ತುಮಕೂರು

ಹಿರಿಯರ ಉತ್ಸಾಹಕ್ಕೆ ಕಿರಿಯರ ಪ್ರೋತ್ಸಾಹ

ಚಿಕ್ಕನಾಯಕನಹಳ್ಳಿ:  ಸ್ವಾತಂತ್ರೋತ್ಸವದ ಪ್ರಯುಕ್ತ ಹಿರಿಯರಿಗೆ ನಾಗರಿಕ ವೇದಿಕೆ ವತಿಯಿಂದ ಆಯೋಜಿಸಿದ್ದ ಕ್ರೀಡಾಕೂಟವನ್ನು ರೊ-ಸಿ.ಎನ್.ಪ್ರದೀಪ್ ಉದ್ಘಾಟಿಸಿದರು. ನಂತರ ಮಾತನಾಡಿ, ಇಳಿವಯಸ್ಸಿನಲ್ಲಿ ಹಿರಿಯರಲ್ಲಿರುವ ಉತ್ಸಾಹ ನಮ್ಮಂಥ ಯುವಕರನ್ನು ನಾಚಿಸುವಂತಿದೆ. ವೃದ್ದಾಪ್ಯದಲ್ಲಿ ನಾವು ಆರೋಗ್ಯವನ್ನು ಸ್ಥಿರವಾಗಿ ಕಾಪಾಡಿಕೊಳ್ಳಬೇಕೆಂದರೆ ಚಟುವಟಿಕೆಯಿಂದಿರುವುದು ಅಗತ್ಯ. ಈನಿಟ್ಟಿನಲ್ಲಿ ಹಿರಿಯ ನಾಗರಿಕ ವೇದಿಕೆ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಸಂತೋಷದ ಸಂಗತಿ. ಈ ಕ್ರೀಡಾಕೂಟದಲ್ಲಿ ಹಿರಿಯ ಮನಸ್ಸುಗಳು ಮುದಗೊಳ್ಳುತ್ತವೆ ಎಂದರು. ಸಾಹಿತಿ ಎಂ.ವಿ.ನಾಗರಾಜರಾವ್ ಮಾತನಾಡುತ್ತ, ವಯೋಸಹಜ ದೈಹಿಕ ತೊಂದರೆಗಳಿಗೆ ಕ್ರೀಡೆಯೇ ಮದ್ದು, ಕ್ರೀಡೆಯಿಂದ ಮನಸ್ಸು ಪ್ರಫುಲ್ಲಗೊಳ್ಳುವುದರಿಂದ ದೈಹಿಕ ನೋವುಗಳು ನಗಣ್ಯವಾಗುತ್ತವೆ. ಹೀಗಾಗಿ ಹೆಚ್ಚು ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕಿದೆ ಎಂದರು. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗಾಗಿ ಸರಳ ಕ್ರೀಡೆಗಳನ್ನು ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಹಿರಿಯರು ಬಹಳ ಉತ್ಸಾಹದಿಂದ ಭಾಗವಹಿಸಿದ್ದರು. ಸಂಚಾಲಕ ಮಾಧವರಾವ್, ಹಿರಿಯ ವಕೀಲ ಸಿ.ಕೆ. ಸೀತಾರಾಮಯ್ಯ,ಡಾ. ಎಚ್.ಕೆ. ದಾಸ್, ಡಾ. ಪ್ರಶಾಂತಕುಮಾರಶೆಟ್ಟಿ  ಹಾಜರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT