ಉತ್ತರ ಕನ್ನಡ

ಬಸ್ ಸೌಕರ್ಯಕ್ಕಾಗಿ ಹೆದ್ದಾರಿಯಲ್ಲಿ ಪ್ರತಿಭಟನೆ

ಮುಂಡಗೋಡ: ಕೋಡಂಬಿ, ಜೋಡಿಕಟ್ಟಾ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಸೋಮವಾರ ತಾಲೂಕಿನ ಪಾಳಾ ಕ್ರಾಸ್ ಶಿರಸಿ-ಹುಬ್ಬಳ್ಳಿ ಹೆದ್ದಾರಿಯಲ್ಲಿ ಸುಮಾರು 1 ಗಂಟೆ ಕಾಲ ರಸ್ತೆ ತಡೆ ನಡೆಸಿದ ಘಟನೆ ನಡೆಯಿತು.
ನಿತ್ಯ ಮಾಧ್ಯಮಗಳಲ್ಲಿ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಅತ್ಯಾಚಾರ ಕೃತ್ಯ ಜನತೆಯಲ್ಲಿ ಭಯ ಸೃಷ್ಟಿಸಿದೆ. ಜೋಡಿಕಟ್ಟಾ ಗ್ರಾಮ ದಟ್ಟ ಅರಣ್ಯದ ನಡುವೆ ಇದ್ದು, ಯಾವುದೇ ಸಾರಿಗೆ ವ್ಯವಸ್ಥೆ ಇಲ್ಲ.  ತಕ್ಷಣ ಈ ಭಾಗಕ್ಕೆ ಸಾರಿಗೆ ಸಂಸ್ಥೆ ಬಸ್ ಬಿಡಬೇಕು ಎಂದು ಪ್ರತಿಭಟನೆ ನಡೆಸಿದರು.
ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ರಸ್ತೆ ತಡೆ ನಿಲ್ಲಿಸುವಂತೆ ಮನವಿ ಮಾಡಿದರು. ಇದಕ್ಕೆ ಬಗ್ಗದ ಪ್ರತಿಭಟನಾನಿರತರು, ಸಾರಿಗೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬರಬೇಕು ಎಂದು ಪಟ್ಟುಹಿಡಿದರು. ತದನಂತರ ಸಾರಿಗೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ವಾರದೊಳಗಾಗಿ ಬಸ್ ಬಿಡುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Mysuru Dasara: ನಾಡದೇವಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ; ಜಂಬೂ ಸವಾರಿಗೆ ಸಿಎಂ ಚಾಲನೆ

ಅಂಬೇಡ್ಕರ್ ಸಿದ್ಧಾಂತದಂತೆ ಬದುಕಿದ್ದೇವೆ: RSS ಕಾರ್ಯಕ್ರಮಕ್ಕೆ ಹೋಗಲ್ಲ- CJI ಗವಾಯಿ ತಾಯಿ

Asia Cup 2025: 'ಪಾಕಿಗಳ ನೋಡಿದ್ರೆ ಅವನ ರಕ್ತ ಕುದಿಯುತ್ತಿತ್ತು'; ಟೀಂ ಇಂಡಿಯಾ 'Hero' ಕೋಚ್ Kapil Dev Pandey ಮಾತು!

1st Test: ಮೊದಲ ದಿನದಾಟ ಅಂತ್ಯ, ವಿಂಡೀಸ್ ವಿರುದ್ಧ ಭಾರತ ಮೇಲುಗೈ, 41 ರನ್ ಹಿನ್ನಡೆ!

'RSS-BJP' ಸೈದ್ಧಾಂತಿಕತೆಯ ಹೃದಯದಲ್ಲಿ ಹೇಡಿತನವಿದೆ: ಕೊಲಂಬಿಯಾದಲ್ಲಿ ಗುಡುಗಿದ ರಾಹುಲ್ ಗಾಂಧಿ!

SCROLL FOR NEXT