ರಾಯಚೂರು

ಬಲಿಗೆ ಕಾಯುತ್ತಿದೆ ಕೊಳವೆ ಬಾವಿ

ಮುದಗಲ್: ಸಮೀಪದ ಬಯ್ಯಾಪುರ ಗ್ರಾಪಂ ವ್ಯಾಪ್ತಿಯಲ್ಲಿ ವ್ಯರ್ಥ ಕೊಳವೆ ಬಾವಿ ಬಲಿಗಾಗಿ ಬಾಯಿತೆರೆದು ಕಾದು ಕುಳಿತಿರುವುದು ಬೆಳಕಿಗೆ ಬಂದಿದೆ.
ಬಿಜಾಪುರ, ಬಾಗಲಕೋಟೆಯ ಸೂಳಿಕೇರಿ ಸೇರಿದಂತೆ ರಾಜ್ಯದಲ್ಲಿ ಕೊಳವೆ ಬಾವಿ ದುರಂತಗಳು ಪದೇ ಪದೇ ಜರುಗುತ್ತಿದ್ದು ವ್ಯರ್ಥ ಕೊಳವೆಬಾವಿಗಳನ್ನು ಮುಚ್ಚಿಸಲು ರಾಜ್ಯ ಸರ್ಕಾರ ಕಟ್ಟುನಿಟ್ಟಾಗಿ ಸೂಚಿಸಿದ್ದರೂ ಗ್ರಾಮ ಪಂಚಾಯಿತಿ ಪಿಡಿಒಗಳು ಆದೇಶಕ್ಕೆ ಕಾಸಿನ ಕಿಮ್ಮತ್ತು ನೀಡಿಲ್ಲ.
ಆದರೆ ತಾಲೂಕಾಡಳಿತ ಮತ್ತು ಗ್ರಾಪಂ ಅಧಿಕಾರಿಗಳ ಬೇಜವಬ್ದಾರಿಯಿಂದ ತಾಲೂಕಿನಲ್ಲಿ ಇನ್ನೂ ಅನೇಕ ಜಮೀನು ಮತ್ತು ರಸ್ತೆ ಬದಿಯ ಕುಡಿವ ನೀರಿಗಾಗಿ ಕೊರೆಸಲಾದ ವ್ಯರ್ಥ ಕೊಳವೆ ಬಾವಿ ಮುಚ್ಚಿಸದಿರುವುದು ಕಂಡುಬರುತ್ತಿವೆ.
ಬೇಜವಾಬ್ದಾರಿ: ಬಯ್ಯಾಪುರ ಗ್ರಾಪಂ ವ್ಯಾಪ್ತಿಯ ಖೈರವಾಡಗಿ ತಾಂಡಾ-2(ಕರಡಿಗುಡ್ಡ)ದಲ್ಲಿ ಕೊಳವೆ ಬಾವಿಗೆ ಅಳವಡಿಸಿದ್ದ ಕೈಪಂಪ್ ಅಂತರ್ಜಲ ಕುಸಿತದಿಂದಾಗಿ ಗ್ರಾಪಂ ಸಿಬ್ಬಂದಿ ಕಿತ್ತಿಕೊಂಡು ಹೋಗಿದ್ದಾರೆ. ಆದರೆ ಸುಮಾರು 100 ಅಡಿಗೂ ಅಧಿಕ ಆಳವಿರುವ ಕೊಳವೆಬಾವಿ ಮುಚ್ಚಿಸದಿರುವುದು ಅಧಿಕಾರಿಗಳ ಬೇಜವಬ್ದಾರಿಗೆ ಸಾಕ್ಷಿಯಾಗಿದೆ. ಈ ಬಗ್ಗೆ ಅಲ್ಲಿಯ ನಾಗರಿಕರು ಗ್ರಾಪಂ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಅಧಿಕಾರಿಗಳು ಕೊಳವೆಬಾವಿಯ ಮೇಲೆ ಪ್ಲೇಟ್ ಹಾಕಬೇಕು. ಇಲ್ಲವೇ ಸಂಪೂರ್ಣ ಮುಚ್ಚಿಸಬೇಕೆಂದು ಬಯ್ಯಾಪುರ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT