ಉತ್ತರ ಕನ್ನಡ

ಮೊಬೈಲ್ ಸಂದೇಶ ಕೈ ಬಿಡಲು ಮನವಿ

ಕಾರವಾರ: ನ್ಯಾಯಬೆಲೆ ಅಂಗಡಿಯಲ್ಲಿ ದಿನಸಿ ಪಡೆಯಲು ಹಾಗೂ ಅಡುಗೆ ಅನಿಲವನ್ನು ಮುಂಗಡವಾಗಿ ಕಾಯ್ದಿರಿಸಲು ಮೊಬೈಲ್ ಸಂದೇಶವನ್ನು ಕಳಿಸುವ ವಿಧಾನವನ್ನು ಕೈ ಬಿಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಎಂ.ಟಿ. ರೇಜು ಅವರಿಗೆ ಕರ್ನಾಟಕ ದಲಿತ ರಕ್ಷಣಾ ವೇದಿಕೆ ಸದಸ್ಯರು ಸೋಮವಾರ ಮನವಿ ನೀಡಿದರು.
ಜಿಲ್ಲಾಧ್ಯಕ್ಷ ಎಲಿಷಾ ಎಲಕಪಾಟಿ, ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿ ಬಳಕೆದಾರರು ದಿನಸಿ ಪಡೆಯಲು ಹಾಗೂ ಸಿಲೆಂಡರ್ ಬಳಕೆ ಮಾಡುವ ಮೊಬೈಲ್ ಸಂದೇಶದ ಮುಂಗಡವಾಗಿ ಕಾಯ್ದಿರಿಸುವ ಯೋಜನೆ ರೂಪಿಸಲಾಗಿದೆ. ಇದರಿಂದ ಬಡವರಿಗೆ ಮತ್ತು ತಿಳಿವಳಿಕೆ ಇಲ್ಲದವರಿಗೆ ತೊಂದರೆಯಾಗುತ್ತಿದೆ. ನಗರದಲ್ಲಿ ಸಾಕಷ್ಟು ಜನರ ಬಳಿ ಮೊಬೈಲ್ ಇಲ್ಲ. ಅಲ್ಲದೇ ಅನಕ್ಷರರು ಬಹಳ ಸಂಖ್ಯೆಯಲ್ಲಿದ್ದಾರೆ.
ಕೆಲ ತಿಂಗಳಿನಿಂದ ಹಲವರು ಪಡಿತರ ಮತ್ತು ಗ್ಯಾಸ್ ಪಡೆಯದೇ ವಂಚಿತರಾಗಿದ್ದಾರೆ. ಹೀಗಾಗಿ ಈ ಹಿಂದಿನಂತೆ ಆಯಾ ಕಾರ್ಯಾಲಯದಲ್ಲಿ ಹಾಗೂ ತಹಸೀಲ್ದಾರ್ ಕಚೇರಿಯಲ್ಲಿ ಪಡಿತರ ಚೀಟಿ ನೊಂದಾಯಿಸಿಕೊಳ್ಳುವ ವಿಧಾನವನ್ನು ಅನುಸರಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಯಲ್ಲಪ್ಪಾ ವಡ್ಡರ್, ಬಸವರಾಜ ವಾಲ್ಮೀಕಿ, ರಾಜಾ ಕೆ. ವಡ್ಡರ್ ಪವಿತ್ರಾ ಮೇತ್ರಿ ಇದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Mysuru Dasara: ನಾಡದೇವಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ; ಜಂಬೂ ಸವಾರಿಗೆ ಸಿಎಂ ಚಾಲನೆ

ಅಂಬೇಡ್ಕರ್ ಸಿದ್ಧಾಂತದಂತೆ ಬದುಕಿದ್ದೇವೆ: RSS ಕಾರ್ಯಕ್ರಮಕ್ಕೆ ಹೋಗಲ್ಲ- CJI ಗವಾಯಿ ತಾಯಿ

Asia Cup 2025: 'ಪಾಕಿಗಳ ನೋಡಿದ್ರೆ ಅವನ ರಕ್ತ ಕುದಿಯುತ್ತಿತ್ತು'; ಟೀಂ ಇಂಡಿಯಾ 'Hero' ಕೋಚ್ Kapil Dev Pandey ಮಾತು!

1st Test: ಮೊದಲ ದಿನದಾಟ ಅಂತ್ಯ, ವಿಂಡೀಸ್ ವಿರುದ್ಧ ಭಾರತ ಮೇಲುಗೈ, 41 ರನ್ ಹಿನ್ನಡೆ!

'RSS-BJP' ಸೈದ್ಧಾಂತಿಕತೆಯ ಹೃದಯದಲ್ಲಿ ಹೇಡಿತನವಿದೆ: ಕೊಲಂಬಿಯಾದಲ್ಲಿ ಗುಡುಗಿದ ರಾಹುಲ್ ಗಾಂಧಿ!

SCROLL FOR NEXT