ಕಣ್ಣೂರು: ಕೇರಳದ ಕಣ್ಣೂರು ಲೋಕಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಅಸಾಮಾನ್ಯ ಅತಿಥಿಯೊಬ್ಬರು ಕಾಣಿಸಿಕೊಂಡಿದ್ದರಿಂದ ಕೆಲಕಾಲ ಮತದಾನವನ್ನು ಸ್ಥಗಿತಗೊಳಿಸಲಾಗಿತ್ತು.
ಮೇಯಿಲ್ ಕಂದಾಕ್ಕೈ ಮತಗಟ್ಟೆಯ ವಿವಿಪ್ಯಾಟ್ ಯಂತ್ರದೊಳಗೆ ದೊಡ್ಡ ಗಾತ್ರದ ಹಾವೊಂದು ಪ್ರತ್ಯಕ್ಷವಾಗಿದೆ. ಇದರಿಂದಾಗಿ ಮತಗಟ್ಟೆಯಲ್ಲಿದ್ದ ಅಧಿಕಾರಿಗಳು ಹಾಗೂ ಮತದಾರರು ಆತಂಕಕ್ಕೊಳಗಾದರು.
ಆದಾಗ್ಯೂ, ಉರಗ ತಜ್ಞರದಿಂದ ಈ ಹಾವನ್ನು ಹಿಡಿದು , ಮತದಾನಕ್ಕೆ ಅವಕಾಶ ಮಾಡಿಕೊಡಲಾಯಿತು. ಕಣ್ಣೂರು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಪಿಕೆ ಶ್ರೀಮತಿ ಸಿಪಿಐ- ಎಂ- ಎಲ್ ಡಿಎಫ್ ಅಭ್ಯರ್ಥಿಯಾಗಿದ್ದಾರೆ.
ಕೆ ಸುರೇಂದ್ರನ್ ( ಕಾಂಗ್ರೆಸ್- ಯುಡಿಎಫ್) ಸಿ ಕೆ ಪದ್ಮನಾಭನ್ ( ಬಿಜೆಪಿ- ಎನ್ ಡಿಎ) ಅಭ್ಯರ್ಥಿಯಾಗಿದ್ದು, ತಮ್ಮ ಅದೃಷ್ಟ ಪರೀಕ್ಷೆಗೆ ಪ್ರಯತ್ನಿಸುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಬೆಳಗ್ಗೆಯಿಂದಲೂ ಮತದಾನ ನಡೆಯುತ್ತಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos