ಶಿವಮೊಗ್ಗ

ಲಿಂಗನಮಕ್ಕಿ ಹಿನ್ನೀರಲ್ಲಿ ಗಂಗಾ ಪೂಜೆ

ಜೋಗಫಾಲ್ಸ್: ಕಾರ್ಗಲ್ ಸಮೀಪದ ಲಿಂಗನಮಕ್ಕಿ ಜಲಾಶಯದಲ್ಲಿ 1805 ಅಡಿ ನೀರು ತುಂಬಿರುವ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಪದ್ಧತಿಯಂತೆ ಮುಖ್ಯ ಎಂಜಿನಿಯರ್ ರಾಜಮುಡಿ, ಜಿ. ಹನುಮಂತಪ್ಪ, ಅಧೀಕ್ಷಕ ಎಂಜಿನಿಯರ್ ಶಿವಾಜಿರಾವ್, ಮೋಹನ್ ಸ್ಫೂರ್ತಿ ಮತ್ತು ಕಾರ್ಯಪಾಲಕ ಎಂಜಿನಿಯರ್ ಶಿವಕುಮಾರ್  ಅಣೆಕಟ್ಟೆಯ ಹಿನ್ನೀರಿನಲ್ಲಿ ಗಂಗಾ ಪೂಜೆ ನೆರವೇರಿಸಿದರು.
ನಾಡಿಗೆ ಬೆಳಕು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಲಿಂಗನಮಕ್ಕಿ ಜಲಾಶಯದಲ್ಲಿ ಈಚೆಗಿನ 20 ದಿನದ ಮಳೆಯಲ್ಲಿ 60 ಅಡಿಗಳಷ್ಟು ದಾಖಲೆ ಪ್ರಮಾಣದಲ್ಲಿ ನೀರು ಹರಿದು ಬಂದು ಸಂಗ್ರಹವಾಗಿದೆ ಎಂದು ಕೆಪಿಸಿ ಶರಾವತಿ ಯೋಜನಾ ಪ್ರದೇಶದ ಮುಖ್ಯ ಎಂಜಿನಿಯರ್ ರಾಜಮುಡಿ ಮತ್ತು ಜಿ. ಹನುಮಂತಪ್ಪ ಮಾಹಿತಿ ನೀಡಿದರು.
ಸಮೀಪದ ಲಿಂಗನಮಕ್ಕಿ ಜಲಾಶಯದ ಕ್ರಸ್ಟ್‌ಗೇಟ್ ಮಟ್ಟಕ್ಕೆ ನೀರು ಸಂಗ್ರಹವಾದ ಕೂಡಲೇ ಪಾರಂಪರಿಕವಾಗಿ ಆಚರಿಸಿಕೊಂಡು ಬಂದಿರುವ ಪದ್ಧತಿಯಂತೆ ಗಂಗಾಪೂಜೆ ನೆರವೇರಿಸಿ ಮಾತನಾಡಿದರು.
ಈಗಾಗಲೇ ಜಲಾಶಯದಲ್ಲಿ 1805ಅಡಿ ನೀರು ಸಂಗ್ರಹವಾಗಿದ್ದು, ಗರಿಷ್ಠ ಮಟ್ಟ ತಲುಪಲು ಇನ್ನು ಕೇವಲ 14ಅಡಿಗಳಷ್ಟು ನೀರಿನ ಅಗತ್ಯವಿದೆ. ಜಲಾನಯನದ ಹಿನ್ನೀರ ಪ್ರದೇಶದಲ್ಲಿ ಉತ್ತಮ ಮಳೆ ಬೀಳುತ್ತಿರುವ ಕಾರಣ ಜಲಾಶಯ ಭರ್ತಿಯಾಗುವ ನಿರೀಕ್ಷೆಯಿದೆ. 1819ರ ಗರಿಷ್ಠ ಮಟ್ಟಕ್ಕೆ ನೀರು ಸಮೀಪಿಸುತ್ತಿದ್ದಂತೆ, ನೀರಿನ ಒಳಹರಿವನ್ನು ಪರಿಗಣಿಸಿ ಕೇಂದ್ರ ಕಚೇರಿಯ ನಿರ್ದೇಶನ ಮೇರೆಗೆ ಜಲಾಶಯದಿಂದ ನೀರನ್ನು ಹೊರಹಾಯಿಸಲು ಸಾಧ್ಯತೆಯಿದೆ ಎಂದು ಸಿವಿಲ್ ವಿಭಾಗದ ಮುಖ್ಯ ಎಂಜಿನಿಯರ್ ರಾಜಮುಡಿ ತಿಳಿಸಿದರು.
ಅಣೆಕಟ್ಟೆಯಲ್ಲಿ ಸಂಗ್ರಹವಾಗುವ ಪ್ರತಿ ಅಡಿ ನೀರನ್ನು ವ್ಯಯ ಮಾಡದೇ ಅತ್ಯಂತ ಜಾಗರೂಕತೆಯಿಂದ ವಿದ್ಯುತ್ ಬಳಕೆಗೆ ಉಪಯೋಗಿಸಿ ಕೊಳ್ಳಲಾಗುವುದು ಎಂದು ವಿದ್ಯುತ್ ವಿಭಾಗದ  ಮುಖ್ಯ ಎಂಜಿನಿಯರ್ ಹನುಮಂತಪ್ಪ ಹೇಳಿದರು.
ಅಧೀಕ್ಷಕ ಎಂಜಿನಿಯರ್ ಜಿ. ಶಿವಾಜಿರಾವ್, ಪಿ. ಶಿವಕುಮಾರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎ. ಮಜೀದ್, ಮಧುಸೂದನ್, ಎಜಿಎಂ ವಿಜಯೇಂದ್ರ ಮತ್ತು ವಿಭಾಗದ ಅಧಿಕಾರಿಗಳು ಇದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT