ತುಮಕೂರು

ಹಿರಿಯರ ಉತ್ಸಾಹಕ್ಕೆ ಕಿರಿಯರ ಪ್ರೋತ್ಸಾಹ

ಚಿಕ್ಕನಾಯಕನಹಳ್ಳಿ:  ಸ್ವಾತಂತ್ರೋತ್ಸವದ ಪ್ರಯುಕ್ತ ಹಿರಿಯರಿಗೆ ನಾಗರಿಕ ವೇದಿಕೆ ವತಿಯಿಂದ ಆಯೋಜಿಸಿದ್ದ ಕ್ರೀಡಾಕೂಟವನ್ನು ರೊ-ಸಿ.ಎನ್.ಪ್ರದೀಪ್ ಉದ್ಘಾಟಿಸಿದರು. ನಂತರ ಮಾತನಾಡಿ, ಇಳಿವಯಸ್ಸಿನಲ್ಲಿ ಹಿರಿಯರಲ್ಲಿರುವ ಉತ್ಸಾಹ ನಮ್ಮಂಥ ಯುವಕರನ್ನು ನಾಚಿಸುವಂತಿದೆ. ವೃದ್ದಾಪ್ಯದಲ್ಲಿ ನಾವು ಆರೋಗ್ಯವನ್ನು ಸ್ಥಿರವಾಗಿ ಕಾಪಾಡಿಕೊಳ್ಳಬೇಕೆಂದರೆ ಚಟುವಟಿಕೆಯಿಂದಿರುವುದು ಅಗತ್ಯ. ಈನಿಟ್ಟಿನಲ್ಲಿ ಹಿರಿಯ ನಾಗರಿಕ ವೇದಿಕೆ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಸಂತೋಷದ ಸಂಗತಿ. ಈ ಕ್ರೀಡಾಕೂಟದಲ್ಲಿ ಹಿರಿಯ ಮನಸ್ಸುಗಳು ಮುದಗೊಳ್ಳುತ್ತವೆ ಎಂದರು. ಸಾಹಿತಿ ಎಂ.ವಿ.ನಾಗರಾಜರಾವ್ ಮಾತನಾಡುತ್ತ, ವಯೋಸಹಜ ದೈಹಿಕ ತೊಂದರೆಗಳಿಗೆ ಕ್ರೀಡೆಯೇ ಮದ್ದು, ಕ್ರೀಡೆಯಿಂದ ಮನಸ್ಸು ಪ್ರಫುಲ್ಲಗೊಳ್ಳುವುದರಿಂದ ದೈಹಿಕ ನೋವುಗಳು ನಗಣ್ಯವಾಗುತ್ತವೆ. ಹೀಗಾಗಿ ಹೆಚ್ಚು ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕಿದೆ ಎಂದರು. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗಾಗಿ ಸರಳ ಕ್ರೀಡೆಗಳನ್ನು ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಹಿರಿಯರು ಬಹಳ ಉತ್ಸಾಹದಿಂದ ಭಾಗವಹಿಸಿದ್ದರು. ಸಂಚಾಲಕ ಮಾಧವರಾವ್, ಹಿರಿಯ ವಕೀಲ ಸಿ.ಕೆ. ಸೀತಾರಾಮಯ್ಯ,ಡಾ. ಎಚ್.ಕೆ. ದಾಸ್, ಡಾ. ಪ್ರಶಾಂತಕುಮಾರಶೆಟ್ಟಿ  ಹಾಜರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT