ಶಿವಮೊಗ್ಗ

ಡ್ಯಾಂ ಕೋಡಿ: ಕೊಚ್ಚಿಹೋದ ವ್ಯಕ್ತಿ

ಶಿವಮೊಗ್ಗ:  ಜಲಾಶಯದ ಕೋಡಿಯಲ್ಲಿ ಹೊಸನಗರ ತಾಲೂಕು ಚಾಣಬೈಲು ನಿವಾಸಿ ಮಂಜಪ್ಪ (52) ಎಂಬವರು ಕೊಚ್ಚಿಹೋಗಿ ಮೃತಪಟ್ಟ ಪ್ರಸಂಗ ಆಯನೂರು ಹೋಬಳಿ ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗೆಹಳ್ಳ ಹೊಸಕೆರೆಯಲ್ಲಿ ನಡೆದಿದೆ.
ಸಿರಿಗೆರೆ ಗ್ರಾಮಕ್ಕೆ ಬ್ಯಾಂಕಿನಿಂದ ಸಾಲ ಪಡೆಯುವ ಸಲುವಾಗಿ ಆಗಮಿಸಿದ್ದ ಮಂಜಪ್ಪ ವಾಪಸ್ ಮನೆಗೆ ತೆರಳುವಾಗ ಸಂಪಿಗೆಹಳ್ಳ ನಿಲ್ದಾಣದಲ್ಲಿ ಬಸ್ ಇಳಿದು ಸೀಗೆಹಳ್ಳ ಜಲಾಶಯದ ದಂಡೆ ಮೇಲೆ ನಡೆದು ಹೋಗುತ್ತಿದ್ದರು. ಈ ಸಂದರ್ಭ ದುರ್ಘಟನೆ ನಡೆದಿದೆ. 3 ದಿನಗಳಿಂದ ಹುಡುಕಾಡಿದರೂ ಮಂಜಪ್ಪ ಪತ್ತೆ ಆಗಿರಲಿಲ್ಲ. ಮಂಗಳವಾರ ಅದೇ ಸ್ಥಳದಲ್ಲಿ ಶವ ತೇಲುತ್ತಿದ್ದುದನ್ನು ಗ್ರಾಮಸ್ಥರು ಕಂಡು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2.50 ಲಕ್ಷ ಮೌಲ್ಯದ ಆಭರಣ ಲೂಟಿ
ಸಾಗರ: ಪಟ್ಟಣದ ಸತ್ಯನಾರಾಯಣಸ್ವಾಮಿ ದೇವಸ್ಥಾನ ರಸ್ತೆಯ ಶಶಿಕಾಂತ್ ಎಂಬುವವರ ಮನೆಯಲ್ಲಿ ಸುಮಾರು 2.50 ಲಕ್ಷ ಮೌಲ್ಯದ ಬೆಳ್ಳಿ ಹಾಗೂ ಬಂಗಾರದ ವಸ್ತು ಕಳ್ಳತನವಾಗಿದೆ.
ಕೃಷಿಕ ಶಶಿಕಾಂತ್ ಮತ್ತವರ ಕುಟುಂಬ ಹದಿನೈದು ದಿನಗಳ ಹಿಂದೆ ಆಂದ್ರಪ್ರದೇಶದ ಗುಂಟೂರಿನ ತಮ್ಮ ಸಂಬಂಧಿಕರ ಮನೆಗೆ ಹೋಗಿದ್ದರು. ಮಂಗಳವಾರ ಶಶಿಕಾಂತ್ ಕುಟುಂಬ ಮನೆಗೆ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.  
ಮನೆಯಲ್ಲಿ ಯಾರೂ ಇಲ್ಲದೆ ಇರುವುದನ್ನು ಗಮನಿಸಿದ ಕಳ್ಳರು ಮನೆಯ ಮುಂದಿನ ಬಾಗಿಲಿನ ಬೀಗ ಮುರಿದು ಒಳನುಗ್ಗಿ ಬೀರು ಹಾಗೂ ತಿಜೋರಿ ಒಡೆದು ಸುಮಾರು 2.50 ಲಕ್ಷ ಮೌಲ್ಯದ ಬೆಳ್ಳಿ ಹಾಗೂ ಬಂಗಾರದ ವಸ್ತುಗಳನ್ನು ದೋಚಿದ್ದಾರೆ. ಈ ಸಂಬಂಧ ಶ್ವಾನದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ.
ಶಶಿಕಾಂತ್ ಪೇಟೆಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಸರ್ಕಲ್ ಇನ್ಸ್‌ಪೆಕ್ಟರ್ ಕೃಷ್ಣಮೂರ್ತಿ ಮತ್ತವರ ತಂಡ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT