ಶಿವಮೊಗ್ಗ

ಸೇತುವೆ ಮೇಲೆ ಹರಿದ ಭದ್ರೆ

ಭದ್ರಾವತಿ: ಭದ್ರಾ ಜಲಾಶಯದಲ್ಲಿ ಮಂಗಳವಾರ ಬೆಳಗಿನಿಂದ ಮಧ್ಯಾಹ್ನದ ವರೆಗೆ ಒಳಹರಿವು 48000 ಕ್ಯುಸೆಕ್‌ವರೆಗೆ ಹೆಚ್ಚಾದ ಕಾರಣ ಜಲಾಶಯದಿಂದ ಭದ್ರಾ ನದಿಗೆ ಹೆಚ್ಚಿನ ನೀರನ್ನು ಬಿಟ್ಟ ಕಾರಣ ಪಟ್ಟಣದ  ಸಾರಿಗೆ ಬಸ್ ನಿಲ್ದಾಣ ಬಳಿ ಇರುವ ಸೇತುವೆ ಮೇಲೆ ನೀರು ಹರಿಯಲಾರಂಭಿಸಿತು. ಈ ಹಿನ್ನೆಲೆಯಲ್ಲಿ ಪೊಲೀಸರು ಮಂಗಳವಾರ ಬೆಳಗಿನಿಂದಲೇ ಸೇತುವೆ ಮೇಲೆ ವಾಹನ ಸಂಚಾರ ಹಾಗೂ ಜನಸಂಚಾರ ನಿರ್ಬಂಧಿಸಿದ್ದರು.
ಸೇತುವೆ ಮೇಲೆ ನದಿ ನೀರು ಹರಿಯುವುದನ್ನು ನೋಡಲು ಜನಸಾಗರ ಹರಿದುಬಂದ ಕಾರಣ ನಿಯಂತ್ರಿಸಲು ಪೊಲೀಸರು ಇಡೀ ದಿನ ಹರಸಾಹಸ ಪಡಬೇಕಾಯಿತು. ಸಂಜೆ ವೇಳೆಗೆ ಭದ್ರಾ ಜಲಾಶಯದ ಒಳಹರಿವು 38 ಸಾವಿರ ಕ್ಯುಸೆಕ್‌ಗೆ ಇಳಿಮುಖವಾದರೂ ಜಲಾಶಯದಲ್ಲಿ ನೀರಿನ ಮಟ್ಟವನ್ನು 184 ಅಡಿಗೆ ಕಾದಿರಿಸಿಕೊಳ್ಳಲು ಸಂಜೆಯೂ 46500 ಕ್ಯುಸೆಕ್ ನೀರನ್ನು ಭದ್ರಾ ನದಿಗೆ ಜಲಾಶಯದಿಂದ ಹರಿದು ಬಿಡಲಾಯಿತು. ರಾತ್ರಿ 7 ಗಂಟೆಯ ವೇಳೆಗೆ ಜಲಾಶಯದ ಮಟ್ಟ 184 ಅಡಿ 6 ಇಂಚು ಇದ್ದಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT