ತುಮಕೂರು

ತೋಟಗಾರಿಕೆ ಬೆಳೆ ಪೀಡೆ ನಿರ್ವಹಣೆ ತರಬೇತಿ

ತಿಪಟೂರು: ತಾಲೂಕಿನ ಬಿದರೆಗುಡಿ ಕಾವಲ್ನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ವಿವಿ ಬೆಂಗಳೂರು ವತಿಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ಸಮಗ್ರ ಪೋಷಕಾಂಶ ಮತ್ತು ಪೀಡೆ ನಿರ್ವಹಣೆ ಹಾಗೂ ಮೌಲ್ಯವರ್ಧನೆ ಕುರಿತ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕೇಂದ್ರದ ಮಣ್ಣು ವಿಜ್ಞಾನ ವಿಷಯ ತಜ್ಞೆ ಡಾ. ಬಿ. ಮಮತಾ ಅಡಿಕೆ ಮತ್ತು ಬತ್ತದಲ್ಲಿ ಸಮಗ್ರ ಪೋಷಕಾಂಶಗಳ ನಿರ್ವಹಣೆ ಕುರಿತು ವಿವರಿಸಿದರು. ಡಾ. ಶ್ರೀನಿವಾಸ್ ಭತ್ತದಲ್ಲಿ ಬರುವ ಕೀಟ ಮತ್ತು ರೋಗಗಳ ಲಕ್ಷಣಗಳು ಹಾಗೂ ಅವುಗಳ ಸಮಗ್ರ ಹತೋಟಿ ಬಗ್ಗೆ ವಿವರಿಸಿದರು.
ಡಾ. ರೂಪ. ಬಿ. ಪಾಟೀಲ್ ಟೊಮೇಟೊದಲ್ಲಿ ಕೆಚಪ್ ಹಾಗೂ ರಾಗಿಯ ಮೌಲ್ಯವರ್ಧಿತ ರೊಟ್ಟಿ ತಯಾರಿಸುವ ಕುರಿತು ಪ್ರಾತ್ಯಕ್ಷಿಕೆ ಮೂಲಕ ಪರಿಚಯಿಸಿದರು.  ಕಾರ್ಯಕ್ರಮದಲ್ಲಿ ಬೆಂಗಳೂರು ಕೃಷಿ ವಿವಿಯ  ಡಾ. ವೈ. ಎನ್. ಶಿವಲಿಂಗಯ್ಯ, ಡಾ. ಸುಬ್ಬರಾಯಪ್ಪ, ಕುಣಿಗಲ್ ತಾಲೂಕು ಕೃಷಿ ಅಧಿಕಾರಿ ಹರೀಶ್ ಸೇರಿದಂತೆ ಸುಮಾರು 50 ರೈತರು ಭಾಗವಹಿಸಿದ್ದರು. ಕೃಷಿ ವಿವಿ ವಿದ್ಯಾರ್ಥಿನಿ ಪ್ರೀಯಾರೆಡ್ಡಿ ಸ್ವಾಗತಿಸಿ, ವಂದಿಸಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ, ರಷ್ಯಾದ ಬಿಗ್ ವಾರ್ನಿಂಗ್ ಏನು?

'ಕುವೆಂಪು ನಾಡಕವಿಯಲ್ಲ, ರಾಷ್ಟ್ರಕವಿ': ಬಿ.ವೈ. ವಿಜಯೇಂದ್ರಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು!

SCROLL FOR NEXT