ಸಂಪಾದಕೀಯ

ಹುಟ್ಟಿನಿಂದ ಬರುವುದೂ ಅಲ್ಲ ಮುಟ್ಟಿನಿಂದ ಹೋಗುವುದೂ ಇಲ್ಲ

ಶೃಂಗೇರಿ ಮಠಾಧೀಶರಾಗಿದ್ದ ವಿದ್ಯಾತೀರ್ಥ ಸ್ವಾಮೀಜಿ ಮಂಗಳೂರು ಬಳಿಯ ಪಣಂಬೂರಿನಲ್ಲಿ ...

ಶೃಂಗೇರಿ ಮಠಾಧೀಶರಾಗಿದ್ದ ವಿದ್ಯಾತೀರ್ಥ ಸ್ವಾಮೀಜಿ ಮಂಗಳೂರು ಬಳಿಯ ಪಣಂಬೂರಿನಲ್ಲಿ ಬಿಡಾರ ಹೂಡಿದ್ದರು. ಬಹಳಷ್ಟು ಜನ ಸ್ವಾಮೀಜಿಯವರ ದರ್ಶನಾಕಾಂಕ್ಷಿಗಳಾಗಿ ಬಂದು ಹೋಗಿ ಮಾಡುತ್ತಿದ್ದರು. ಒಬ್ಬಾತ ಬಹಳ ದೂರದಲ್ಲಿಯೇ ನಿಂತಿದ್ದ. ಅವನ ಮುಖದಲ್ಲಿ ದುಃಖ ಮಡುಗಟ್ಟಿತ್ತು. ಅವನನ್ನು ನೋಡಿದ ಸ್ವಾಮೀಜಿಯವರು ಅವನನ್ನು ಹತ್ತಿರ ಕರೆಸಿಕೊಂಡರು. ಆತ ಅಳುತ್ತಿದ್ದ. ಸ್ವಾಮಿಗಳು ಅವನೇಕೆ ಅಳುತ್ತಿದ್ದಾನೆಂದು ವಿಚಾರಿಸಿದರು. ಅವನ ಅಳು ಜೋರಾದಾಗ, ಅವನಿಗೆ ಸಮಾಧಾನ ಹೇಳಿದ್ದೇ ಅಲ್ಲದೆ, ಅವನಿಗೆ ಯಾವ ಕಷ್ಟ ಬಂದಿದೆ ಎಂದು ವಿಚಾರಿಸಿದರು. ಅವನು ಬಿಕ್ಕುತ್ತಲೇ, "ತಮ್ಮ ದರ್ಶನಕ್ಕೆ ನಾನು ಅನರ್ಹ" ಎಂದ. ಅದನ್ನು ಕೇಳಿ ಸ್ವಲ್ಪ ವಿವರವಾಗಿ ಹೇಳಲು ಅವನಿಗೆ ಆದೇಶಿಸಿದರು. ಆಗ ಅವನು ನಿಧಾನವಾಗಿ, ತಾನು ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದವನಾಗಿದ್ದು, ಒಮ್ಮೆ ಯಾವುದೋ ಕಾರಣಕ್ಕಾಗಿ ನೆರೆಯ ಮುಸಲ್ಮಾನನೊಡನೆ ಜಗಳವಾಗಿ, ಜಗಳದಲ್ಲಿ ಆತ ತನ್ನ ಮೇಲೆ ಉಗಿದನೆಂದೂ, ಅಲ್ಲಿಂದ ತನ್ನ ಬ್ರಾಹ್ಮಣತ್ವ ಕಳೆದುಕೊಂಡು ಜಾತಿಭ್ರಷ್ಟನಾಗಿರುವುದಾಗಿಯೂ, ಎಲ್ಲರೂ ತನ್ನನ್ನು ಬ್ರಾಹ್ಮಣ ಸಮಾಜದಿಂದ ದೂರವಿಟ್ಟಿರುವುದಾಗಿಯೂ ತಿಳಿಸಿದ. ಕ್ಷುಲ್ಲಕ ಕಾರಣದಿಂದ ಹೀಗೆ ಒಬ್ಬ ವ್ಯಕ್ತಿಗೆ ಬಹಿಷ್ಕಾರ ಹಾಕಿದ್ದು ಸ್ವಾಮೀಜಿಗೆ ಸರಿಯೆನಿಸಲಿಲ್ಲ. ಧರ್ಮಸೂಕ್ಷ್ಮವನ್ನು ಹೀಗೆ ತಿರುಚಿ ವೃಥಾಪವಾದ ಮಾಡಿದ ಸಮಾಜದ ಬಗ್ಗೆ ಅವರಿಗೆ ಅಸಮಾಧಾನವೂ ಆಯಿತು. "ಬೇರೆ ಜಾತಿಯವರು ಉಗಿದರೆ, ಜಾತಿಭ್ರಷ್ಠನಾಗುತ್ತಾನೆಂದು ಹೇಳಿದವರು ಯಾರು? ಹುಟ್ಟಿನಿಂದ ಯಾರೂ ಬ್ರಾಹ್ಮಣರಾಗುವುದಿಲ್ಲ., ಮುಟ್ಟಿನಿಂದ ಹೋಗುವುದೂ ಇಲ್ಲ. ಬ್ರಹ್ಮೋಪದೇಶ ಮಾಡಿಕೊಂಡು ಗಾಯತ್ರಿ ಉಪಾಸನೆ ಮಾಡುವ ಯಾರೇ ಆಗಲಿ ಬ್ರಾಹ್ಮಣನಾಗುತ್ತಾನೆ. ಇಂದಿನಿಂದಲೇ ನೀನು ಗಾಯತ್ರಿ ಉಪಾಸನೆ ಮಾಡುವುದನ್ನು ಪ್ರಾರಂಭಿಸು" ಎಂದು ಸಮಾಧಾನ ಪಡಿಸಿದರು. ಈ ಪ್ರಸಂಗವನ್ನು ತ.ರಾ.ಸು ಅವರಿಗೆ ಸ್ವತಃ ಸ್ವಾಮೀಜಿಯವರೇ ಹೇಳಿದರೆಂದು ಅವರು ತಮ್ಮ "ಸ್ನೇಹ ಸಮನ್ವಯ" ಕೃತಿಯಲ್ಲಿ ಉಲ್ಲೇಖಿಸಿದ್ದಾರೆ.


 -ಪ್ರೊ. ಎಂ. ಎನ್. ಸುಂದರರಾಜ್, ಶಿವಮೊಗ್ಗ
rajsundar1957@gmail.com


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿ.ಕೆ ಶಿವಕುಮಾರ್; ಮಧ್ಯಾಹ್ನ 2.30ಕ್ಕೆ ರಾಜೀನಾಮೆ; ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT