ಉತ್ತರ ಕನ್ನಡ

ಶಾಸಕ ಸಂಭಾಜಿ ಗಡಿಪಾರಿಗೆ ಜಯಕರ್ನಾಟಕ ಆಗ್ರಹ

ಹಳಿಯಾಳ: ಕರ್ನಾಟಕದ ಶಾಸಕನಾಗಿ ಕನ್ನಡ ವಿರೋಧಿ ಕೆಲಸ ಮಾಡುತ್ತಿರುವ ಶಾಸಕ ಸಂಭಾಜಿ ಪಾಟೀಲ ಅವರನ್ನು ಗಡಿಪಾರು ಮಾಡಬೇಕು ಹಾಗೂ ಕನ್ನಡ ನಾಡಿಗೆ ದ್ರೋಹ ಮಾಡುತ್ತಿರುವ ಎಂಇಎಸ್ ಸಂಘಟನೆ ನಿಷೇಧಿಸಬೇಕು ಎಂದು ಜಯಕರ್ನಾಟಕ ಸಂಘಟನೆ ಹಳಿಯಾಳ ತಾಲೂಕು ಕೇಂದ್ರ ಘಟಕ ಆಗ್ರಹಿಸಿದೆ. ಸೋಮವಾರ ಹಳಿಯಾಳದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಶಾಸಕ ಸಂಭಾಜಿ ಪಾಟೀಲ ಶವ ಯಾತ್ರೆಯೊಂದಿಗೆ ಮೆರವಣಿಗೆ ನಡೆಸಿ, ಶಿವಾಜಿ ವೃತ್ತದಲ್ಲಿ ಪ್ರತಿಕೃತಿ ದಹನ ಮಾಡಿ ರಸ್ತೆ ತಡೆ ನಡೆಸಿದರು. ನಂತರ ತಹಸೀಲ್ದಾರ್ ಕಚೇರಿಗೆ ತೆರಳಿದ ಸಂಘಟಕರು ಮುಖ್ಯಮಂತ್ರಿಗೆ ಬರೆದ ಮನವಿ ಸಲ್ಲಿಸಿದರು. ಜಯಕರ್ನಾಟಕ ಸಂಘಟನೆ ಹಳಿಯಾಳ ತಾಲೂಕು ಯುವ ಘಟಕದ ಅಧ್ಯಕ್ಷ ವಿಲಾಸ ಕಣಗಲಿ, ಪದಾಧಿಕಾರಿಗಳಾದ ಶಿರಾಜ ಮುನವಳ್ಳಿ, ಮಹೇಶ ಹುಲಕೊಪ್ಪ, ಟೆಂಪೋ ಮಾಲೀಕ-ಚಾಲಕರ ಸಂಘದವರು, ಜೈಭೀಮ ಸಂಘಟನೆ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran war: ಇರಾನ್ ಹಡಗು ವಶಕ್ಕೆ ಪಡೆದ ಅಮೆರಿಕಾ; ಪ್ರತೀಕಾರ ತೀರಿಸಿಕೊಳ್ಳುತ್ತೇವೆಂದ ಟೆಹ್ರಾನ್, ಸಂಘರ್ಷ ಮತ್ತೆ ಉಲ್ಬಣ

ಹೊರ್ಮುಸ್, ಹಣದುಬ್ಬರ, ಮತ್ತು ಚುನಾವಣೆಗಳು: ಸಮಸ್ಯೆಯ ಸುಳಿಯಲ್ಲಿ ಟ್ರಂಪ್ (ಜಾಗತಿಕ ಜಗಲಿ)

ಪ್ರಧಾನಿ ಮೋದಿ ಜೊತೆಗೆ ಗುಟ್ಟಿನ ಮಾತುಕತೆ: ಕೊನೆಗೂ ಬಹಿರಂಗ! ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ತಾಂತ್ರಿಕ ದೋಷ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ, ಪ್ರಯಾಣಿಕರಿಗೆ ಸಾವಿನ ದರ್ಶನ ಮಾಡಿಸಿದ FLY91 ವಿಮಾನ..!

ಥೈಲ್ಯಾಂಡ್ ರೆಸ್ಟೋರೆಂಟ್‌ನಲ್ಲಿ ಜನಾಂಗೀಯ ನಿಂದನೆ: ಪೊಲೀಸರಿಗೆ ದೂರು ಕೊಟ್ಟ ಭಾರತೀಯ ಪ್ರವಾಸಿಗ! Video

SCROLL FOR NEXT