ರಾಯಚೂರು

ಎಂಇಎಸ್ ಪುಂಡಾಟಿಕೆ ತಡೆಗೆ ಕರವೇ ಮನವಿ

ಸಿಂಧನೂರು: ಶಿವಸೇನೆ, ಎಂಇಎಸ್ ಪುಂಡಾಟಿಕೆ ನಿಲ್ಲಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕಾಧ್ಯಕ್ಷ ವೀರೇಶ ಭಾವಿಮನಿ, ಕನ್ನಡ ಯುವಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ್ ತಹಸೀಲ್ದಾರ್ ಮೂಲಕ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಮನವಿ ರವಾನಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕದಲ್ಲಿ ಹೋರಾಟ ಮಾಡುವ ಕನ್ನಡಿಗರನ್ನು ಸರ್ಕಾರ ಬಂಧಿಸುತ್ತಲಿದೆ. ಆದರೆ ಮರಾಠಿಗರು, ಶಿವಸೇನೆ ಮತ್ತು ಎಂಇಎಸ್ ಮುಖಂಡರ ಪುಂಡಾಟಿಕೆ ಹತ್ತಿಕ್ಕಲು ಆಗುತ್ತಿಲ್ಲ. ಕನ್ನಡ ಧ್ವಜವನ್ನು ಸುಟ್ಟುಹಾಕಿರುವುದು, ಕನ್ನಡಿಗರನ್ನು ಅಪಮಾನ ಮಾಡುತ್ತಿರುವುದು, ಯಳ್ಳೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಗಡಿಭಾಗದ ಗ್ರಾಮಗಳನ್ನು ಮಹಾರಾಷ್ಟ್ರ ಸರ್ಕಾರಕ್ಕೆ ಸೇರಿದವೆಂದು ಘೋಷಣೆ ಮಾಡುತ್ತಿರುವುದು, ಕನ್ನಡ ಫಲಕಗಳನ್ನು ಕಿತ್ತಿಹಾಕಿರುವುದು ಮರಾಠಿಗರ ದೌರ್ಜನ್ಯ ಎತ್ತಿ ತೋರಿಸುತ್ತದೆ. ಶಾಸಕ ಸಾಂಬಾಜೀ ಪಾಟೀಲ ವರ್ತನೆ ಖಂಡನಾರ್ಹ. ಆತ ಕನ್ನಡಿಗರು ಹಾಗೂ ಮರಾಠಿಗರ ಮಧ್ಯೆ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಜಗಳ ಹಚ್ಚಲು ಮುಂದಾಗಿದ್ದಾನೆ. ಕೂಡಲೇ ಈತನನ್ನು ಬಂಧಿಸಬೇಕೆಂದು ಆಗ್ರಹಿಸಿದೆ ಎಂದು ತಿಳಿಸಿದ್ದಾರೆ.
ಮುಖಂಡರಾದ ಬಸವರಾಜ ಹೊಸಳ್ಳಿ, ಹನುಮಂತ, ಹುಸೇನಪ್ಪ ನಾಯಕ, ದೇವರಾಜ್, ರಾಘವೇಂದ್ರ ಕೆ., ಅಜಿತ್, ವಿಲಾಸ್, ಪ್ರಸಾದ್, ಪವನ, ಅಲಿ ಮತ್ತಿತರರು ಇದ್ದರು.


-

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT