ದಿನಗಳ 10ನೇ ಕನ್ನಡ ವಿಜ್ಞಾನ ಸಮ್ಮೇಳನವನ್ನುದ್ಘಾಟಿಸಿ ಅವರು ಮಾತನಾಡಿದರು.

ಸಚಿವ ಸ್ಥಾನ ಪಡೆದ ಮೇಲೆ ಬೆಂಗಳೂರಿನ ಸರ್ಕಾರಿ ಬಂಗಲೆ ಅನುಗ್ರಹದಲ್ಲಿ ವಾಸಿಸಲು ಹೋದಾಗ, ಕೆಲವರು ಆ ಮನೆಯಲ್ಲಿ ಪ್ರೇತಾತ್ಮಗಳ ಕಾಟವಿದೆ. ಪಕ್ಕದಲ್ಲಿಯೇ ರೈಲ್ವೆ ಹಳಿ ಇರೋದರಿಂದ ಅಲ್ಲಿ ಆತ್ಮಹತ್ಯೆ ಮಾಡಿಕೊಂಡವನು ಭೂತವಾಗಿ ಕಾಡುತ್ತಿದ್ದಾನೆ. ಮಧ್ಯರಾತ್ರಿ ಭಯಂಕರ ಶಬ್ದಗಳು ಉಂಟಾಗುತ್ತೆ ಎಂದು ಕೆಲವರು ಭಯ ತರಿಸಿದರು.

ಆದರೆ ಈ ಮಾತನ್ನು ನಂಬೋದು ಒಂದೇ, ಮಂತ್ರಿ ಪದವಿಗೆ ರಾಜೀನಾಮೆ ನೀಡೋದೂ ಒಂದೇ ಎಂದು ಭಾವಿಸಿ ಉಳಿದುಕೊಂಡೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT