ಶಿವಮೊಗ್ಗ

ಡ್ಯಾಂ ಕೋಡಿ: ಕೊಚ್ಚಿಹೋದ ವ್ಯಕ್ತಿ

ಶಿವಮೊಗ್ಗ:  ಜಲಾಶಯದ ಕೋಡಿಯಲ್ಲಿ ಹೊಸನಗರ ತಾಲೂಕು ಚಾಣಬೈಲು ನಿವಾಸಿ ಮಂಜಪ್ಪ (52) ಎಂಬವರು ಕೊಚ್ಚಿಹೋಗಿ ಮೃತಪಟ್ಟ ಪ್ರಸಂಗ ಆಯನೂರು ಹೋಬಳಿ ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗೆಹಳ್ಳ ಹೊಸಕೆರೆಯಲ್ಲಿ ನಡೆದಿದೆ.
ಸಿರಿಗೆರೆ ಗ್ರಾಮಕ್ಕೆ ಬ್ಯಾಂಕಿನಿಂದ ಸಾಲ ಪಡೆಯುವ ಸಲುವಾಗಿ ಆಗಮಿಸಿದ್ದ ಮಂಜಪ್ಪ ವಾಪಸ್ ಮನೆಗೆ ತೆರಳುವಾಗ ಸಂಪಿಗೆಹಳ್ಳ ನಿಲ್ದಾಣದಲ್ಲಿ ಬಸ್ ಇಳಿದು ಸೀಗೆಹಳ್ಳ ಜಲಾಶಯದ ದಂಡೆ ಮೇಲೆ ನಡೆದು ಹೋಗುತ್ತಿದ್ದರು. ಈ ಸಂದರ್ಭ ದುರ್ಘಟನೆ ನಡೆದಿದೆ. 3 ದಿನಗಳಿಂದ ಹುಡುಕಾಡಿದರೂ ಮಂಜಪ್ಪ ಪತ್ತೆ ಆಗಿರಲಿಲ್ಲ. ಮಂಗಳವಾರ ಅದೇ ಸ್ಥಳದಲ್ಲಿ ಶವ ತೇಲುತ್ತಿದ್ದುದನ್ನು ಗ್ರಾಮಸ್ಥರು ಕಂಡು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2.50 ಲಕ್ಷ ಮೌಲ್ಯದ ಆಭರಣ ಲೂಟಿ
ಸಾಗರ: ಪಟ್ಟಣದ ಸತ್ಯನಾರಾಯಣಸ್ವಾಮಿ ದೇವಸ್ಥಾನ ರಸ್ತೆಯ ಶಶಿಕಾಂತ್ ಎಂಬುವವರ ಮನೆಯಲ್ಲಿ ಸುಮಾರು 2.50 ಲಕ್ಷ ಮೌಲ್ಯದ ಬೆಳ್ಳಿ ಹಾಗೂ ಬಂಗಾರದ ವಸ್ತು ಕಳ್ಳತನವಾಗಿದೆ.
ಕೃಷಿಕ ಶಶಿಕಾಂತ್ ಮತ್ತವರ ಕುಟುಂಬ ಹದಿನೈದು ದಿನಗಳ ಹಿಂದೆ ಆಂದ್ರಪ್ರದೇಶದ ಗುಂಟೂರಿನ ತಮ್ಮ ಸಂಬಂಧಿಕರ ಮನೆಗೆ ಹೋಗಿದ್ದರು. ಮಂಗಳವಾರ ಶಶಿಕಾಂತ್ ಕುಟುಂಬ ಮನೆಗೆ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.  
ಮನೆಯಲ್ಲಿ ಯಾರೂ ಇಲ್ಲದೆ ಇರುವುದನ್ನು ಗಮನಿಸಿದ ಕಳ್ಳರು ಮನೆಯ ಮುಂದಿನ ಬಾಗಿಲಿನ ಬೀಗ ಮುರಿದು ಒಳನುಗ್ಗಿ ಬೀರು ಹಾಗೂ ತಿಜೋರಿ ಒಡೆದು ಸುಮಾರು 2.50 ಲಕ್ಷ ಮೌಲ್ಯದ ಬೆಳ್ಳಿ ಹಾಗೂ ಬಂಗಾರದ ವಸ್ತುಗಳನ್ನು ದೋಚಿದ್ದಾರೆ. ಈ ಸಂಬಂಧ ಶ್ವಾನದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ.
ಶಶಿಕಾಂತ್ ಪೇಟೆಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಸರ್ಕಲ್ ಇನ್ಸ್‌ಪೆಕ್ಟರ್ ಕೃಷ್ಣಮೂರ್ತಿ ಮತ್ತವರ ತಂಡ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪೆಟ್ರೋಲಿಯಂ ಉತ್ಪನ್ನಗಳ ಮಿತಬಳಕೆ "ಈಗಿನ ಅಗತ್ಯ"-ಪ್ರಧಾನಿ ಮೋದಿ: ಮುಂದೆ ಕಾದಿದೆಯಾ ಸಂಕಷ್ಟದ ದಿನಗಳು?

Pak ನಲ್ಲಿ ರಕ್ತದೋಕುಲಿ: ಹೊಸ ಉಗ್ರ ಸಂಘಟನೆ ನಡೆಸಿದ ದಾಳಿಯಲ್ಲಿ 21 ಸೈನಿಕರು ಬಲಿ, ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ!

ಅತ್ತ ವಿಜಯ್ ಪದಗ್ರಹಣ, ಇತ್ತ ಚಂದ್ರಬಾಬು ನಾಯ್ಡು, Pawan Kalyan ಮನೆಗೆ ಪ್ರಧಾನಿ ಮೋದಿ ದಿಢೀರ್ ಭೇಟಿ: ರಾಜಕೀಯ ವಲಯದಲ್ಲಿ ಸಂಚಲನ!

ಚುನಾವಣೆಗೂ ಮುನ್ನ ಯೋಗಿ ಸರ್ಕಾರದಲ್ಲಿ ಮಹತ್ತರ ಬದಲಾವಣೆ: ಸಂಪುಟ ಪುನಾರಚನೆ; 6 ಹೊಸ ಸಚಿವರ ಸೇರ್ಪಡೆ

IPL 2026: ನಿರ್ಣಾಯಕ ಪಂದ್ಯದಲ್ಲಿ ಲಖನೌ ವಿರುದ್ಧ ಗೆದ್ದ CSK; ಪ್ಲೇ ಆಫ್ ಕನಸು ಜೀವಂತ!

SCROLL FOR NEXT