ಉತ್ತರ ಕನ್ನಡ

ರೈಲ್ವೆ ಬ್ರಿಜ್ ಬಳಿ ವ್ಯಕ್ತಿ ಶವ ಪತ್ತೆ: ಕೊಲೆ ಶಂಕೆ

ಭಟ್ಕಳ: ಇಲ್ಲಿನ ಮುಠ್ಠಳ್ಳಿ ರೈಲ್ವೆ ಬ್ರಿಜ್ ಬಳಿ ವ್ಯಕ್ತಿ ಶವ ಪತ್ತೆಯಾಗಿದ್ದು, ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೃತನನ್ನು  ಮಹಮ್ಮದ ಅಕ್ರಂ ಅಬ್ದುಲ್ ಸಮದ್ (32) ಎಂದು ಗುರುತಿಸಲಾಗಿದೆ. ಈತನ ತಲೆ ಮೇಲೆ ಕಲ್ಲು ಹಾಕಿ ಕೊಲೆ ಮಾಡಿರಬಹುದು ಎನ್ನಲಾಗಿದ್ದು, ಭಟ್ಕಳ ಸಿಪಿಐ ಪ್ರಶಾಂತ ನಾಯಕ ಹಾಗೂ ಗ್ರಾಮಾಂತರ ಠಾಣಾ ಪಿಎಸ್ಐ ಮಂಜುನಾಥ ಸ್ಥಳಕ್ಕೆ ಭೇಟಿ ನೀಡಿ ಶವದ ಪರಿಶೀಲನೆ ನಡೆಸಿದರು.  ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೃದ್ಧೆ ಆಭರಣ ಕಳವು
ಹೊನ್ನಾವರ: ನಿದ್ರಿಸುತ್ತಿದ್ದ ವೃದ್ಧೆಯ ಮೇಲೆ ಹಲ್ಲೆ ಮಾಡಿ, ಆಕೆಯ ಕೈಬಳೆ, ಸರ ಹಾಗೂ ಸೊಸೆಯ ಕೊರಳಲ್ಲಿದ್ದ ಸರ ಸೇರಿದಂತೆ ರು. 1.25 ಲಕ್ಷ ಮೌಲ್ಯದ ಆಭರಣ ದೋಚಿದ ಘಟನೆ ತಾಲೂಕಿನ ಚಂದಾವರದ ನೂರಾನಿ ಮೊಹಲ್ಲಾದಲ್ಲಿ ಸೋಮವಾರ ನಸುಕಿನ ವೇಳೆ ನಡೆದಿದೆ. ಈ ಕುರಿತು ಕೈರುನ್ನೀಸಾ ಹಮ್ಜಾ ಸಾಬ್ ಗನಿ (76) ಪೊಲೀಸರಿಗೆ ಈ ಕುರಿತು ದೂರು ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ಕಿತ್ತಾಟದ ನಡುವೆ ರಾಜ್ಯಕ್ಕೆ ಹವಾಮಾನ ಇಲಾಖೆ ಸಿಹಿ ಸುದ್ದಿ; ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಸಾಧ್ಯತೆ!

'ನಾನು ಯಂಗ್ ಹೃತಿಕ್ ರೋಷನ್ ತರಹ ಕಾಣುತ್ತೇನೆ ಅಂತ...': ಕಂಗನಾಗೆ CJP ವಕ್ತಾರ ಸೌರವ್ ದಾಸ್ ತಪರಾಕಿ!

30 ದಿನ ಜೈಲು ಶಿಕ್ಷೆ ಆದ್ರೆ ಸಿಎಂ, ಪ್ರಧಾನಿ ಹುದ್ದೆ ಕಳೆದುಕೊಳ್ಳಬೇಕೇ?; ಮಹತ್ವದ ಮಸೂದೆ ಪರಿಶೀಲನೆಗೆ ಸಂಸತ್ ಸಮಿತಿಗೆ ಮತ್ತಷ್ಟು ಕಾಲಾವಕಾಶ

ಕಾವೇರಿ: ಕರ್ನಾಟಕಕ್ಕೆ ಅನ್ಯಾಯಗಳ ಪರಂಪರೆ (ನೇರ ನೋಟ)

ಬಿಜೆಪಿಗೆ ಆಘಾತ! ಉಪಸಭಾಪತಿ ಎಂ.ಕೆ ಪ್ರಾಣೇಶ್ ಆಯ್ಕೆ ಅಸಿಂಧು; ಮರು ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ವಿಜಯಭೇರಿ