ಶಿವಮೊಗ್ಗ

ಕಾಫಿ ಹಾನಿ: ವಿಶೇಷ ಪ್ಯಾಕೇಜ್‌ಗೆ ಬೆಳೆಗಾರರ ನಿಯೋಗ ಆಗ್ರಹ

ಚಿಕ್ಕಮಗಳೂರು: ಅತಿವೃಷ್ಟಿಯಿಂದ ಕಾಫಿ ಬೆಳೆಗೆ ಶೇ. 40 ರಷ್ಟು ಹಾನಿ ಸಂಭವಿಸಿದ್ದು, ಕಾಫಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಲಾಗಿದೆ ಎಂದು ಕರ್ನಾಟಕ ಬೆಳೆಗಾರರ ಒಕ್ಕೂಟ(ಕೆಜಿಎಫ್)ದ ಅಧ್ಯಕ್ಷ ಬಿ.ಎಸ್. ಜೈರಾಂ ಹೇಳಿದ್ದಾರೆ.
ಇತ್ತೀಚೆಗೆ ಕಾಫಿ ಬೆಳೆಗಾರರ ನಿಯೋಗ ದೆಹಲಿಗೆ ತೆರಳಿ ಕೇಂದ್ರ ಹಣಕಾಸು ಸಚಿವರಾದ ಅರುಣ್ ಜೇಟ್ಲಿ ಅವರಿಗೆ ಮನವಿ ಸಲ್ಲಿಸಿತು ಎಂದು ಸುದ್ದಿಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು. ಅತಿವೃಷ್ಟಿಯಿಂದ ಹಾಗೂ ಕಾಂಡಕೊರಕದಿಂದ ಶೇ. 45ರಷ್ಟು ಕಾಫಿ ಗಿಡಗಳು ನಾಶವಾಗಿವೆ. ಕಾಂಡಕೊರಕದಿಂದ ಉಂಟಾಗುವ ನಷ್ಟಕ್ಕೆ ವಿಶೇಷ ಪ್ಯಾಕೇಜ್ ಜಾರಿಗೊಳಿಸಬೇಕು. ಸುಮಾರು ಎರಡೂವರೆ ವರ್ಷದಿಂದ 12ನೇ ಪಂಚವಾರ್ಷಿಕ ಯೋಜನೆಯು(950 ಕೋಟಿ) ಅನುಷ್ಠಾನಗೊಂಡಿಲ್ಲ. ಶೀಘ್ರದಲ್ಲೇ ಯೋಜನೆ ಅನುಷ್ಠಾನಗೊಳಿಸಬೇಕು. ಕಾಫಿ ಬೆಳೆ ಸಾಲದ ಮೇಲಿನ ಬಡ್ಡಿ ದರವು ಪ್ರಸ್ತುತ ಶೇ. 11.5 ರಷ್ಟಿದ್ದು, ಇದನ್ನು ಶೇ. 3ಕ್ಕೆ ಇಳಿಸಬೇಕು ಎಂದು ಆಗ್ರಹಿಸಲಾಯಿತು ಎಂದರು. ಇದೇ ಸಂದರ್ಭದಲ್ಲಿ ಕೇಂದ್ರ ವಾಣಿಜ್ಯ ಸಚಿವರಾದ ನಿರ್ಮಲಾ ಸೀತಾರಾಮನ್ ಹಾಗೂ ರೈಲ್ವೆ ಸಚಿವರಾದ ಸದಾನಂದಗೌಡ, ಕೇಂದ್ರ ರಾಸಾಯನಿಕ ಗೊಬ್ಬರ ಹಾಗೂ ಕ್ರಿಮಿನಾಶಕಗಳ ಸಚಿವರಾದ ಎಚ್.ಎನ್. ಅನಂತಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT