ರಾಯಚೂರು

ಸಾಲದ ಪಡೆದು ಸ್ವಾವಲಂಬಿ ಬದುಕು ನಡೆಸಿ

ಸಿಂಧನೂರು: ಮಹಿಳೆಯರು ಇಂದಿನ ದಿನಮಾನದಲ್ಲಿ ಸ್ವಸಹಾಯ ಸಂಘಗಳಲ್ಲಿ ಸಾಲ ಸೌಲಭ್ಯ ಪಡೆದು ಸ್ವಾವಲಂಬಿ ಬದುಕು ನಡೆಸಲಿದ್ದಾರೆ ಎಂದು ಲಿಂಗನಗೌಡ ಪಾಟೀಲ್ ಕೊಟ್ನೇಕಲ್ ಅಭಿಪ್ರಾಯಪಟ್ಟರು. ಆರ್‌ಡಿಸಿಸಿ ಬ್ಯಾಂಕ್ ಶಾಖೆ ಮತ್ತು ವಿಜಯ ಮಹಿಳಾ ಮಹಾ ಒಕ್ಕೂಟ ಸಿಂಧನೂರು ಸಂಯುಕ್ತಾಶ್ರಯದಲ್ಲಿ ನಡೆದ ಸ್ವಶಕ್ತಿ ಮಹಿಳಾ ಸ್ವಸಹಾಯ ಸಂಘಗಳಲ್ಲಿ 6,40,000 ಸಾಲ ವಿತರಿಸಿ ಮಾತನಾಡಿದರು. ಇಂದು ಮಹಿಳೆ ಸ್ವಸಹಾಯ ಸಂಘದ ಮೂಲಕ ಸಾಲ ಪಡೆದು ಸಾಕಷ್ಟು ಅಭಿವೃದ್ಧಿಪರ ಕಾಳಜಿವಹಿಸಿ ಹಣವನ್ನು ಸದ್ಬಳಕೆ ಮಾಡಿಕೊಂಡು ಸಮಾಜಮುಖಿಯಾಗಿದ್ದಾರೆ. ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಲು ಸ್ವಸಹಾಯ ಸಂಘಗಳ ಸಹಕಾರ ಪಡೆದುಕೊಳ್ಳಬಹುದು ಎಂದು ಮನವರಿಕೆ ಮಾಡಿದರು. ಇದೇ ವೇಳೆ ಗಂಗಮ್ಮ, ಓಬಳಮ್ಮ, ಸುಜಾತ, ಮಾರೆಮ್ಮ, ಮಹಾದೇವಮ್ಮ, ದುರಗಯ್ಯ ನಾಯಕ ದೊಡ್ಡಮನಿ, ಅಮರಯ್ಯ ತಾತಾ, ರಾಜಶೇಖರ ಭಾಗವಹಿಸಿದ್ದರು. ಕಾರ್ಯದರ್ಶಿ ಗಂಗಾಧರ ಕನ್ನಾರಿ ಕಾರ್ಯಕ್ರಮವನ್ನು ನಿರೂಪಿಸಿದರು. ಚನ್ನಮ್ಮ ವಂದಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT